AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಹಲಾಲ್ ಆಹಾರಗಳನ್ನು ನಿಷೇಧಿಸುವಂತೆ ಬಿಜೆಪಿ ನಾಯಕರ ಆಗ್ರಹ; ಅದು ಉಗ್ರಗಾಮಿಗಳ ಅಸ್ತ್ರವೆಂದ ಪಕ್ಷ

ಕೇರಳದಲ್ಲಿ ನಡೆಯುತ್ತಿರುವ ಈ ಹಲಾಲ್​ ಸಂಬಂಧಿತ ವಿದ್ಯಮಾನ ಆಕಸ್ಮಿಕವೂ ಅಲ್ಲ, ಅದು ಮುಗ್ಧತೆಯಿಂದ ಆಗುತ್ತಿರುವುದೂ ಅಲ್ಲ ಎಂದು ಕೇರಳ ಬಿಜೆಪಿ ಅಧ್ಯಕ್ಷ ಹೇಳಿದ್ದಾರೆ.

ಕೇರಳದಲ್ಲಿ ಹಲಾಲ್ ಆಹಾರಗಳನ್ನು ನಿಷೇಧಿಸುವಂತೆ ಬಿಜೆಪಿ ನಾಯಕರ ಆಗ್ರಹ; ಅದು ಉಗ್ರಗಾಮಿಗಳ ಅಸ್ತ್ರವೆಂದ ಪಕ್ಷ
ಬಿಜೆಪಿ ನಾಯಕರು
TV9 Web
| Edited By: |

Updated on:Nov 22, 2021 | 8:55 PM

Share

ಕೇರಳ ರಾಜ್ಯಾದ್ಯಂತ ಹಲಾಲ್​ ಆಹಾರ (Halal Food) ಮತ್ತು ರೆಸ್ಟೋರೆಂಟ್​ಗಳಲ್ಲಿ ಹಾಕುವ ಹಲಾಲ್ ಬೋರ್ಡ್​ಗಳನ್ನು ನಿಷೇಧಿಸಬೇಕು ಎಂದು ಅಲ್ಲಿನ ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ.  ಇತ್ತೀಚೆಗೆ ಶಬರಿಮಲೆಯಲ್ಲಿ ತಯಾರಾಗುವ ಪ್ರಸಾದಲ್ಲಿ ಹಲಾಲ್​ ಪ್ರಮಾಣೀಕೃತ ಬೆಲ್ಲ ಬಳಸಲಾಗುತ್ತದೆ ಎಂದು ಆರೋಪಿಸಿ ವಿಶ್ವ ಹಿಂದು ಪರಿಷತ್​ ರಾಜ್ಯ ಅಧ್ಯಕ್ಷ ಎಸ್​.ಜೆ.ಆರ್​.ಕುಮಾರ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲ, ಆಹಾರವನ್ನು ಅಪವಿತ್ರಗೊಳಿಸಲು ಇಸ್ಲಾಂ ಮೌಲ್ವಿಗಳು ಅದರ ಮೇಲೆ ಉಗುಳುತ್ತಾರೆ ಎಂಬುದೊಂದು ಸುದ್ದಿಯೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಇದೀಗ ಬಿಜೆಪಿ ಕೇರಳ ಸರ್ಕಾರವನ್ನು ಹೀಗೆಂದು ಆಗ್ರಹಿಸಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಪಿ.ಸುಧೀರ್​, ಹಲಾಲ್ ಕೂಡ ತ್ರಿವಳಿ ತಲಾಖ್​​ನಂತೆ ಒಂದು ಅನಿಷ್ಠ ಪದ್ಧತಿ. ಹಲಾಲ್​ ಒಂದು ಧಾರ್ಮಿಕ ಪದ್ಧತಿಯೆಂದು ಬಿಜೆಪಿ ಎಂದಿಗೂ ನಂಬುವುದಿಲ್ಲ. ಇಸ್ಲಾಮಿಕ್​ ಪಂಡಿತರೂ ಕೂಡ ಇದನ್ನು ಧಾರ್ಮಿಕ ಪದ್ಧತಿ ಎಂದು ಭಾವಿಸಿದ್ದಾರೆಂದು ನಾವು ನಂಬುವುದಿಲ್ಲ. ಆದರೆ ಹಲಾಲ್​ಗೆ ಧಾರ್ಮಿಕ ಸ್ವರೂಪ ಕೊಡುವ ಮೂಲಕ ಉಗ್ರವಾದಿಗಳ ಗುಂಪುಗಳು ಕೇರಳದಲ್ಲಿ ಕೋಮುವಾದ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಈಗ ಹಲಾಲ್​ ಬೋರ್ಡ್​ಗಳು ಹೆಚ್ಚುತ್ತಿವೆ. ಹಾಗೊಮ್ಮೆ ಧರ್ಮದ ಪರವಾಗಿಯೇ ಇದನ್ನು ಮಾಡುತ್ತಿದ್ದರೆ, ಇದನ್ನು ಸರಿಪಡಿಸಲು ಇಸ್ಲಾಮಿಕ್ ಪಂಡಿತರು ಕೂಡಲೇ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್​ ಕೂಡ ಇದನ್ನೇ ಹೇಳಿದ್ದಾರೆ.  ಕೇರಳದಲ್ಲಿ ನಡೆಯುತ್ತಿರುವ ಈ ಹಲಾಲ್​ ಸಂಬಂಧಿತ ವಿದ್ಯಮಾನ ಆಕಸ್ಮಿಕವೂ ಅಲ್ಲ, ಅದು ಮುಗ್ಧತೆಯಿಂದ ಆಗುತ್ತಿರುವುದೂ ಅಲ್ಲ. ಧರ್ಮದ ಹೆಸರಲ್ಲಿ ಕೆಲವು ಉಗ್ರಗಾಮಿಗಳು ಈ ಹಲಾಲ್​ ಸಂಸ್ಕೃತಿಯನ್ನು ಉತ್ತೇಜಿಸುತ್ತಿವೆ. ಕೇರಳದಲ್ಲಿ ಜನರನ್ನು ವಿಭಜಿಸಿ, ಸಮಾಜದಲ್ಲಿ ಉದ್ವಿಗ್ನತೆ ಸೃಷ್ಟಿಸುವುದು ಇದರ ಹಿಂದಿನ ಸ್ಪಷ್ಟವಾದ ಉದ್ದೇಶ ಎಂದು ಆರೋಪಿಸಿದ್ದಾರೆ.  ಇನ್ನು ಕೇರಳ ಪ್ರಾದೇಶಿಕ ಕ್ರಿಶ್ಚಿಯನ್ ಪಕ್ಷ ಕೇರಳ ಕಾಂಗ್ರೆಸ್​ (ಎಂ) ಪಿ.ಸಿ.ಜಾರ್ಜ್​ ಕೂಡ ಈ ವಿಚಾರದಲ್ಲಿ ಬಿಜೆಪಿ ನಾಯಕರಿಗೆ ಬೆಂಬಲ ನೀಡಿದ್ದಾರೆ. ಹಲಾಲ್​ ಆಹಾರವೆಂಬುದು ಧಾರ್ಮಿಕ ಮೂಲಭೂತವಾದದ ಭಾಗವಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಾಲಕೆರೆ ಶ್ರೀ ಅಭಿನವ ಅನ್ನದಾನೇಶ್ವರ ಸ್ವಾಮಿಗಳು ಲಿಂಗೈಕ್ಯ; ಅಂತಿಮ ದರ್ಶನಕ್ಕೆ ವ್ಯವಸ್ಥೆ

Published On - 8:54 pm, Mon, 22 November 21

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ