AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್‌ನಲ್ಲಿ ರಥಯಾತ್ರೆ ವೀಕ್ಷಿಸುತ್ತಿದ್ದವರ ಮೇಲೆ ಕುಸಿದ ಬಾಲ್ಕನಿ; 8 ಮಂದಿಗೆ ಗಾಯ

ಭಗವಾನ್ ಜಗನ್ನಾಥನ 146 ನೇ ರಥಯಾತ್ರೆಯು ಮಂಗಳವಾರ ಅಹಮದಾಬಾದ್‌ನಲ್ಲಿ ಪ್ರಾರಂಭವಾಗುತ್ತಿದ್ದಂತೆ, ದೇವರ ದರ್ಶನಕ್ಕಾಗಿ ಭವ್ಯವಾದ ಮೆರವಣಿಗೆಯ 18 ಕಿಮೀ ಮಾರ್ಗದಲ್ಲಿ ಲಕ್ಷಾಂತರ ಭಕ್ತರು ಸೇರಿದ್ದರು.

ಅಹಮದಾಬಾದ್‌ನಲ್ಲಿ ರಥಯಾತ್ರೆ ವೀಕ್ಷಿಸುತ್ತಿದ್ದವರ ಮೇಲೆ ಕುಸಿದ ಬಾಲ್ಕನಿ; 8 ಮಂದಿಗೆ ಗಾಯ
ಕಟ್ಟಡ ಕುಸಿತ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 20, 2023 | 6:56 PM

Share

ಗುಜರಾತ್‌ನಲ್ಲಿ (Gujarat) ಮಂಗಳವಾರ ಎರಡು ಅಂತಸ್ತಿನ ಕಟ್ಟಡದ ಬಾಲ್ಕನಿ ಕುಸಿದು (building collapses) ಎಂಟು ಜನರು ಗಾಯಗೊಂಡಿದ್ದಾರೆ. ಅಹಮದಾಬಾದ್‌ನ (Ahmedabad) ದರಿಯಾಪುರದಲ್ಲಿ ಜಗನ್ನಾಥ ದೇವರ ರಥಯಾತ್ರೆ ವೇಳೆ ಈ ಘಟನೆ ನಡೆದಿದೆ. ರಥಯಾತ್ರೆಯ ಮೆರವಣಿಗೆಯನ್ನು ನೋಡುತ್ತಿದ್ದಂತೆ ಕಟ್ಟಡದ ಒಂದು ಭಾಗ ಕುಸಿದಿದೆ. ಭಗವಾನ್ ಜಗನ್ನಾಥನ 146 ನೇ ರಥಯಾತ್ರೆಯು ಮಂಗಳವಾರ ಅಹಮದಾಬಾದ್‌ನಲ್ಲಿ ಪ್ರಾರಂಭವಾಗುತ್ತಿದ್ದಂತೆ, ದೇವರ ದರ್ಶನಕ್ಕಾಗಿ ಭವ್ಯವಾದ ಮೆರವಣಿಗೆಯ 18 ಕಿಮೀ ಮಾರ್ಗದಲ್ಲಿ ಲಕ್ಷಾಂತರ ಭಕ್ತರು ಸೇರಿದ್ದರು.

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಬೆಳಿಗ್ಗೆ ಚಿನ್ನದ ಪೊರಕೆಯನ್ನು ಬಳಸಿ ರಥಗಳ ಮಾರ್ಗವನ್ನು ಸ್ವಚ್ಛಗೊಳಿಸುವ ಸಾಂಕೇತಿಕ ಆಚರಣೆಯಾದ ‘ಪಹಿಂದ್ ವಿಧಿ’ ಮಾಡಿದರು ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಬೆಳಗ್ಗೆ ದೇವಸ್ಥಾನದಲ್ಲಿ ನಡೆದ ಮಂಗಳ ಆರತಿಯಲ್ಲಿ ಪಾಲ್ಗೊಂಡಿದ್ದರು.

ಈ ಬಗ್ಗೆ ಟ್ವೀಟ್ ಮಾಡಿದ ಅವರು ರಥಯಾತ್ರೆಯನ್ನು “ನಂಬಿಕೆ ಮತ್ತು ಭಕ್ತಿಯ ಸಂಗಮ” ಎಂದು ಕರೆದಿದ್ದು, ಭಗವಂತನ ದರ್ಶನ ಅನುಭವವನ್ನು ದೈವಿಕ ಮತ್ತು ಮರೆಯಲಾಗದ್ದು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಇಳಕಲ್‌ನಲ್ಲಿ ವರುಣನ ಅಬ್ಬರ: ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ!
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
ಜುಲೈ 20 ರಿಂದ 26ರ ವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿ ತಿಳಿಯಿರಿ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
'ನನ್ನ ದೇವರನ್ನೇ ಕಳೆದುಕೊಂಡೆ': ತಾಯಿ ನೆನೆದು ಗಳ ಗಳತೆ ಅತ್ತ ರೇವಣ್ಣ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ತಾಯಿ ಹೇಳಿಕೊಟ್ಟ ಬದುಕಿನ ಪಾಠ ಮರೆಯಲಾಗಲ್ಲ: ಹೆಚ್​.ಡಿ. ಕುಮಾರಸ್ವಾಮಿ ಭಾವುಕ
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು
ಇಂದು ಈ ರಾಶಿಯವರಿಗೆ ದೈವಾನುಗ್ರಹದಿಂದ ಮಾಡಿದ ಕೆಲಸಗಳಲ್ಲಿ ಯಶಸ್ಸು