AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಹಲಾಲ್ ಆಹಾರಗಳನ್ನು ನಿಷೇಧಿಸುವಂತೆ ಬಿಜೆಪಿ ನಾಯಕರ ಆಗ್ರಹ; ಅದು ಉಗ್ರಗಾಮಿಗಳ ಅಸ್ತ್ರವೆಂದ ಪಕ್ಷ

ಕೇರಳದಲ್ಲಿ ನಡೆಯುತ್ತಿರುವ ಈ ಹಲಾಲ್​ ಸಂಬಂಧಿತ ವಿದ್ಯಮಾನ ಆಕಸ್ಮಿಕವೂ ಅಲ್ಲ, ಅದು ಮುಗ್ಧತೆಯಿಂದ ಆಗುತ್ತಿರುವುದೂ ಅಲ್ಲ ಎಂದು ಕೇರಳ ಬಿಜೆಪಿ ಅಧ್ಯಕ್ಷ ಹೇಳಿದ್ದಾರೆ.

ಕೇರಳದಲ್ಲಿ ಹಲಾಲ್ ಆಹಾರಗಳನ್ನು ನಿಷೇಧಿಸುವಂತೆ ಬಿಜೆಪಿ ನಾಯಕರ ಆಗ್ರಹ; ಅದು ಉಗ್ರಗಾಮಿಗಳ ಅಸ್ತ್ರವೆಂದ ಪಕ್ಷ
ಬಿಜೆಪಿ ನಾಯಕರು
TV9 Web
| Edited By: |

Updated on:Nov 22, 2021 | 8:55 PM

Share

ಕೇರಳ ರಾಜ್ಯಾದ್ಯಂತ ಹಲಾಲ್​ ಆಹಾರ (Halal Food) ಮತ್ತು ರೆಸ್ಟೋರೆಂಟ್​ಗಳಲ್ಲಿ ಹಾಕುವ ಹಲಾಲ್ ಬೋರ್ಡ್​ಗಳನ್ನು ನಿಷೇಧಿಸಬೇಕು ಎಂದು ಅಲ್ಲಿನ ರಾಜ್ಯ ಸರ್ಕಾರಕ್ಕೆ ಬಿಜೆಪಿ ಆಗ್ರಹಿಸಿದೆ.  ಇತ್ತೀಚೆಗೆ ಶಬರಿಮಲೆಯಲ್ಲಿ ತಯಾರಾಗುವ ಪ್ರಸಾದಲ್ಲಿ ಹಲಾಲ್​ ಪ್ರಮಾಣೀಕೃತ ಬೆಲ್ಲ ಬಳಸಲಾಗುತ್ತದೆ ಎಂದು ಆರೋಪಿಸಿ ವಿಶ್ವ ಹಿಂದು ಪರಿಷತ್​ ರಾಜ್ಯ ಅಧ್ಯಕ್ಷ ಎಸ್​.ಜೆ.ಆರ್​.ಕುಮಾರ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ. ಅಷ್ಟೇ ಅಲ್ಲ, ಆಹಾರವನ್ನು ಅಪವಿತ್ರಗೊಳಿಸಲು ಇಸ್ಲಾಂ ಮೌಲ್ವಿಗಳು ಅದರ ಮೇಲೆ ಉಗುಳುತ್ತಾರೆ ಎಂಬುದೊಂದು ಸುದ್ದಿಯೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗುತ್ತಿದೆ. ಇದೀಗ ಬಿಜೆಪಿ ಕೇರಳ ಸರ್ಕಾರವನ್ನು ಹೀಗೆಂದು ಆಗ್ರಹಿಸಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನಕಾರ್ಯದರ್ಶಿ ಪಿ.ಸುಧೀರ್​, ಹಲಾಲ್ ಕೂಡ ತ್ರಿವಳಿ ತಲಾಖ್​​ನಂತೆ ಒಂದು ಅನಿಷ್ಠ ಪದ್ಧತಿ. ಹಲಾಲ್​ ಒಂದು ಧಾರ್ಮಿಕ ಪದ್ಧತಿಯೆಂದು ಬಿಜೆಪಿ ಎಂದಿಗೂ ನಂಬುವುದಿಲ್ಲ. ಇಸ್ಲಾಮಿಕ್​ ಪಂಡಿತರೂ ಕೂಡ ಇದನ್ನು ಧಾರ್ಮಿಕ ಪದ್ಧತಿ ಎಂದು ಭಾವಿಸಿದ್ದಾರೆಂದು ನಾವು ನಂಬುವುದಿಲ್ಲ. ಆದರೆ ಹಲಾಲ್​ಗೆ ಧಾರ್ಮಿಕ ಸ್ವರೂಪ ಕೊಡುವ ಮೂಲಕ ಉಗ್ರವಾದಿಗಳ ಗುಂಪುಗಳು ಕೇರಳದಲ್ಲಿ ಕೋಮುವಾದ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಈಗ ಹಲಾಲ್​ ಬೋರ್ಡ್​ಗಳು ಹೆಚ್ಚುತ್ತಿವೆ. ಹಾಗೊಮ್ಮೆ ಧರ್ಮದ ಪರವಾಗಿಯೇ ಇದನ್ನು ಮಾಡುತ್ತಿದ್ದರೆ, ಇದನ್ನು ಸರಿಪಡಿಸಲು ಇಸ್ಲಾಮಿಕ್ ಪಂಡಿತರು ಕೂಡಲೇ ಪ್ರಯತ್ನ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಕೇರಳ ರಾಜ್ಯಾಧ್ಯಕ್ಷ ಕೆ.ಸುರೇಂದ್ರನ್​ ಕೂಡ ಇದನ್ನೇ ಹೇಳಿದ್ದಾರೆ.  ಕೇರಳದಲ್ಲಿ ನಡೆಯುತ್ತಿರುವ ಈ ಹಲಾಲ್​ ಸಂಬಂಧಿತ ವಿದ್ಯಮಾನ ಆಕಸ್ಮಿಕವೂ ಅಲ್ಲ, ಅದು ಮುಗ್ಧತೆಯಿಂದ ಆಗುತ್ತಿರುವುದೂ ಅಲ್ಲ. ಧರ್ಮದ ಹೆಸರಲ್ಲಿ ಕೆಲವು ಉಗ್ರಗಾಮಿಗಳು ಈ ಹಲಾಲ್​ ಸಂಸ್ಕೃತಿಯನ್ನು ಉತ್ತೇಜಿಸುತ್ತಿವೆ. ಕೇರಳದಲ್ಲಿ ಜನರನ್ನು ವಿಭಜಿಸಿ, ಸಮಾಜದಲ್ಲಿ ಉದ್ವಿಗ್ನತೆ ಸೃಷ್ಟಿಸುವುದು ಇದರ ಹಿಂದಿನ ಸ್ಪಷ್ಟವಾದ ಉದ್ದೇಶ ಎಂದು ಆರೋಪಿಸಿದ್ದಾರೆ.  ಇನ್ನು ಕೇರಳ ಪ್ರಾದೇಶಿಕ ಕ್ರಿಶ್ಚಿಯನ್ ಪಕ್ಷ ಕೇರಳ ಕಾಂಗ್ರೆಸ್​ (ಎಂ) ಪಿ.ಸಿ.ಜಾರ್ಜ್​ ಕೂಡ ಈ ವಿಚಾರದಲ್ಲಿ ಬಿಜೆಪಿ ನಾಯಕರಿಗೆ ಬೆಂಬಲ ನೀಡಿದ್ದಾರೆ. ಹಲಾಲ್​ ಆಹಾರವೆಂಬುದು ಧಾರ್ಮಿಕ ಮೂಲಭೂತವಾದದ ಭಾಗವಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಾಲಕೆರೆ ಶ್ರೀ ಅಭಿನವ ಅನ್ನದಾನೇಶ್ವರ ಸ್ವಾಮಿಗಳು ಲಿಂಗೈಕ್ಯ; ಅಂತಿಮ ದರ್ಶನಕ್ಕೆ ವ್ಯವಸ್ಥೆ

Published On - 8:54 pm, Mon, 22 November 21

Follow Us
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ