AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಹಲಾಲ್ ಆಹಾರಗಳನ್ನು ನಿಷೇಧಿಸುವಂತೆ ಬಿಜೆಪಿ ನಾಯಕರ ಆಗ್ರಹ; ಅದು ಉಗ್ರಗಾಮಿಗಳ ಅಸ್ತ್ರವೆಂದ ಪಕ್ಷ

ಕೇರಳದಲ್ಲಿ ನಡೆಯುತ್ತಿರುವ ಈ ಹಲಾಲ್​ ಸಂಬಂಧಿತ ವಿದ್ಯಮಾನ ಆಕಸ್ಮಿಕವೂ ಅಲ್ಲ, ಅದು ಮುಗ್ಧತೆಯಿಂದ ಆಗುತ್ತಿರುವುದೂ ಅಲ್ಲ ಎಂದು ಕೇರಳ ಬಿಜೆಪಿ ಅಧ್ಯಕ್ಷ ಹೇಳಿದ್ದಾರೆ.

ಕೇರಳದಲ್ಲಿ ಹಲಾಲ್ ಆಹಾರಗಳನ್ನು ನಿಷೇಧಿಸುವಂತೆ ಬಿಜೆಪಿ ನಾಯಕರ ಆಗ್ರಹ; ಅದು ಉಗ್ರಗಾಮಿಗಳ ಅಸ್ತ್ರವೆಂದ ಪಕ್ಷ
ಬಿಜೆಪಿ ನಾಯಕರು
TV9 Web
| Edited By: |

Updated on:Nov 22, 2021 | 8:55 PM

Share

ಕೇರಳ ರಾಜ್ಯಾದ್ಯಂತ ಹಲಾಲ್​ ಆಹಾರ (Halal Food) ಮತ್ತು ರೆಸ್ಟೋರೆಂಟ್​ಗಳಲ್ಲಿ ಹಾಕುವ ಹಲಾಲ್ ಬೋರ್ಡ್​ಗಳನ್ನು ನಿಷೇಧಿಸಬೇಕು ಎಂದು ಅಲ್ಲಿನ ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ.  ಇತ್ತೀಚೆಗೆ ಶಬರಿಮಲೆಯಲ್ಲಿ ತಯಾರಾಗುವ ಪ್ರಸಾದಲ್ಲಿ ಹಲಾಲ್​ ಪ್ರಮಾಣೀಕೃತ ಬೆಲ್ಲ ಬಳಸಲಾಗುತ್ತದೆ ಎಂದು ಆರೋಪಿಸಿ ವಿಶ್ವ ಹಿಂದು ಪರಿಷತ್​ ರಾಜ್ಯ ಅಧ್ಯಕ್ಷ ಎಸ್​.ಜೆ.ಆರ್​.ಕುಮಾರ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲ, ಆಹಾರವನ್ನು ಅಪವಿತ್ರಗೊಳಿಸಲು ಇಸ್ಲಾಂ ಮೌಲ್ವಿಗಳು ಅದರ ಮೇಲೆ ಉಗುಳುತ್ತಾರೆ ಎಂಬುದೊಂದು ಸುದ್ದಿಯೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಇದೀಗ ಬಿಜೆಪಿ ಕೇರಳ ಸರ್ಕಾರವನ್ನು ಹೀಗೆಂದು ಆಗ್ರಹಿಸಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಪಿ.ಸುಧೀರ್​, ಹಲಾಲ್ ಕೂಡ ತ್ರಿವಳಿ ತಲಾಖ್​​ನಂತೆ ಒಂದು ಅನಿಷ್ಠ ಪದ್ಧತಿ. ಹಲಾಲ್​ ಒಂದು ಧಾರ್ಮಿಕ ಪದ್ಧತಿಯೆಂದು ಬಿಜೆಪಿ ಎಂದಿಗೂ ನಂಬುವುದಿಲ್ಲ. ಇಸ್ಲಾಮಿಕ್​ ಪಂಡಿತರೂ ಕೂಡ ಇದನ್ನು ಧಾರ್ಮಿಕ ಪದ್ಧತಿ ಎಂದು ಭಾವಿಸಿದ್ದಾರೆಂದು ನಾವು ನಂಬುವುದಿಲ್ಲ. ಆದರೆ ಹಲಾಲ್​ಗೆ ಧಾರ್ಮಿಕ ಸ್ವರೂಪ ಕೊಡುವ ಮೂಲಕ ಉಗ್ರವಾದಿಗಳ ಗುಂಪುಗಳು ಕೇರಳದಲ್ಲಿ ಕೋಮುವಾದ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಈಗ ಹಲಾಲ್​ ಬೋರ್ಡ್​ಗಳು ಹೆಚ್ಚುತ್ತಿವೆ. ಹಾಗೊಮ್ಮೆ ಧರ್ಮದ ಪರವಾಗಿಯೇ ಇದನ್ನು ಮಾಡುತ್ತಿದ್ದರೆ, ಇದನ್ನು ಸರಿಪಡಿಸಲು ಇಸ್ಲಾಮಿಕ್ ಪಂಡಿತರು ಕೂಡಲೇ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್​ ಕೂಡ ಇದನ್ನೇ ಹೇಳಿದ್ದಾರೆ.  ಕೇರಳದಲ್ಲಿ ನಡೆಯುತ್ತಿರುವ ಈ ಹಲಾಲ್​ ಸಂಬಂಧಿತ ವಿದ್ಯಮಾನ ಆಕಸ್ಮಿಕವೂ ಅಲ್ಲ, ಅದು ಮುಗ್ಧತೆಯಿಂದ ಆಗುತ್ತಿರುವುದೂ ಅಲ್ಲ. ಧರ್ಮದ ಹೆಸರಲ್ಲಿ ಕೆಲವು ಉಗ್ರಗಾಮಿಗಳು ಈ ಹಲಾಲ್​ ಸಂಸ್ಕೃತಿಯನ್ನು ಉತ್ತೇಜಿಸುತ್ತಿವೆ. ಕೇರಳದಲ್ಲಿ ಜನರನ್ನು ವಿಭಜಿಸಿ, ಸಮಾಜದಲ್ಲಿ ಉದ್ವಿಗ್ನತೆ ಸೃಷ್ಟಿಸುವುದು ಇದರ ಹಿಂದಿನ ಸ್ಪಷ್ಟವಾದ ಉದ್ದೇಶ ಎಂದು ಆರೋಪಿಸಿದ್ದಾರೆ.  ಇನ್ನು ಕೇರಳ ಪ್ರಾದೇಶಿಕ ಕ್ರಿಶ್ಚಿಯನ್ ಪಕ್ಷ ಕೇರಳ ಕಾಂಗ್ರೆಸ್​ (ಎಂ) ಪಿ.ಸಿ.ಜಾರ್ಜ್​ ಕೂಡ ಈ ವಿಚಾರದಲ್ಲಿ ಬಿಜೆಪಿ ನಾಯಕರಿಗೆ ಬೆಂಬಲ ನೀಡಿದ್ದಾರೆ. ಹಲಾಲ್​ ಆಹಾರವೆಂಬುದು ಧಾರ್ಮಿಕ ಮೂಲಭೂತವಾದದ ಭಾಗವಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಾಲಕೆರೆ ಶ್ರೀ ಅಭಿನವ ಅನ್ನದಾನೇಶ್ವರ ಸ್ವಾಮಿಗಳು ಲಿಂಗೈಕ್ಯ; ಅಂತಿಮ ದರ್ಶನಕ್ಕೆ ವ್ಯವಸ್ಥೆ

Published On - 8:54 pm, Mon, 22 November 21

Follow Us
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್