AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದು ಹುಡುಗಿಯರಿಗೆ ದೌರ್ಜನ್ಯ ಎಸಗಿದರೆ, ಮುಸ್ಲಿಂ ಮಹಿಳೆಯರ ಮೇಲೆ ಅತ್ಯಾಚಾರ ಮಾಡುತ್ತೇನೆ ಎಂದಿದ್ದ ಬಜರಂಗ ಮುನಿಗೆ ಜಾಮೀನು

ಏಪ್ರಿಲ್​ 2ರಂದು ಬಜರಂಗ ಮುನಿ ದಾಸ್​ ಭಾಷಣ ಮಾಡಿದ್ದರು.  ಮಸೀದಿಯೊಂದರ ಹೊರಗೆ ನಿಂತು ಮಾತನಾಡಿದ್ದ ಅವರು ಮುಸ್ಲಿಂ ಸಮುದಾಯವನ್ನು ಜಿಹಾದಿಗಳು ಎಂದು ಉಲ್ಲೇಖಿಸಿದ್ದರು.

ಹಿಂದು ಹುಡುಗಿಯರಿಗೆ ದೌರ್ಜನ್ಯ ಎಸಗಿದರೆ,  ಮುಸ್ಲಿಂ ಮಹಿಳೆಯರ ಮೇಲೆ  ಅತ್ಯಾಚಾರ ಮಾಡುತ್ತೇನೆ ಎಂದಿದ್ದ ಬಜರಂಗ ಮುನಿಗೆ ಜಾಮೀನು
ಬಜರಂಗ ಮುನಿ ದಾಸ್​
TV9 Web
| Edited By: |

Updated on:Apr 24, 2022 | 3:59 PM

Share

ಉತ್ತರ ಪ್ರದೇಶದ ಸೀತಾಪುರದಲ್ಲಿ ದ್ವೇಷ ಭಾಷಣ ಮಾಡಿದ್ದಲ್ಲದೆ, ಮುಸ್ಲಿಂ ಮಹಿಳೆಯರಿಗೆ ಅತ್ಯಾಚಾರ ಬೆದರಿಕೆ ಹಾಕಿ, ಜೈಲು ಸೇರಿದ್ದ ಮಹಾಋಷಿ ಶ್ರೀ ಲಕ್ಷ್ಮಣ ದಾಸ ಉದಾಸಿ ಆಶ್ರಮದ ಬಜರಂಗ ಮುನಿ ದಾಸ್​ಗೆ ಸ್ಥಳೀಯ ನ್ಯಾಯಾಲಯ ಜಾಮೀನು ನೀಡಿದೆ. ಶನಿವಾರ ಜಿಲ್ಲಾ ನ್ಯಾಯಾಧೀಶ ಸಂಜಯ್​ ಕುಮಾರ್​ ಅವರು ಬಜರಂಗ ಮುನಿಗೆ ಜಾಮೀನು ನೀಡಿದ್ದರು. ಅವರು ಇಂದು ಮುಂಜಾನೆ ಜೈಲಿನಿಂದ ಹೊರಬಂದಿದ್ದಾರೆ.   ಜೈಲಿನಿಂದ ಬಿಡುಗಡೆಯಾದ ಬಳಿಕ ಮಾತನಾಡಿದ ಅವರು, ನಾನು ಏನು ಮಾತನಾಡಿದ್ದೆನೋ ಅದರ ಬಗ್ಗೆ ಯಾವುದೇ ಪಶ್ಚಾತ್ತಾಪವಿಲ್ಲ. ನಾನು ನನ್ನ ಧರ್ಮವನ್ನು ಮತ್ತು ಧರ್ಮದ ಮಹಿಳೆಯ ಸುರಕ್ಷತೆಗಾಗಿ ಹೋರಾಡುತ್ತೇನೆ. ಎಷ್ಟು ಬಾರಿ ಜೈಲಿಗೆ ಹೋಗಲೂ ಹಿಂಜರಿಯುವುದಿಲ್ಲ. ಯಾರೇ ದಾಳಿ ಮಾಡಿದರೂ ಹೆದರುವುದಿಲ್ಲ ಎಂದಿದ್ದಾರೆ. 

ಏಪ್ರಿಲ್​ 2ರಂದು ಬಜರಂಗ ಮುನಿ ದಾಸ್​ ಭಾಷಣ ಮಾಡಿದ್ದರು.  ಮಸೀದಿಯೊಂದರ ಹೊರಗೆ ನಿಂತು ಮಾತನಾಡಿದ್ದ ಅವರು ಮುಸ್ಲಿಂ ಸಮುದಾಯವನ್ನು ಜಿಹಾದಿಗಳು ಎಂದು ಉಲ್ಲೇಖಿಸಿದ್ದರು. ಹಾಗೇ, ಆ ಸಮುದಾಯದಿಂದ ಹಿಂದು ಹುಡುಗಿಯರು ದೌರ್ಜನ್ಯಕ್ಕೆ ಒಳಗಾದರೆ ನಾನೇ ಸ್ವತಂ ಹಿಜಾದಿ ಸಮುದಾಯದ ಮಹಿಳೆಯರನ್ನು ಅತ್ಯಾಚಾರ ಮಾಡುತ್ತೇನೆ ಎಂದು ಮುನಿ ದಾಸ್ ಭಾಷಣದಲ್ಲಿ ಹೇಳಿದ್ದರು. ಈ ವಿಡಿಯೋ ಸಿಕ್ಕಾಪಟೆ ವೈರಲ್ ಆಗಿ, ವಿವಾದ ಸೃಷ್ಟಿಸಿತ್ತು. ಅದಾದ ಬಳಿಕ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ. ನಾನು ಈ ಬಗ್ಗೆ ಕ್ಷಮೆ ಕೇಳುತ್ತೇನೆ ಎಂದು ಮುನಿ ದಾಸ್​ ಹೇಳಿದ ವಿಡಿಯೋವೂ ವೈರಲ್ ಆಗಿತ್ತು. ರಾಮ್​ ನರೇಶ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಎಫ್​ಐಆರ್ ದಾಖಲಾಗಿ, ಏಪ್ರಿಲ್​ 13ರಂದು ಬಜರಂಗ ಮುನಿದಾಸ್​ ಅವರನ್ನು ಅರೆಸ್ಟ್ ಮಾಡಲಾಗಿತ್ತು.

ಇದನ್ನೂ ಓದಿ: ಮೀಸಲಾತಿ ವಿಚಾರದಲ್ಲಿ ಯತ್ನಾಳ್ ಮಾತಾಡಿದಂತೆ ನಾನು ಮಾತಾಡಲು ಬರಲ್ಲ, ನಾನು ಸರ್ಕಾರದ ಭಾಗ; ಸಚಿವ ಮುರಗೇಶ ನಿರಾಣಿ

Published On - 3:11 pm, Sun, 24 April 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ