AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೇಸ್ಟ್​ ಆಫ್​ ಇಂಡಿಯಾ ರೆಸ್ಟೋರೆಂಟ್​​ನಲ್ಲಿ ಪಾಕಿಸ್ತಾನಿ ಆಹಾರ ಮೇಳ; ಬ್ಯಾನರ್​ ಹಾಕುತ್ತಿದ್ದಂತೆ ಬೆಂಕಿ ಇಟ್ಟ ಭಜರಂಗದಳ

ಮಾಧ್ಯಮದವರೊಂದಿಗೆ ಮಾತನಾಡಿದ ಭಜರಂಗ ದಳದ ದಕ್ಷಿಣ ಗುಜರಾತ್​ ಅಧ್ಯಕ್ಷ ದೇವಿಪ್ರಸಾದ್​ ದುಬೆ, ಇಂಥ ಉತ್ಸವಗಳನ್ನೆಲ್ಲ ಯಾವುದೇ ರೆಸ್ಟೋರೆಂಟ್​​ನಲ್ಲೂ ನಡೆಸಲು ಬಿಡುವುದಿಲ್ಲ ಎಂದಿದ್ದಾರೆ.

ಟೇಸ್ಟ್​ ಆಫ್​ ಇಂಡಿಯಾ ರೆಸ್ಟೋರೆಂಟ್​​ನಲ್ಲಿ ಪಾಕಿಸ್ತಾನಿ ಆಹಾರ ಮೇಳ; ಬ್ಯಾನರ್​ ಹಾಕುತ್ತಿದ್ದಂತೆ ಬೆಂಕಿ ಇಟ್ಟ ಭಜರಂಗದಳ
ಬ್ಯಾನರ್​ ಕಿತ್ತಿರುವ ದೃಶ್ಯ
TV9 Web
| Edited By: |

Updated on:Dec 14, 2021 | 8:38 AM

Share

ಪಾಕಿಸ್ತಾನಿ ಆಹಾರೋತ್ಸವ (Pakistani Food Festival) ಎಂದು ದೊಡ್ಡದಾಗಿ ಬರೆದು ಹಾಕಲಾಗಿದ್ದ ಬ್ಯಾನರ್​​ನ್ನು ಕೆಳಗಿಳಿಸಿ, ಅದಕ್ಕೆ ಬೆಂಕಿ ಹಚ್ಚಿದ ಘಟನೆ ಗುಜರಾತ್​ನ ಸೂರತ್​ನಲ್ಲಿ ನಡೆದಿದೆ. ಹೀಗೆ ಪಾಕ್​ ಆಹಾರೋತ್ಸವದ ಬ್ಯಾನರ್​ಗೆ ಬೆಂಕಿ ಹಾಕಿದ್ದು ಬಜರಂಗದಳದ ಕಾರ್ಯಕರ್ತರು. ಹಾಗೇ, ರೆಸ್ಟೋರೆಂಟ್​ವೊಂದು ತಾನು ಪಾಕಿಸ್ತಾನಿ ಆಹಾರದ ಬಗ್ಗೆ ಪ್ರಚಾರ ಮಾಡುತ್ತಿರುವುದಾಗಿ ತಪ್ಪು ಒಪ್ಪಿಕೊಂಡಿದೆ ಎಂದು ಬಲಪಂಥೀಯ ನಾಯಕರೊಬ್ಬರು ತಿಳಿಸಿದ್ದಾರೆ.  

ಸೂರತ್​ನ ರಿಂಗ್​ರೋಡ್​​ ಪ್ರದೇಶದಲ್ಲಿ ಟೇಸ್ಟ್ ಆಫ್​ ಇಂಡಿಯಾ ರೆಸ್ಟೋರೆಂಟ್​ ಡಿಸೆಂಬರ್​ 12-22ರವರೆಗೆ ಆಹಾರ ಮೇಳವನ್ನು ಆಯೋಜಿಸಿತ್ತು. ಆದರೆ ಅದಕ್ಕೆ ಪಾಕಿಸ್ತಾನಿ ಆಹಾರೋತ್ಸವ ಎಂಬ ದೊಡ್ಡದಾದ ಬ್ಯಾನರ್ ಹಾಕಲಾಗಿತ್ತು. ಅದನ್ನು ನೋಡುತ್ತಿದ್ದಂತೆ ಭಜರಂಗದಳದ ಕಾರ್ಯಕರ್ತರು ಕೆಂಡಾಮಂಡಲರಾಗಿದ್ದಾರೆ. ಕೂಡಲೇ ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಗೆ ತೆರಳಿ ಬ್ಯಾನರ್​​ನ್ನು ಕಿತ್ತೆಸೆದಿದ್ದಾರೆ. ನಂತರ ಅದಕ್ಕೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಅವರು ಜೈ ಶ್ರೀರಾಮ್​ ಮತ್ತು ಹರಹರ ಮಹದೇವ್​ ಎಂದು ಘೋಷಣೆ ಕೂಗುತ್ತಿದ್ದರು.

ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಭಜರಂಗ ದಳದ ದಕ್ಷಿಣ ಗುಜರಾತ್​ ಅಧ್ಯಕ್ಷ ದೇವಿಪ್ರಸಾದ್​ ದುಬೆ, ಇಂಥ ಉತ್ಸವಗಳನ್ನೆಲ್ಲ ಯಾವುದೇ ರೆಸ್ಟೋರೆಂಟ್​​ನಲ್ಲೂ ನಡೆಸಲು ಬಿಡುವುದಿಲ್ಲ. ಆಹಾರ ಮೇಳ ಆಯೋಜಿಸಿದ್ದ ರೆಸ್ಟೋರೆಂಟ್ ಕೂಡ ತನ್ನ ತಪ್ಪನ್ನು ಒಪ್ಪಿಕೊಂಡಿದೆ ಎಂದು ಹೇಳಿದ್ದಾರೆ.  ಹಾಗೇ ಈ ಟೇಸ್ಟ್ ಆಫ್​ ಇಂಡಿಯಾ ರೆಸ್ಟೋರೆಂಟ್​​ ನಡೆಸುತ್ತಿರುವ ಶುಗರ್​ ಎನ್​ ಸ್ಪೈಸ್​ ರೆಸ್ಟೋರೆಂಟ್​ನ ಮಾಲೀಕ ಸಂದೀಪ್​ ದಾವರ್​, ನಾವು ಮೊಘಲಾಯಿ ಪಾಕಪದ್ಧತಿಯ ಆಹಾರವನ್ನು ಕೊಡುವುದನ್ನು ಮುಂದುವರಿಸುತ್ತೇವೆ. ಆದರೆ ಪಾಕಿಸ್ತಾನ ಎಂಬ ಹೆಸರನ್ನು ತೆಗೆದುಹಾಕುತ್ತೇವೆ. ಯಾಕೆಂದರೆ ಇದು ಹಲವರ ಭಾವನೆಗಳನ್ನು ನೋಯಿಸುತ್ತದೆ ಎಂಬುದು ನಮಗೆ ಅರ್ಥವಾಗುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಎಮ್ ಜಿ ಮೋಟಾರ್ ಭಾರತೀಯ ಮಾರ್ಕೆಟ್​​ಗೆ ಸೂಕ್ತವೆನಿಸುವ ಇಲೆಕ್ಟ್ರಿಕ್ ಕಾರನ್ನು ಇನ್ನೆರಡು ವರ್ಷಗಳಲ್ಲಿ ಲಾಂಚ್ ಮಾಡಲಿದೆ

Published On - 8:37 am, Tue, 14 December 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ