AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Balaghat: ಬಾಲಘಾಟ್​​ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌

ಭಾರತೀಯ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

Balaghat: ಬಾಲಘಾಟ್​​ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌
ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌
TV9 Web
| Edited By: |

Updated on: Apr 22, 2023 | 1:32 PM

Share

ಬಾಲಘಾಟ್: ಭಾರತೀಯ ಭದ್ರತಾ ಪಡೆಗಳು (Indian Security Force) ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಇವರನ್ನು ಪತ್ತೆ ಮಾಡಿದವರಿಗೆ ಹಾಗೂ ಇವರ ತಲೆಗೆ ಒಟ್ಟು 28 ಲಕ್ಷ ರೂ.ಗಳ ಬಹುಮಾನ ಎಂದು ಘೋಷಣೆ ಮಾಡಲಾಗಿತ್ತು. ಶನಿವಾರ ಬೆಳಿಗ್ಗೆ ಗರ್ಹಿ ಪೊಲೀಸ್ ಠಾಣಾ ವ್ಯಾಪ್ತಿಯ ಕಡ್ಲಾ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ.

ಸಾವನ್ನಪ್ಪಿರುವ ನಕ್ಸಲ್ ಮಹಿಳೆಯರು ಸುನೀತಾ, ಪ್ರದೇಶ ಸಮಿತಿ ಸದಸ್ಯೆ (ACM) ಮತ್ತು ಮಾವೋವಾದಿಗಳ ವಿಭಾಗವಾದ ಭೋರಮ್‌ದೇವ್ ಸಮಿತಿಯ ಕಮಾಂಡರ್ ಎಂದು ಗುರುತಿಸಲಾಗಿದೆ ಹಾಗೂ ವಿಸ್ತಾರ್ ದಲಂನಲ್ಲಿ ಸಕ್ರಿಯವಾಗಿರುವ ಎಸಿಎಂ ಸರಿತಾ ಖತಿಯಾ ಮೋಚಾ ಎಂದು ಹೇಳಲಾಗಿದೆ. ಇಬ್ಬರ ಪತ್ತೆಗೆ ತಲಾ 14 ಲಕ್ಷ ರೂಪಾಯಿ ಬಹುಮಾನ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಶರಣಾಗಿದ್ದ ನಕ್ಸಲ್ ಮಹಿಳೆ ಪೊಲೀಸ್ ಮೆಸ್​ನಲ್ಲಿ ಅನುಮಾನಾಸ್ಪದವಾಗಿ ಸಾವು; ಆತ್ಮಹತ್ಯೆಯ ಶಂಕೆ

ಬಾಲಘಾಟ್ ಪೊಲೀಸರು ಇಬ್ಬರು ಮಹಿಳಾ ನಕ್ಸಲೀಯರಿಂದ ಬಂದೂಕುಗಳು, ಕಾಟ್ರಿಡ್ಜ್‌ಗಳು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅರಣ್ಯದಲ್ಲಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

ದಶಕಗಳಿಂದ ನಕ್ಸಲ್  ಸಮಸ್ಯೆಗಳನ್ನು ಎದುರಿಸುತ್ತಿದ್ದ ಬಾಲಾಘಾಟ್ ಪೊಲೀಸರು, ಕಳೆದ ವರ್ಷ ಆರು ಕುಖ್ಯಾತ ನಕ್ಸಲೀಯರನ್ನು ಯಶಸ್ವಿಯಾಗಿ ಹತ್ಯೆಗೈದಿದ್ದರು. ನಕ್ಸಲೀಯರ ಎನ್‌ಕೌಂಟರ್ ಬಗ್ಗೆ ಮಾಹಿತಿ ಪಡೆದ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಮತ್ತು ಹಾಕ್‌ಫೋರ್ಸ್ ಸಿಒ ಸ್ಥಳಕ್ಕೆ ಆಗಮಿಸಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ