AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Balakot Air Strike | ಬಾಲಾಕೋಟ್ ದಾಳಿಗೆ 2 ವರ್ಷ; ಕೆಚ್ಚೆದೆಯ ಯೋಧರಿಗೆ ಸಲಾಂ ಹೇಳಿದ ನೆಟ್ಟಿಗರು

Balakot Air Strike: ಪುಲ್ವಾಮಾ ದಾಳಿಗೆ ತಿರುಗೇಟು ನೀಡಿದ ಭಾರತ, ವಾಯುಸೇನೆಯ ದಾಳಿ ಮೂಲಕ ಪಾಕ್ ಉಗ್ರರ ನೆಲೆಯನ್ನೇ ಧ್ವಂಸಗೊಳಿಸಿತು. ಈ ಘಟನೆಗೆ ಇಂದು ಎರಡು ವರ್ಷವಾಗುತ್ತಿದೆ. ಭಾರತದ ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ ಹಾಗೂ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ ಸೈನಿಕರಿಗೆ ನಮನ ಸಲ್ಲಿಸಿದ್ದಾರೆ.

Balakot Air Strike | ಬಾಲಾಕೋಟ್ ದಾಳಿಗೆ 2 ವರ್ಷ; ಕೆಚ್ಚೆದೆಯ ಯೋಧರಿಗೆ ಸಲಾಂ ಹೇಳಿದ ನೆಟ್ಟಿಗರು
ಭಾರತೀಯ ವಾಯುಸೇನೆಗೆ ನೆಟ್ಟಿಗರ ಸಲಾಂ
TV9 Web
| Edited By: |

Updated on:Apr 06, 2022 | 7:41 PM

Share

ಉಗ್ರರ ವಿರುದ್ಧ ನಡೆಸಿದ ಯಶಸ್ವಿ ಬಾಲಾಕೋಟ್ ದಾಳಿಯ (Balakot Airstrike) ಮೂಲಕ ಭಯೋತ್ಪಾದಕರ (Terrorist Attack) ವಿರುದ್ಧ ಭಾರತ ತನ್ನ ಶಕ್ತಿ ಸಾಮರ್ಥ್ಯ ತೋರಿದಂತಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜ್​ನಾಥ್ ಸಿಂಗ್ (Rajnath Singh) ತಿಳಿಸಿದ್ದಾರೆ. ಬಾಲಾಕೋಟ್ ದಾಳಿಗೆ ಎರಡು ವರ್ಷವಾದ ಈ ಸಂದರ್ಭದಲ್ಲಿ, ರಾಜ್​ನಾಥ್ ಸಿಂಗ್ ಟ್ವೀಟ್ ಮೂಲಕ ಭಾರತೀಯ ವಾಯುಸೇನೆಗೆ ಅಭಿನಂದನೆ ಸಲ್ಲಿಸಿದ್ದಾರೆ. ನಾವು, ನಮ್ಮ ದೇಶವನ್ನು ರಕ್ಷಿಸುವ ಸೇನಾ ವಿಭಾಗಗಳ ಬಗ್ಗೆ ಹೆಮ್ಮೆ ಪಡುತ್ತೇವೆ ಎಂದು ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಕೂಡ ಟ್ವೀಟ್ ಮಾಡಿ ಸೈನಿಕರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

2019ರ ಈ ದಿನ ಭಾರತೀಯ ವಾಯುಸೇನೆ, ಪಾಕ್ ಉಗ್ರರು ನಡೆಸಿದ್ದ ಪುಲ್ವಾಮಾ ದಾಳಿಗೆ ತಕ್ಕ ಉತ್ತರ ನೀಡಿತು. ಹೊಸ ಭಾರತವು ಭಯೋತ್ಪಾದನೆಯ ವಿರುದ್ಧದ ತನ್ನ ನಡೆಯನ್ನು ತಿಳಿಸಿಕೊಟ್ಟಿತು. ಪುಲ್ವಾಮಾ ದಾಳಿಗೆ ಹುತಾತ್ಮರಾದ ಭಾರತೀಯ ಯೋಧರಿಗೆ ನಮನಗಳು. ವಾಯುಸೇನೆಯ ಸೈನಿಕರಿಗೆ ಸೆಲ್ಯೂಟ್ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್

ಗೃಹ ಸಚಿವ ಅಮಿತ್ ಶಾ ಟ್ವೀಟ್

ಪಾಕ್ ಉಗ್ರರ ದುಷ್ಕೃತ್ಯಗಳ ಮೂಲವನ್ನೇ ಹುಟ್ಟಡಿಗಿಸಿದ ಭಾರತೀಯ ಯೋಧರ ಯಶಸ್ವಿ ಕಾರ್ಯ, ಬಾಲಾಕೋಟ್ ದಾಳಿ ನಡೆದು ಇಂದಿಗೆ ಎರಡು ವರ್ಷಗಳಾದವು. 2019ರ ಫೆಬ್ರವರಿ 14ರಂದು ಪಾಕ್ ಉಗ್ರನೊಬ್ಬ ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದ. ಹೆದ್ದಾರಿ ಮೇಲೆ ಸಾಗುತ್ತಿದ್ದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ವಾಹನಗಳನ್ನು ಗುರಿಯಾಗಿಸಿ ಉಗ್ರ ದಾಳಿ ಮಾಡಿದ್ದ. ಉಗ್ರರ ಈ ದುಷ್ಕೃತ್ಯಕ್ಕೆ ತಿರುಗೇಟು ನೀಡಿದ ಭಾರತ, ಫೆ. 26ರಂದು ಪಾಕ್ ಆಕ್ರಮಿತ ಕಾಶ್ಮೀರ ಭಾಗಕ್ಕೆ ತೆರಳಿ ಉಗ್ರರ ಶಿಬಿರಗಳನ್ನು ಹೇಳಹೆಸರಿಲ್ಲದಂತೆ ಮಾಡಿತ್ತು.

ಟ್ವಿಟರ್ ಟ್ರೆಂಡಿಂಗ್​ನಲ್ಲಿ #BalakotAirStrike ಬಾಲಾಕೋಟ್ ದಾಳಿ ನಡೆದ ದಿನವಾದ ಇಂದು ಬಾಲಾಕೋಟ್ ಏರ್​ಸ್ಟ್ರೈಕ್ ಎಂಬ ಹ್ಯಾಷ್​ಟ್ಯಾಗ್ ಟ್ರೆಂಡಿಂಗ್​ನಲ್ಲಿದೆ. #BalakotAirStrike ಎಂಬ ಟ್ಯಾಗ್ 16k ಬಾರಿ ರಿಟ್ವೀಟ್ ಆಗಿದೆ. ಭಾರತೀಯ ವಾಯುಸೇನೆಯ ದಾಳಿಯಿಂದ ಏನೂ ಆಗಿಲ್ಲ ಎಂದ ಪಾಕಿಸ್ತಾನ ಗುಟ್ಟಾಗಿ ಅಳುತ್ತಿತ್ತು ಎಂದು ಭಾರತೀಯರು ಟ್ರಾಲ್ ಮಾಡಿದ್ದಾರೆ. ಭಾರತೀಯ ಯೋಧರ ಯಶಸ್ವಿ ಕಾರ್ಯಾಚರಣೆಯನ್ನು ಭಾರತೀಯರು ಸಂಭ್ರಮಿಸಿದ್ದಾರೆ. ಭಾರತೀಯ ವಾಯುಸೇನೆಯ ಬಗ್ಗೆ ಹೆಮ್ಮೆಪಟ್ಟುಕೊಂಡಿದ್ದಾರೆ. ‘ಚೆನ್ನಾಗಿ ನಿದ್ರಿಸಿ. ಯಾಕೆಂದರೆ, ಪಾಕಿಸ್ತಾನ್ ಏರ್​ಫೋರ್ಸ್ ಈಸ್ ಅವೇಕ್, ಪಾಕಿಸ್ತಾನ್ ಜಿಂದಾಬಾದ್’ ಎಂಬ ಟ್ವೀಟ್​ನ ಸ್ಕ್ರೀನ್​ಶಾಟ್ ಹಂಚಿಕೊಂಡು ತಿರುಗೇಟು ನೀಡಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಟ್ವೀಟ್

ಇದನ್ನೂ ಓದಿ: ಬಾಲಾಕೋಟ್ ದಾಳಿಗೆ 2 ವರ್ಷ: ಭಾರತ-ಪಾಕ್ ನಡುವೆ ಹೊಸ ಕದನವಿರಾಮ ಒಪ್ಪಂದ; ಬದ್ಧವಾಗಿರುವುದೇ ಪಾಕ್?

ಆ 12 ದಿನಗಳು.. ಪುಲ್ವಾಮಾ ಸ್ಫೋಟದಿಂದ ಬಾಲಾಕೋಟ್​ ವಾಯುದಾಳಿಯವರೆಗೆ 

Published On - 2:38 pm, Fri, 26 February 21

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!