AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bajrang Dal: ಹೈದರಾಬಾದ್‌ ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಬಜರಂಗದಳದ ಕಾರ್ಯಕರ್ತರ ಬಂಧನ

ಹೈದರಾಬಾದ್‌ನಲ್ಲಿ ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಕಾಂಗ್ರೆಸ್​​ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್​​ ಮಾಡುವ ಬಗ್ಗೆ ತಿಳಿಸಿರುವ ಬಗ್ಗೆ ಹಿಂದು ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿದೆ.

Bajrang Dal: ಹೈದರಾಬಾದ್‌ ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ಮಾಡಿದ ಬಜರಂಗದಳದ ಕಾರ್ಯಕರ್ತರ  ಬಂಧನ
ಬಜರಂಗದಳದ ಕಾರ್ಯಕರ್ತರ ಬಂಧನ
ಅಕ್ಷಯ್​ ಪಲ್ಲಮಜಲು​​
|

Updated on:May 03, 2023 | 2:25 PM

Share

ಹೈದರಾಬಾದ್: ಹೈದರಾಬಾದ್‌ನಲ್ಲಿ (Hyderabad) ಕಾಂಗ್ರೆಸ್​​​ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಬಜರಂಗದಳ(Bajrang Dal) ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮೇ 10ರಂದು ಕರ್ನಾಟಕ ವಿಧಾನಸಭಾ ಚುನಾವಣೆ ನಡೆಯಲಿದ್ದು, ನೆನ್ನೆ (ಮೇ 2) ಕಾಂಗ್ರೆಸ್​​ ತನ್ನ ಪ್ರಣಾಳಿಕೆಯನ್ನು ಬಿಡಗಡೆ ಮಾಡಿದೆ, ಈ ಪ್ರಣಾಳಿಕೆಯಲ್ಲಿ ಸಮಾಜದಲ್ಲಿ ಜಾತಿ ಮತ್ತು ಧರ್ಮದ ಆಧಾರದಲ್ಲಿ ದ್ವೇಷ ಮಾಡುವ ಸಂಘಟನೆಗಳನ್ನು ಬ್ಯಾನ್​​ ಮಾಡಲಾಗುವುದು ಎಂದು ಹೇಳಿದೆ. ಈ ಕಾರಣಕ್ಕೆ ಹೈದರಾಬಾದ್‌ನ ಕಾಂಗ್ರೆಸ್ ಕಚೇರಿ ಎದುರು ಬಜರಂಗದಳದ ಕಾರ್ಯಕರ್ತರು ಪೊಲೀಸರು ಬಂಧಿಸಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಹಂಚಿಕೊಂಡಿರುವ ವಿಡಿಯೋದಲ್ಲಿ ಬಜರಂಗದಳದ ಕಾರ್ಯಕರ್ತರು ‘ಜೈ ಶ್ರೀ ರಾಮ್’ ಘೋಷಣೆಯನ್ನು ಕೂಗಿದ್ದಾರೆ. ನಂತರ ಪೊಲೀಸರು ಅವರನ್ನು ಬಂಧಿಸಿದ್ದಾರೆ. ರಾಜ್ಯದಲ್ಲಿ ಮೇ 10ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಇದರಲ್ಲಿ ಬಜರಂಗದಳ, ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಬ್ಯಾನ್​​ ಮಾಡಲಾಗುವುದು ಮತ್ತು ಇಂತಹ ಕೃತ್ಯಗಳಲ್ಲಿ ಭಾಗಿಯಾದ ವ್ಯಕ್ತಿಗಳನ್ನು, ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತನ್ನ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ:ಬಜರಂಗದಳ ನಿಷೇಧ: ಕಾಂಗ್ರೆಸ್​​ಗೆ​ ಚುರುಕು ಮುಟ್ಟಿಸಲು ಹಿಂದೂ ಸಂಘಟನೆಗಳಿಂದ ಹನುಮಾನ್ ಚಾಲೀಸಾ ಪಠಿಸಲು ಕರೆ

ಜಾತಿ ಅಥವಾ ಧರ್ಮದ ಆಧಾರದ ಮೇಲೆ ಸಮುದಾಯಗಳ ನಡುವೆ ದ್ವೇಷವನ್ನು ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ದೃಢ ಮತ್ತು ನಿರ್ಣಾಯಕ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷವು ಬದ್ಧವಾಗಿದೆ. ಕಾನೂನು ಮತ್ತು ಸಂವಿಧಾನವು ಪವಿತ್ರವಾಗಿದೆ. ಬಜರಂಗದಳ, ಪಿಎಫ್ಐ ಮತ್ತು ಇತರ ವ್ಯಕ್ತಿಗಳು ಮತ್ತು ಸಂಘಟನೆಗಳು ಕಾನೂನಿನ ವಿರುದ್ಧ ಹೋಗುತ್ತಿದೆ. ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತರ ನಡುವೆ ದ್ವೇಷ ಅಥವಾ ದ್ವೇಷವನ್ನು ಉತ್ತೇಜಿಸುವ ಅಂತಹ ಯಾವುದೇ ಸಂಘಟನೆಗಳ ಮೇಲೆ ನಿಷೇಧ ಹೇರುವುದು ಸೇರಿದಂತೆ ಕಾನೂನಿನ ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಕಾಂಗ್ರೆಸ್​​ ಪ್ರಣಾಳಿಕೆಯ ಕುರಿತು ಪ್ರಧಾನಿ ಮೋದಿ ಸೇರಿದಂತೆ ಅನೇಕ ಬಿಜೆಪಿ ನಾಯಕರು ಕಾಂಗ್ರೆಸ್​​ ವಿರುದ್ಧ ಕಿಡಿಕಾರಿದ್ದಾರೆ. ಮೋದಿ ಇಂದು ಮಂಗಳೂರಿನ ರ್ಯಾಲಿಯಲ್ಲಿ ಮಾತನಾಡಿ ಮೊದಲು ಕಾಂಗ್ರೆಸ್ ಪಕ್ಷವು ಭಗವಾನ್ ರಾಮನಿಗೆ ಬೀಗ ಹಾಕಿತು ಮತ್ತು ಈಗ ಅವರು “ಜೈ ಬಜರಂಗ ಬಲಿ” ಎಂದು ಕೂಗುವವರಿಗೆ ಬೀಗ ಹಾಕಲು ಶಪಥ ಮಾಡುತ್ತಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್‌ಗೆ ರಾಮನ ಸಮಸ್ಯೆ ಇತ್ತು, ಈಗ ‘ಜೈ ಬಜರಂಗ ಬಲಿ’ ಎಂದು ಹೇಳುವವರಿಗೆ ತೊಂದರೆಯಾಗಿರುವುದು ದೇಶದ ದೌರ್ಭಾಗ್ಯ ಎಂದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:24 pm, Wed, 3 May 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ