AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Balaghat: ಬಾಲಘಾಟ್​​ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌

ಭಾರತೀಯ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

Balaghat: ಬಾಲಘಾಟ್​​ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌
ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌
TV9 Web
| Edited By: |

Updated on: Apr 22, 2023 | 1:32 PM

Share

ಬಾಲಘಾಟ್: ಭಾರತೀಯ ಭದ್ರತಾ ಪಡೆಗಳು (Indian Security Force) ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಇವರನ್ನು ಪತ್ತೆ ಮಾಡಿದವರಿಗೆ ಹಾಗೂ ಇವರ ತಲೆಗೆ ಒಟ್ಟು 28 ಲಕ್ಷ ರೂ.ಗಳ ಬಹುಮಾನ ಎಂದು ಘೋಷಣೆ ಮಾಡಲಾಗಿತ್ತು. ಶನಿವಾರ ಬೆಳಿಗ್ಗೆ ಗರ್ಹಿ ಪೊಲೀಸ್ ಠಾಣಾ ವ್ಯಾಪ್ತಿಯ ಕಡ್ಲಾ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ.

ಸಾವನ್ನಪ್ಪಿರುವ ನಕ್ಸಲ್ ಮಹಿಳೆಯರು ಸುನೀತಾ, ಪ್ರದೇಶ ಸಮಿತಿ ಸದಸ್ಯೆ (ACM) ಮತ್ತು ಮಾವೋವಾದಿಗಳ ವಿಭಾಗವಾದ ಭೋರಮ್‌ದೇವ್ ಸಮಿತಿಯ ಕಮಾಂಡರ್ ಎಂದು ಗುರುತಿಸಲಾಗಿದೆ ಹಾಗೂ ವಿಸ್ತಾರ್ ದಲಂನಲ್ಲಿ ಸಕ್ರಿಯವಾಗಿರುವ ಎಸಿಎಂ ಸರಿತಾ ಖತಿಯಾ ಮೋಚಾ ಎಂದು ಹೇಳಲಾಗಿದೆ. ಇಬ್ಬರ ಪತ್ತೆಗೆ ತಲಾ 14 ಲಕ್ಷ ರೂಪಾಯಿ ಬಹುಮಾನ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಶರಣಾಗಿದ್ದ ನಕ್ಸಲ್ ಮಹಿಳೆ ಪೊಲೀಸ್ ಮೆಸ್​ನಲ್ಲಿ ಅನುಮಾನಾಸ್ಪದವಾಗಿ ಸಾವು; ಆತ್ಮಹತ್ಯೆಯ ಶಂಕೆ

ಬಾಲಘಾಟ್ ಪೊಲೀಸರು ಇಬ್ಬರು ಮಹಿಳಾ ನಕ್ಸಲೀಯರಿಂದ ಬಂದೂಕುಗಳು, ಕಾಟ್ರಿಡ್ಜ್‌ಗಳು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅರಣ್ಯದಲ್ಲಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

ದಶಕಗಳಿಂದ ನಕ್ಸಲ್  ಸಮಸ್ಯೆಗಳನ್ನು ಎದುರಿಸುತ್ತಿದ್ದ ಬಾಲಾಘಾಟ್ ಪೊಲೀಸರು, ಕಳೆದ ವರ್ಷ ಆರು ಕುಖ್ಯಾತ ನಕ್ಸಲೀಯರನ್ನು ಯಶಸ್ವಿಯಾಗಿ ಹತ್ಯೆಗೈದಿದ್ದರು. ನಕ್ಸಲೀಯರ ಎನ್‌ಕೌಂಟರ್ ಬಗ್ಗೆ ಮಾಹಿತಿ ಪಡೆದ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಮತ್ತು ಹಾಕ್‌ಫೋರ್ಸ್ ಸಿಒ ಸ್ಥಳಕ್ಕೆ ಆಗಮಿಸಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ