AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಾಲಾಕೋಟ್​ ದಾಳಿಯಿಂದ ಬದಲಾಗಿದ್ದಾದರೂ ಏನು? ಬಿಜೆಪಿ ರಾಜಕೀಯ ಮೈಲೇಜ್​ ಪಡೆಯುವ ವಿಷಯವಷ್ಟೇ ಅದು’-ಫಾರೂಕ್​ ಅಬ್ದುಲ್ಲಾ

ಬಿಜೆಪಿ ಸರ್ಕಾರ ಇಂದಿಗೂ ಬಾಲಾಕೋಟ್​ ದಾಳಿಯ ಬಗ್ಗೆ ಮಾತನಾಡುತ್ತಿದೆ. ಮುಂಬರುವ ಉತ್ತರಪ್ರದೇಶ ಚುನಾವಣೆಗಾಗಿ ಮತ್ತಷ್ಟು ದ್ವೇಷವನ್ನೇ ಹರಡುತ್ತಿದ್ದಾರೆ ಎಂದು ಫಾರೂಕ್​ ಅಬ್ದುಲ್ಲಾ ಹೇಳಿದರು. 

‘ಬಾಲಾಕೋಟ್​ ದಾಳಿಯಿಂದ ಬದಲಾಗಿದ್ದಾದರೂ ಏನು? ಬಿಜೆಪಿ ರಾಜಕೀಯ ಮೈಲೇಜ್​ ಪಡೆಯುವ ವಿಷಯವಷ್ಟೇ ಅದು’-ಫಾರೂಕ್​ ಅಬ್ದುಲ್ಲಾ
ಫಾರೂಕ್​ ಅಬ್ದುಲ್ಲಾ
TV9 Web
| Edited By: |

Updated on:Oct 22, 2021 | 2:17 PM

Share

ಜಮ್ಮು: 2019ರಲ್ಲಿ ಭಾರತೀಯ ವಾಯುಸೇನೆ (Indian Air Force) ಪಾಕಿಸ್ತಾನದ ಬಾಲಾಕೋಟ್​​​ ಮೇಲೆ ನಡೆಸಿದ ಏರ್​​ಸ್ಟ್ರೈಕ್(Balakot Airstrike) ನಿಜಕ್ಕೂ ಭಾರತೀಯರ ಪಾಲಿಗೆ ಹೆಮ್ಮೆಯ ವಿಚಾರ. ಆದರೆ ಈ ಬಾಲಾಕೋಟ್​ ವಾಯುದಾಳಿಯನ್ನು ಮುಂಬರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆ(Uttar Pradesh Assembly Election)ಯಲ್ಲಿ ರಾಜಕೀಯ ಮೈಲೇಜ್​ ಪಡೆಯಲು ಬಿಜೆಪಿ ಸರ್ಕಾರ ಬಳಸಿಕೊಳ್ಳುತ್ತಿದೆ ಎಂದು ಜಮ್ಮು-ಕಾಶ್ಮೀರದ ನ್ಯಾಶನಲ್​ ಕಾನ್ಫರೆನ್ಸ್​ ಮುಖ್ಯಸ್ಥ ಫಾರೂಕ್​ ಅಬ್ದುಲ್ಲಾ (Farooq Abdullah) ಆರೋಪಿಸಿದ್ದಾರೆ. 

ಮಾಧ್ಯಮಗಳೆದುರು ಮಾತನಾಡಿದ ಅವರು, ಬಾಲಾಕೋಟ್​ !, ಬಾಲಾಕೋಟ್​ ! ಕೇವಲ ಇದನ್ನೊಂದು ಹೇಳುತ್ತಿದ್ದಾರೆ. ಏನಾದರೂ ಬದಲಾಗಿದೆಯಾ? ಗಡಿನಿಯಂತ್ರಣ ರೇಖೆ (ಎಲ್​ಒಸಿ) ಬದಲಾಯಿತಾ? ಪಾಕಿಸ್ತಾನದಿಂದ ಒಂದು ಸಣ್ಣ ತುಂಡು ಭೂಮಿಯನ್ನು ವಾಪಸ್​ ಪಡೆಯಲು ಸಾಧ್ಯವಾಯಿತಾ? ಆ ರೇಖೆ ಅಲ್ಲಿಯೇ ಇದೆ. ಬಾಲಾಕೋಟ್​​ನಲ್ಲಿ ವಾಯುದಾಳಿಯಾಯಿತು..ಆದರೆ ನಾವೇನು ಪಡೆಯಲು ಸಾಧ್ಯವಾಯಿತು? ಬಿಜೆಪಿ ಅಧಿಕಾರಕ್ಕೆ ಬಂತು. ಬಿಜೆಪಿ ಸರ್ಕಾರ ಇಂದಿಗೂ ಬಾಲಾಕೋಟ್​ ದಾಳಿಯ ಬಗ್ಗೆ ಮಾತನಾಡುತ್ತಿದೆ. ಮುಂಬರುವ ಉತ್ತರಪ್ರದೇಶ ಚುನಾವಣೆಗಾಗಿ ಮತ್ತಷ್ಟು ದ್ವೇಷವನ್ನೇ ಹರಡುತ್ತಿದ್ದಾರೆ ಎಂದು ಹೇಳಿದರು.

ಭಾರತೀಯರು ಬಾಲಾಕೋಟ್​ ದಾಳಿ ನಡೆದದ್ದನ್ನು ಮರೆಯುವಂತಿಲ್ಲ. 2019ರ ಫೆಬ್ರವರಿ 14ರಂದು ಪುಲ್ವಾಮಾದ ಜಮ್ಮು-ಶ್ರೀನಗರ ಹೆದ್ದಾರಿ ಬಳಿ ಜೈಶ್​ ಎ ಮೊಹಮ್ಮದ್​ ಉಗ್ರರು ಸಿಆರ್​ಪಿಎಫ್​ ಯೋಧರ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದರು. ಅದರಲ್ಲಿ ಸುಮಾರು 40 ಯೋಧರು ಹುತಾತ್ಮರಾಗಿದ್ದರು. ಭಾರತದ ಪಾಲಿಗೆ ಅದು ಕರಾಳ ದಿನ. ಈ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಮುಂದಾದ ಭಾರತ ಫೆಬ್ರವರಿ 26ರಂದು ಮುಂಜಾನೆ ಪಾಕಿಸ್ತಾನದ ಖೈಬರ್​ ಪಖ್ತುಂಕ್ವಾ ಪ್ರಾಂತ್ಯದಲ್ಲಿರುವ ಬಾಲಾಕೋಟ್​ ಉಗ್ರರ ತಾಣದ ಮೇಲೆ ಏರ್​ಸ್ಟ್ರೈಕ್​ ನಡೆಸಿತ್ತು.

ಇದನ್ನೂ ಓದಿ: Hungama: ಹಂಗಾಮದಿಂದ ‘ಹಂಗಾಮ ಮ್ಯೂಸಿಕ್ ಕ್ವಿಜ್ ಅಲೆಕ್ಸಾ ಸ್ಕಿಲ್’ ಲಾಂಚ್: ಸಂಗೀತ ಜ್ಞಾನ ಪರೀಕ್ಷಿಸಲು ವಿವಿಧ ಆಟ

Meghana Raj: ಪುತ್ರ ರಾಯನ್​ ಜನ್ಮದಿನಕ್ಕೆ ಮೇಘನಾ ನೀಡಿರುವ ಸಂದೇಶವೇನು?

Published On - 2:16 pm, Fri, 22 October 21

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ