AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಲಾಕೋಟ್​ ದಾಳಿಯಿಂದ ಬದಲಾಗಿದ್ದಾದರೂ ಏನು? ಬಿಜೆಪಿ ರಾಜಕೀಯ ಮೈಲೇಜ್​ ಪಡೆಯುವ ವಿಷಯವಷ್ಟೇ ಅದು’-ಫಾರೂಕ್​ ಅಬ್ದುಲ್ಲಾ

ಬಿಜೆಪಿ ಸರ್ಕಾರ ಇಂದಿಗೂ ಬಾಲಾಕೋಟ್​ ದಾಳಿಯ ಬಗ್ಗೆ ಮಾತನಾಡುತ್ತಿದೆ. ಮುಂಬರುವ ಉತ್ತರಪ್ರದೇಶ ಚುನಾವಣೆಗಾಗಿ ಮತ್ತಷ್ಟು ದ್ವೇಷವನ್ನೇ ಹರಡುತ್ತಿದ್ದಾರೆ ಎಂದು ಫಾರೂಕ್​ ಅಬ್ದುಲ್ಲಾ ಹೇಳಿದರು. 

‘ಬಾಲಾಕೋಟ್​ ದಾಳಿಯಿಂದ ಬದಲಾಗಿದ್ದಾದರೂ ಏನು? ಬಿಜೆಪಿ ರಾಜಕೀಯ ಮೈಲೇಜ್​ ಪಡೆಯುವ ವಿಷಯವಷ್ಟೇ ಅದು’-ಫಾರೂಕ್​ ಅಬ್ದುಲ್ಲಾ
ಫಾರೂಕ್​ ಅಬ್ದುಲ್ಲಾ
TV9 Web
| Edited By: |

Updated on:Oct 22, 2021 | 2:17 PM

Share

ಜಮ್ಮು: 2019ರಲ್ಲಿ ಭಾರತೀಯ ವಾಯುಸೇನೆ (Indian Air Force) ಪಾಕಿಸ್ತಾನದ ಬಾಲಾಕೋಟ್​​​ ಮೇಲೆ ನಡೆಸಿದ ಏರ್​​ಸ್ಟ್ರೈಕ್(Balakot Airstrike) ನಿಜಕ್ಕೂ ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ಆದರೆ ಈ ಬಾಲಾಕೋಟ್​ ವಾಯುದಾಳಿಯನ್ನು ಮುಂಬರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆ(Uttar Pradesh Assembly Election)ಯಲ್ಲಿ ರಾಜಕೀಯ ಮೈಲೇಜ್​ ಪಡೆಯಲು ಬಿಜೆಪಿ ಸರ್ಕಾರ ಬಳಸಿಕೊಳ್ಳುತ್ತಿದೆ ಎಂದು ಜಮ್ಮು-ಕಾಶ್ಮೀರದ ನ್ಯಾಶನಲ್​ ಕಾನ್ಫರೆನ್ಸ್​ ಮುಖ್ಯಸ್ಥ ಫಾರೂಕ್​ ಅಬ್ದುಲ್ಲಾ (Farooq Abdullah) ಆರೋಪಿಸಿದ್ದಾರೆ. 

ಮಾಧ್ಯಮಗಳೆದುರು ಮಾತನಾಡಿದ ಅವರು, ಬಾಲಾಕೋಟ್​ !, ಬಾಲಾಕೋಟ್​ ! ಕೇವಲ ಇದನ್ನೊಂದು ಹೇಳುತ್ತಿದ್ದಾರೆ. ಏನಾದರೂ ಬದಲಾಗಿದೆಯಾ? ಗಡಿನಿಯಂತ್ರಣ ರೇಖೆ (ಎಲ್​ಒಸಿ) ಬದಲಾಯಿತಾ? ಪಾಕಿಸ್ತಾನದಿಂದ ಒಂದು ಸಣ್ಣ ತುಂಡು ಭೂಮಿಯನ್ನು ವಾಪಸ್​ ಪಡೆಯಲು ಸಾಧ್ಯವಾಯಿತಾ? ಆ ರೇಖೆ ಅಲ್ಲಿಯೇ ಇದೆ. ಬಾಲಾಕೋಟ್​​ನಲ್ಲಿ ವಾಯುದಾಳಿಯಾಯಿತು..ಆದರೆ ನಾವೇನು ಪಡೆಯಲು ಸಾಧ್ಯವಾಯಿತು? ಬಿಜೆಪಿ ಅಧಿಕಾರಕ್ಕೆ ಬಂತು. ಬಿಜೆಪಿ ಸರ್ಕಾರ ಇಂದಿಗೂ ಬಾಲಾಕೋಟ್​ ದಾಳಿಯ ಬಗ್ಗೆ ಮಾತನಾಡುತ್ತಿದೆ. ಮುಂಬರುವ ಉತ್ತರಪ್ರದೇಶ ಚುನಾವಣೆಗಾಗಿ ಮತ್ತಷ್ಟು ದ್ವೇಷವನ್ನೇ ಹರಡುತ್ತಿದ್ದಾರೆ ಎಂದು ಹೇಳಿದರು.

ಭಾರತೀಯರು ಬಾಲಾಕೋಟ್​ ದಾಳಿ ನಡೆದದ್ದನ್ನು ಮರೆಯುವಂತಿಲ್ಲ. 2019ರ ಫೆಬ್ರವರಿ 14ರಂದು ಪುಲ್ವಾಮಾದ ಜಮ್ಮು-ಶ್ರೀನಗರ ಹೆದ್ದಾರಿ ಬಳಿ ಜೈಶ್​ ಎ ಮೊಹಮ್ಮದ್​ ಉಗ್ರರು ಸಿಆರ್​ಪಿಎಫ್​ ಯೋಧರ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದರು. ಅದರಲ್ಲಿ ಸುಮಾರು 40 ಯೋಧರು ಹುತಾತ್ಮರಾಗಿದ್ದರು. ಭಾರತದ ಪಾಲಿಗೆ ಅದು ಕರಾಳ ದಿನ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾದ ಭಾರತ ಫೆಬ್ರವರಿ 26ರಂದು ಮುಂಜಾನೆ ಪಾಕಿಸ್ತಾನದ ಖೈಬರ್​ ಪಖ್ತುಂಕ್ವಾ ಪ್ರಾಂತ್ಯದಲ್ಲಿರುವ ಬಾಲಾಕೋಟ್​ ಉಗ್ರರ ತಾಣದ ಮೇಲೆ ಏರ್​ಸ್ಟ್ರೈಕ್​ ನಡೆಸಿತ್ತು.

ಇದನ್ನೂ ಓದಿ: Hungama: ಹಂಗಾಮದಿಂದ ‘ಹಂಗಾಮ ಮ್ಯೂಸಿಕ್ ಕ್ವಿಜ್ ಅಲೆಕ್ಸಾ ಸ್ಕಿಲ್’ ಲಾಂಚ್: ಸಂಗೀತ ಜ್ಞಾನ ಪರೀಕ್ಷಿಸಲು ವಿವಿಧ ಆಟ

Meghana Raj: ಪುತ್ರ ರಾಯನ್​ ಜನ್ಮದಿನಕ್ಕೆ ಮೇಘನಾ ನೀಡಿರುವ ಸಂದೇಶವೇನು?

Published On - 2:16 pm, Fri, 22 October 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?