AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದು ಹುಡುಗಿಯರಿಗೆ ದೌರ್ಜನ್ಯ ಎಸಗಿದರೆ, ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತೇನೆ ಎಂದಿದ್ದ ಬಜರಂಗ ಮುನಿಗೆ ಜಾಮೀನು

ಏಪ್ರಿಲ್​ 2ರಂದು ಬಜರಂಗ ಮುನಿ ದಾಸ್​ ಭಾಷಣ ಮಾಡಿದ್ದರು.  ಮಸೀದಿಯೊಂದರ ಹೊರಗೆ ನಿಂತು ಮಾತನಾಡಿದ್ದ ಅವರು ಮುಸ್ಲಿಂ ಸಮುದಾಯವನ್ನು ಜಿಹಾದಿಗಳು ಎಂದು ಉಲ್ಲೇಖಿಸಿದ್ದರು.

ಹಿಂದು ಹುಡುಗಿಯರಿಗೆ ದೌರ್ಜನ್ಯ ಎಸಗಿದರೆ,  ಮುಸ್ಲಿಂ ಮಹಿಳೆಯರ ಮೇಲೆ  ಅತ್ಯಾಚಾರ ಮಾಡುತ್ತೇನೆ ಎಂದಿದ್ದ ಬಜರಂಗ ಮುನಿಗೆ ಜಾಮೀನು
ಬಜರಂಗ ಮುನಿ ದಾಸ್​
TV9 Web
| Edited By: |

Updated on:Apr 24, 2022 | 3:59 PM

Share

ಉತ್ತರ ಪ್ರದೇಶದ ಸೀತಾಪುರದಲ್ಲಿ ದ್ವೇಷ ಭಾಷಣ ಮಾಡಿದ್ದಲ್ಲದೆ, ಮುಸ್ಲಿಂ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ ಹಾಕಿ, ಜೈಲು ಸೇರಿದ್ದ ಮಹಾಋಷಿ ಶ್ರೀ ಲಕ್ಷ್ಮಣ ದಾಸ ಉದಾಸಿ ಆಶ್ರಮದ ಬಜರಂಗ ಮುನಿ ದಾಸ್​ಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಶನಿವಾರ ಜಿಲ್ಲಾ ನ್ಯಾಯಾಧೀಶ ಸಂಜಯ್​ ಕುಮಾರ್​ ಅವರು ಬಜರಂಗ ಮುನಿಗೆ ಜಾಮೀನು ನೀಡಿದ್ದರು. ಅವರು ಇಂದು ಮುಂಜಾನೆ ಜೈಲಿನಿಂದ ಹೊರಬಂದಿದ್ದಾರೆ.   ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಅವರು, ನಾನು ಏನು ಮಾತನಾಡಿದ್ದೆನೋ ಅದರ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ. ನಾನು ನನ್ನ ಧರ್ಮವನ್ನು ಮತ್ತು ಧರ್ಮದ ಮಹಿಳೆಯ ಸುರಕ್ಷತೆಗಾಗಿ ಹೋರಾಡುತ್ತೇನೆ. ಎಷ್ಟು ಬಾರಿ ಜೈಲಿಗೆ ಹೋಗಲೂ ಹಿಂಜರಿಯುವುದಿಲ್ಲ. ಯಾರೇ ದಾಳಿ ಮಾಡಿದರೂ ಹೆದರುವುದಿಲ್ಲ ಎಂದಿದ್ದಾರೆ. 

ಏಪ್ರಿಲ್​ 2ರಂದು ಬಜರಂಗ ಮುನಿ ದಾಸ್​ ಭಾಷಣ ಮಾಡಿದ್ದರು.  ಮಸೀದಿಯೊಂದರ ಹೊರಗೆ ನಿಂತು ಮಾತನಾಡಿದ್ದ ಅವರು ಮುಸ್ಲಿಂ ಸಮುದಾಯವನ್ನು ಜಿಹಾದಿಗಳು ಎಂದು ಉಲ್ಲೇಖಿಸಿದ್ದರು. ಹಾಗೇ, ಆ ಸಮುದಾಯದಿಂದ ಹಿಂದು ಹುಡುಗಿಯರು ದೌರ್ಜನ್ಯಕ್ಕೆ ಒಳಗಾದರೆ ನಾನೇ ಸ್ವತಂ ಹಿಜಾದಿ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುತ್ತೇನೆ ಎಂದು ಮುನಿ ದಾಸ್ ಭಾಷಣದಲ್ಲಿ ಹೇಳಿದ್ದರು. ಈ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿ, ವಿವಾದ ಸೃಷ್ಟಿಸಿತ್ತು. ಅದಾದ ಬಳಿಕ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ನಾನು ಈ ಬಗ್ಗೆ ಕ್ಷಮೆ ಕೇಳುತ್ತೇನೆ ಎಂದು ಮುನಿ ದಾಸ್​ ಹೇಳಿದ ವಿಡಿಯೋವೂ ವೈರಲ್ ಆಗಿತ್ತು. ರಾಮ್​ ನರೇಶ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿ, ಏಪ್ರಿಲ್​ 13ರಂದು ಬಜರಂಗ ಮುನಿದಾಸ್​ ಅವರನ್ನು ಅರೆಸ್ಟ್ ಮಾಡಲಾಗಿತ್ತು.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಯತ್ನಾಳ್ ಮಾತಾಡಿದಂತೆ ನಾನು ಮಾತಾಡಲು ಬರಲ್ಲ, ನಾನು ಸರ್ಕಾರದ ಭಾಗ; ಸಚಿವ ಮುರಗೇಶ ನಿರಾಣಿ

Published On - 3:11 pm, Sun, 24 April 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ