AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಿನ ಮಡಕೆ ಬಳಸಿ; ತಮ್ಮ ಇಲಾಖೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ನಿಷೇಧಕ್ಕೆ ಉತ್ತರ ಪ್ರದೇಶದ ಸಚಿವ ಆದೇಶ

ಪ್ಲಾಸ್ಟಿಕ್​ ಬಾಟಲಿಗಳ ಬದಲು ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆ ಮತ್ತು ಕುಲ್ಹಾದ್‌ಗಳನ್ನು ಬಳಸುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸಚಿವ ಧರಮ್​ವೀರ್ ಪ್ರಜಾಪತಿ ಸೂಚಿಸಿದ್ದಾರೆ.

ಮಣ್ಣಿನ ಮಡಕೆ ಬಳಸಿ; ತಮ್ಮ ಇಲಾಖೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ನಿಷೇಧಕ್ಕೆ ಉತ್ತರ ಪ್ರದೇಶದ ಸಚಿವ ಆದೇಶ
ಪ್ಲಾಸ್ಟಿಕ್ ಬಾಟಲಿ
TV9 Web
| Edited By: |

Updated on: Apr 07, 2022 | 8:18 PM

Share

ನವದೆಹಲಿ: ಉತ್ತರ ಪ್ರದೇಶದ ಗೃಹರಕ್ಷಕ ದಳ ಮತ್ತು ಕಾರಾಗೃಹ ಇಲಾಖೆ ಸಚಿವ ಧರಮ್​ವೀರ್ ಪ್ರಜಾಪತಿ ತಮ್ಮ ಇಲಾಖೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ (Plastic Water Bottles) ಬಳಕೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಬೇರೆ ಸರ್ಕಾರ ಹಾಗೂ ಇಲಾಖೆಗಳಿಗೆ ಮಾದರಿಯಾಗಿದ್ದಾರೆ. ಎಲ್ಲ ಕಡೆ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ನೀಡಲಾಗುತ್ತದೆ. ಇದರಿಂದ ಪ್ಲಾಸ್ಟಿಕ್ ತ್ಯಾಜ್ಯವೂ ಹೆಚ್ಚಾಗುತ್ತಿದೆ. ಹೀಗಾಗಿ, ಪ್ಲಾಸ್ಟಿಕ್ ನೀರಿನ ಬಾಟಲಿಯ ಬದಲಾಗಿ ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆಗಳನ್ನು ಬಳಸಿಕೊಳ್ಳುವಂತೆ ಸಚಿವ ಧರಮ್​ವೀರ್ ಪ್ರಜಾಪತಿ ಸೂಚಿಸಿದ್ದಾರೆ.

ಪರಿಸರ ಮತ್ತು ಆರೋಗ್ಯ ಸಂಬಂಧಿ ಕಾರಣಗಳಿಂದ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಯನ್ನು ನಮ್ಮ ಇಲಾಖೆಯಲ್ಲಿ ನಿಷೇಧಿಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯಿಂದ ಕ್ಯಾನ್ಸರ್​ನಂತಹ ಗಂಭೀರ ಕಾಯಿಲೆಗಳು ಬರಬಹುದು ಆದ್ದರಿಂದ ಇದರ ಬಳಕೆಯನ್ನು ತಪ್ಪಿಸಬೇಕು ಎಂದು ಸಚಿವ ಧರಮ್​ವೀರ್ ಪ್ರಜಾಪತಿ ಹೇಳಿದ್ದಾರೆ.

ಪ್ಲಾಸ್ಟಿಕ್​ ಬಾಟಲಿಗಳ ಬದಲು ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆ ಮತ್ತು ಕುಲ್ಹಾದ್‌ಗಳನ್ನು ಬಳಸುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸಚಿವ ಧರಮ್​ವೀರ್ ಪ್ರಜಾಪತಿ ಸೂಚಿಸಿದ್ದಾರೆ. ಸಚಿವರ ಈ ಆದೇಶಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ: Shocking News: ಮನುಷ್ಯನ ರಕ್ತದಲ್ಲಿ ಪ್ಲಾಸ್ಟಿಕ್!; ಅಧ್ಯಯನದಲ್ಲಿ ಮೊಟ್ಟ ಮೊದಲ ಬಾರಿಗೆ ಶಾಕಿಂಗ್ ವಿಚಾರ ಪತ್ತೆ

Omicron Variant: ಒಮಿಕ್ರಾನ್ ವೈರಸ್ ಪ್ಲಾಸ್ಟಿಕ್ ಮೇಲೆ 8 ದಿನ, ಚರ್ಮದ ಮೇಲೆ 21 ಗಂಟೆ ಜೀವಂತವಾಗಿರಬಲ್ಲದು!

Follow Us
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ