AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Balaghat: ಬಾಲಘಾಟ್​​ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌

ಭಾರತೀಯ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲೀಯರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.

Balaghat: ಬಾಲಘಾಟ್​​ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌
ಇಬ್ಬರು ನಕ್ಸಲ್ ಮಹಿಳೆಯರ ಎನ್‌ಕೌಂಟರ್‌
TV9 Web
| Edited By: |

Updated on: Apr 22, 2023 | 1:32 PM

Share

ಬಾಲಘಾಟ್: ಭಾರತೀಯ ಭದ್ರತಾ ಪಡೆಗಳು (Indian Security Force) ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲ್ ಮಹಿಳೆಯರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಬಾಲಘಾಟ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ. ಇವರನ್ನು ಪತ್ತೆ ಮಾಡಿದವರಿಗೆ ಹಾಗೂ ಇವರ ತಲೆಗೆ ಒಟ್ಟು 28 ಲಕ್ಷ ರೂ.ಗಳ ಬಹುಮಾನ ಎಂದು ಘೋಷಣೆ ಮಾಡಲಾಗಿತ್ತು. ಶನಿವಾರ ಬೆಳಿಗ್ಗೆ ಗರ್ಹಿ ಪೊಲೀಸ್ ಠಾಣಾ ವ್ಯಾಪ್ತಿಯ ಕಡ್ಲಾ ಅರಣ್ಯ ಪ್ರದೇಶದಲ್ಲಿ ಎನ್‌ಕೌಂಟರ್ ನಡೆದಿದೆ.

ಸಾವನ್ನಪ್ಪಿರುವ ನಕ್ಸಲ್ ಮಹಿಳೆಯರು ಸುನೀತಾ, ಪ್ರದೇಶ ಸಮಿತಿ ಸದಸ್ಯೆ (ACM) ಮತ್ತು ಮಾವೋವಾದಿಗಳ ವಿಭಾಗವಾದ ಭೋರಮ್‌ದೇವ್ ಸಮಿತಿಯ ಕಮಾಂಡರ್ ಎಂದು ಗುರುತಿಸಲಾಗಿದೆ ಹಾಗೂ ವಿಸ್ತಾರ್ ದಲಂನಲ್ಲಿ ಸಕ್ರಿಯವಾಗಿರುವ ಎಸಿಎಂ ಸರಿತಾ ಖತಿಯಾ ಮೋಚಾ ಎಂದು ಹೇಳಲಾಗಿದೆ. ಇಬ್ಬರ ಪತ್ತೆಗೆ ತಲಾ 14 ಲಕ್ಷ ರೂಪಾಯಿ ಬಹುಮಾನ ಎಂದು ಹೇಳಲಾಗಿತ್ತು.

ಇದನ್ನೂ ಓದಿ: ಶರಣಾಗಿದ್ದ ನಕ್ಸಲ್ ಮಹಿಳೆ ಪೊಲೀಸ್ ಮೆಸ್​ನಲ್ಲಿ ಅನುಮಾನಾಸ್ಪದವಾಗಿ ಸಾವು; ಆತ್ಮಹತ್ಯೆಯ ಶಂಕೆ

ಬಾಲಘಾಟ್ ಪೊಲೀಸರು ಇಬ್ಬರು ಮಹಿಳಾ ನಕ್ಸಲೀಯರಿಂದ ಬಂದೂಕುಗಳು, ಕಾಟ್ರಿಡ್ಜ್‌ಗಳು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅರಣ್ಯದಲ್ಲಿ ಪೊಲೀಸರು ತೀವ್ರ ಶೋಧ ಕಾರ್ಯ ಆರಂಭಿಸಿದ್ದಾರೆ.

ದಶಕಗಳಿಂದ ನಕ್ಸಲ್  ಸಮಸ್ಯೆಗಳನ್ನು ಎದುರಿಸುತ್ತಿದ್ದ ಬಾಲಾಘಾಟ್ ಪೊಲೀಸರು, ಕಳೆದ ವರ್ಷ ಆರು ಕುಖ್ಯಾತ ನಕ್ಸಲೀಯರನ್ನು ಯಶಸ್ವಿಯಾಗಿ ಹತ್ಯೆಗೈದಿದ್ದರು. ನಕ್ಸಲೀಯರ ಎನ್‌ಕೌಂಟರ್ ಬಗ್ಗೆ ಮಾಹಿತಿ ಪಡೆದ ಬಾಲಾಘಾಟ್ ವಲಯದ ಪೊಲೀಸ್ ಮಹಾನಿರೀಕ್ಷಕ ಸಂಜಯ್ ಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಮತ್ತು ಹಾಕ್‌ಫೋರ್ಸ್ ಸಿಒ ಸ್ಥಳಕ್ಕೆ ಆಗಮಿಸಿದರು.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ