AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದು ಹುಡುಗಿಯರಿಗೆ ದೌರ್ಜನ್ಯ ಎಸಗಿದರೆ, ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತೇನೆ ಎಂದಿದ್ದ ಬಜರಂಗ ಮುನಿಗೆ ಜಾಮೀನು

ಏಪ್ರಿಲ್​ 2ರಂದು ಬಜರಂಗ ಮುನಿ ದಾಸ್​ ಭಾಷಣ ಮಾಡಿದ್ದರು.  ಮಸೀದಿಯೊಂದರ ಹೊರಗೆ ನಿಂತು ಮಾತನಾಡಿದ್ದ ಅವರು ಮುಸ್ಲಿಂ ಸಮುದಾಯವನ್ನು ಜಿಹಾದಿಗಳು ಎಂದು ಉಲ್ಲೇಖಿಸಿದ್ದರು.

ಹಿಂದು ಹುಡುಗಿಯರಿಗೆ ದೌರ್ಜನ್ಯ ಎಸಗಿದರೆ,  ಮುಸ್ಲಿಂ ಮಹಿಳೆಯರ ಮೇಲೆ  ಅತ್ಯಾಚಾರ ಮಾಡುತ್ತೇನೆ ಎಂದಿದ್ದ ಬಜರಂಗ ಮುನಿಗೆ ಜಾಮೀನು
ಬಜರಂಗ ಮುನಿ ದಾಸ್​
TV9 Web
| Edited By: |

Updated on:Apr 24, 2022 | 3:59 PM

Share

ಉತ್ತರ ಪ್ರದೇಶದ ಸೀತಾಪುರದಲ್ಲಿ ದ್ವೇಷ ಭಾಷಣ ಮಾಡಿದ್ದಲ್ಲದೆ, ಮುಸ್ಲಿಂ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ ಹಾಕಿ, ಜೈಲು ಸೇರಿದ್ದ ಮಹಾಋಷಿ ಶ್ರೀ ಲಕ್ಷ್ಮಣ ದಾಸ ಉದಾಸಿ ಆಶ್ರಮದ ಬಜರಂಗ ಮುನಿ ದಾಸ್​ಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಶನಿವಾರ ಜಿಲ್ಲಾ ನ್ಯಾಯಾಧೀಶ ಸಂಜಯ್​ ಕುಮಾರ್​ ಅವರು ಬಜರಂಗ ಮುನಿಗೆ ಜಾಮೀನು ನೀಡಿದ್ದರು. ಅವರು ಇಂದು ಮುಂಜಾನೆ ಜೈಲಿನಿಂದ ಹೊರಬಂದಿದ್ದಾರೆ.   ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಅವರು, ನಾನು ಏನು ಮಾತನಾಡಿದ್ದೆನೋ ಅದರ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ. ನಾನು ನನ್ನ ಧರ್ಮವನ್ನು ಮತ್ತು ಧರ್ಮದ ಮಹಿಳೆಯ ಸುರಕ್ಷತೆಗಾಗಿ ಹೋರಾಡುತ್ತೇನೆ. ಎಷ್ಟು ಬಾರಿ ಜೈಲಿಗೆ ಹೋಗಲೂ ಹಿಂಜರಿಯುವುದಿಲ್ಲ. ಯಾರೇ ದಾಳಿ ಮಾಡಿದರೂ ಹೆದರುವುದಿಲ್ಲ ಎಂದಿದ್ದಾರೆ. 

ಏಪ್ರಿಲ್​ 2ರಂದು ಬಜರಂಗ ಮುನಿ ದಾಸ್​ ಭಾಷಣ ಮಾಡಿದ್ದರು.  ಮಸೀದಿಯೊಂದರ ಹೊರಗೆ ನಿಂತು ಮಾತನಾಡಿದ್ದ ಅವರು ಮುಸ್ಲಿಂ ಸಮುದಾಯವನ್ನು ಜಿಹಾದಿಗಳು ಎಂದು ಉಲ್ಲೇಖಿಸಿದ್ದರು. ಹಾಗೇ, ಆ ಸಮುದಾಯದಿಂದ ಹಿಂದು ಹುಡುಗಿಯರು ದೌರ್ಜನ್ಯಕ್ಕೆ ಒಳಗಾದರೆ ನಾನೇ ಸ್ವತಂ ಹಿಜಾದಿ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುತ್ತೇನೆ ಎಂದು ಮುನಿ ದಾಸ್ ಭಾಷಣದಲ್ಲಿ ಹೇಳಿದ್ದರು. ಈ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿ, ವಿವಾದ ಸೃಷ್ಟಿಸಿತ್ತು. ಅದಾದ ಬಳಿಕ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ನಾನು ಈ ಬಗ್ಗೆ ಕ್ಷಮೆ ಕೇಳುತ್ತೇನೆ ಎಂದು ಮುನಿ ದಾಸ್​ ಹೇಳಿದ ವಿಡಿಯೋವೂ ವೈರಲ್ ಆಗಿತ್ತು. ರಾಮ್​ ನರೇಶ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿ, ಏಪ್ರಿಲ್​ 13ರಂದು ಬಜರಂಗ ಮುನಿದಾಸ್​ ಅವರನ್ನು ಅರೆಸ್ಟ್ ಮಾಡಲಾಗಿತ್ತು.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಯತ್ನಾಳ್ ಮಾತಾಡಿದಂತೆ ನಾನು ಮಾತಾಡಲು ಬರಲ್ಲ, ನಾನು ಸರ್ಕಾರದ ಭಾಗ; ಸಚಿವ ಮುರಗೇಶ ನಿರಾಣಿ

Published On - 3:11 pm, Sun, 24 April 22

ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್