Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಹಲಾಲ್ ಆಹಾರಗಳನ್ನು ನಿಷೇಧಿಸುವಂತೆ ಬಿಜೆಪಿ ನಾಯಕರ ಆಗ್ರಹ; ಅದು ಉಗ್ರಗಾಮಿಗಳ ಅಸ್ತ್ರವೆಂದ ಪಕ್ಷ

ಕೇರಳದಲ್ಲಿ ನಡೆಯುತ್ತಿರುವ ಈ ಹಲಾಲ್​ ಸಂಬಂಧಿತ ವಿದ್ಯಮಾನ ಆಕಸ್ಮಿಕವೂ ಅಲ್ಲ, ಅದು ಮುಗ್ಧತೆಯಿಂದ ಆಗುತ್ತಿರುವುದೂ ಅಲ್ಲ ಎಂದು ಕೇರಳ ಬಿಜೆಪಿ ಅಧ್ಯಕ್ಷ ಹೇಳಿದ್ದಾರೆ.

ಕೇರಳದಲ್ಲಿ ಹಲಾಲ್ ಆಹಾರಗಳನ್ನು ನಿಷೇಧಿಸುವಂತೆ ಬಿಜೆಪಿ ನಾಯಕರ ಆಗ್ರಹ; ಅದು ಉಗ್ರಗಾಮಿಗಳ ಅಸ್ತ್ರವೆಂದ ಪಕ್ಷ
ಬಿಜೆಪಿ ನಾಯಕರು
Follow us
TV9 Web
| Updated By: Lakshmi Hegde

Updated on:Nov 22, 2021 | 8:55 PM

ಕೇರಳ ರಾಜ್ಯಾದ್ಯಂತ ಹಲಾಲ್​ ಆಹಾರ (Halal Food) ಮತ್ತು ರೆಸ್ಟೋರೆಂಟ್​ಗಳಲ್ಲಿ ಹಾಕುವ ಹಲಾಲ್ ಬೋರ್ಡ್​ಗಳನ್ನು ನಿಷೇಧಿಸಬೇಕು ಎಂದು ಅಲ್ಲಿನ ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ.  ಇತ್ತೀಚೆಗೆ ಶಬರಿಮಲೆಯಲ್ಲಿ ತಯಾರಾಗುವ ಪ್ರಸಾದಲ್ಲಿ ಹಲಾಲ್​ ಪ್ರಮಾಣೀಕೃತ ಬೆಲ್ಲ ಬಳಸಲಾಗುತ್ತದೆ ಎಂದು ಆರೋಪಿಸಿ ವಿಶ್ವ ಹಿಂದು ಪರಿಷತ್​ ರಾಜ್ಯ ಅಧ್ಯಕ್ಷ ಎಸ್​.ಜೆ.ಆರ್​.ಕುಮಾರ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲ, ಆಹಾರವನ್ನು ಅಪವಿತ್ರಗೊಳಿಸಲು ಇಸ್ಲಾಂ ಮೌಲ್ವಿಗಳು ಅದರ ಮೇಲೆ ಉಗುಳುತ್ತಾರೆ ಎಂಬುದೊಂದು ಸುದ್ದಿಯೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಇದೀಗ ಬಿಜೆಪಿ ಕೇರಳ ಸರ್ಕಾರವನ್ನು ಹೀಗೆಂದು ಆಗ್ರಹಿಸಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಪಿ.ಸುಧೀರ್​, ಹಲಾಲ್ ಕೂಡ ತ್ರಿವಳಿ ತಲಾಖ್​​ನಂತೆ ಒಂದು ಅನಿಷ್ಠ ಪದ್ಧತಿ. ಹಲಾಲ್​ ಒಂದು ಧಾರ್ಮಿಕ ಪದ್ಧತಿಯೆಂದು ಬಿಜೆಪಿ ಎಂದಿಗೂ ನಂಬುವುದಿಲ್ಲ. ಇಸ್ಲಾಮಿಕ್​ ಪಂಡಿತರೂ ಕೂಡ ಇದನ್ನು ಧಾರ್ಮಿಕ ಪದ್ಧತಿ ಎಂದು ಭಾವಿಸಿದ್ದಾರೆಂದು ನಾವು ನಂಬುವುದಿಲ್ಲ. ಆದರೆ ಹಲಾಲ್​ಗೆ ಧಾರ್ಮಿಕ ಸ್ವರೂಪ ಕೊಡುವ ಮೂಲಕ ಉಗ್ರವಾದಿಗಳ ಗುಂಪುಗಳು ಕೇರಳದಲ್ಲಿ ಕೋಮುವಾದ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಈಗ ಹಲಾಲ್​ ಬೋರ್ಡ್​ಗಳು ಹೆಚ್ಚುತ್ತಿವೆ. ಹಾಗೊಮ್ಮೆ ಧರ್ಮದ ಪರವಾಗಿಯೇ ಇದನ್ನು ಮಾಡುತ್ತಿದ್ದರೆ, ಇದನ್ನು ಸರಿಪಡಿಸಲು ಇಸ್ಲಾಮಿಕ್ ಪಂಡಿತರು ಕೂಡಲೇ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್​ ಕೂಡ ಇದನ್ನೇ ಹೇಳಿದ್ದಾರೆ.  ಕೇರಳದಲ್ಲಿ ನಡೆಯುತ್ತಿರುವ ಈ ಹಲಾಲ್​ ಸಂಬಂಧಿತ ವಿದ್ಯಮಾನ ಆಕಸ್ಮಿಕವೂ ಅಲ್ಲ, ಅದು ಮುಗ್ಧತೆಯಿಂದ ಆಗುತ್ತಿರುವುದೂ ಅಲ್ಲ. ಧರ್ಮದ ಹೆಸರಲ್ಲಿ ಕೆಲವು ಉಗ್ರಗಾಮಿಗಳು ಈ ಹಲಾಲ್​ ಸಂಸ್ಕೃತಿಯನ್ನು ಉತ್ತೇಜಿಸುತ್ತಿವೆ. ಕೇರಳದಲ್ಲಿ ಜನರನ್ನು ವಿಭಜಿಸಿ, ಸಮಾಜದಲ್ಲಿ ಉದ್ವಿಗ್ನತೆ ಸೃಷ್ಟಿಸುವುದು ಇದರ ಹಿಂದಿನ ಸ್ಪಷ್ಟವಾದ ಉದ್ದೇಶ ಎಂದು ಆರೋಪಿಸಿದ್ದಾರೆ.  ಇನ್ನು ಕೇರಳ ಪ್ರಾದೇಶಿಕ ಕ್ರಿಶ್ಚಿಯನ್ ಪಕ್ಷ ಕೇರಳ ಕಾಂಗ್ರೆಸ್​ (ಎಂ) ಪಿ.ಸಿ.ಜಾರ್ಜ್​ ಕೂಡ ಈ ವಿಚಾರದಲ್ಲಿ ಬಿಜೆಪಿ ನಾಯಕರಿಗೆ ಬೆಂಬಲ ನೀಡಿದ್ದಾರೆ. ಹಲಾಲ್​ ಆಹಾರವೆಂಬುದು ಧಾರ್ಮಿಕ ಮೂಲಭೂತವಾದದ ಭಾಗವಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಾಲಕೆರೆ ಶ್ರೀ ಅಭಿನವ ಅನ್ನದಾನೇಶ್ವರ ಸ್ವಾಮಿಗಳು ಲಿಂಗೈಕ್ಯ; ಅಂತಿಮ ದರ್ಶನಕ್ಕೆ ವ್ಯವಸ್ಥೆ

Published On - 8:54 pm, Mon, 22 November 21

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್