AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್ ಜೈನ್‌ಗೆ ಜಾಮೀನು

ಪಿಯೂಷ್ ಜೈನ ಅವರನ್ನು ಡಿಸೆಂಬರ್ 26, 2021 ರಂದು ಸಿಬಿಐಸಿ ಅಧಿಕಾರಿಗಳು ಬಂಧಿಸಲಾಯಿತು, ಅವರ ನಿವಾಸದ ಮೇಲೆ ಸಿಬಿಐಸಿ ದಾಳಿ ನಡೆದು ಭಾರಿ ಹಣವನ್ನು ವಶಪಡಿಸಿಕೊಳ್ಳಲು ಕಾರಣವಾಯಿತು.

ಉತ್ತರ ಪ್ರದೇಶದ ಸುಗಂಧ ದ್ರವ್ಯ ವ್ಯಾಪಾರಿ ಪಿಯೂಷ್ ಜೈನ್‌ಗೆ ಜಾಮೀನು
Piyush Jain
TV9 Web
| Edited By: |

Updated on:Sep 09, 2022 | 9:59 AM

Share

ಉತ್ತರ ಪ್ರದೇಶ: ಕಳೆದ ವರ್ಷ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ಅವರ ಆವರಣದ ಮೇಲೆ ಸಿಬಿಐಸಿ ದಾಳಿ ನಡೆಸಿ ಸುಮಾರು 200 ಕೋಟಿ ರೂಪಾಯಿ ನಗದು ಮತ್ತು 23 ಕೆಜಿ ಚಿನ್ನವನ್ನು ಸಿಬಿಐಸಿ ವಶಪಡಿಸಿಕೊಂಡಿದ್ದು, ಎಂಟು ತಿಂಗಳ ಸೆರೆವಾಸ ಅನುಭವಿಸಿ ಇದೀಗ ಅವರಿಗೆ ಗುರುವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಅವರ ಬಂಧನವು ಗದ್ದಲಕ್ಕೆ ಕಾರಣವಾಗಿತ್ತು, ಕಾನ್ಪುರ ಮೂಲದ ಸುಗಂಧ ದ್ರವ್ಯ ವ್ಯಾಪಾರಿಯನ್ನು ಬಿಜೆಪಿಯು ಸಮಾಜವಾದಿ ಪಕ್ಷದ (ಎಸ್‌ಪಿ) ಸ್ನೇಹಿತ ಎಂದು ಕರೆದಿದೆ. ಆದರೆ ಜೈನ್ ಬಿಜೆಪಿಗೆ ಸೇರಿದವರು ಎಂದು ವಿರೋಧ ಪಕ್ಷ ಆರೋಪಿಸಿತ್ತು.

ವಿಶೇಷ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ (ಸಿಜೆಎಂ) ಬಿಡುಗಡೆ ಮಾಡಿದ ಆದೇಶದ ನಂತರ ಪಿಯೂಷ್ ಜೈನ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ ಎಂದು ಕಾನ್ಪುರ ಜೈಲು ಅಧೀಕ್ಷಕ ಬಿಧು ದತ್ ಪಾಂಡೆ ಹೇಳಿದ್ದಾರೆ.

ಕಳೆದ ವಾರ ಅಲಹಾಬಾದ್ ಹೈಕೋರ್ಟ್ ಜೈನ್ ಅವರ ಜಾಮೀನು ಅರ್ಜಿಯನ್ನು ಅಂಗೀಕರಿಸಿದ ನಂತರ ವಿಶೇಷ ಸಿಜೆಎಂ ಬಿಡುಗಡೆ ಪರವಾನಗಿಯನ್ನು ನೀಡಿತು. ಅವರ ಕುಟುಂಬ ಸದಸ್ಯರು ಮಾಡಿದ ತಲಾ 10 ಲಕ್ಷ ರೂ.ಗೆ ಇಬ್ಬರ ಶ್ಯೂರಿಟಿ ಸಲ್ಲಿಸುವಂತೆ ವಿಶೇಷ ಸಿಜೆಎಂ ಸೂಚಿಸಿದರು.

ಡಿಸೆಂಬರ್ 26 ರಂದು ಜೈನ್ ಅವರ ನಿವಾಸದ ಮೇಲೆ ನಡೆದ ದಾಳಿಯ ನಂತರ ಜಿಎಸ್‌ಟಿ ಗುಪ್ತಚರ ನಿರ್ದೇಶನಾಲಯ (ಡಿಜಿಜಿಐ) ಭಾರಿ ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡ ನಂತರ ಅವರನ್ನು ಬಂಧಿಸಲಾಯಿತು.

Published On - 9:57 am, Fri, 9 September 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ