AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಿನ ಮಡಕೆ ಬಳಸಿ; ತಮ್ಮ ಇಲಾಖೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ನಿಷೇಧಕ್ಕೆ ಉತ್ತರ ಪ್ರದೇಶದ ಸಚಿವ ಆದೇಶ

ಪ್ಲಾಸ್ಟಿಕ್​ ಬಾಟಲಿಗಳ ಬದಲು ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆ ಮತ್ತು ಕುಲ್ಹಾದ್‌ಗಳನ್ನು ಬಳಸುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸಚಿವ ಧರಮ್​ವೀರ್ ಪ್ರಜಾಪತಿ ಸೂಚಿಸಿದ್ದಾರೆ.

ಮಣ್ಣಿನ ಮಡಕೆ ಬಳಸಿ; ತಮ್ಮ ಇಲಾಖೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ನಿಷೇಧಕ್ಕೆ ಉತ್ತರ ಪ್ರದೇಶದ ಸಚಿವ ಆದೇಶ
ಪ್ಲಾಸ್ಟಿಕ್ ಬಾಟಲಿ
TV9 Web
| Updated By: ಸುಷ್ಮಾ ಚಕ್ರೆ|

Updated on: Apr 07, 2022 | 8:18 PM

Share

ನವದೆಹಲಿ: ಉತ್ತರ ಪ್ರದೇಶದ ಗೃಹರಕ್ಷಕ ದಳ ಮತ್ತು ಕಾರಾಗೃಹ ಇಲಾಖೆ ಸಚಿವ ಧರಮ್​ವೀರ್ ಪ್ರಜಾಪತಿ ತಮ್ಮ ಇಲಾಖೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ (Plastic Water Bottles) ಬಳಕೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಬೇರೆ ಸರ್ಕಾರ ಹಾಗೂ ಇಲಾಖೆಗಳಿಗೆ ಮಾದರಿಯಾಗಿದ್ದಾರೆ. ಎಲ್ಲ ಕಡೆ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ನೀಡಲಾಗುತ್ತದೆ. ಇದರಿಂದ ಪ್ಲಾಸ್ಟಿಕ್ ತ್ಯಾಜ್ಯವೂ ಹೆಚ್ಚಾಗುತ್ತಿದೆ. ಹೀಗಾಗಿ, ಪ್ಲಾಸ್ಟಿಕ್ ನೀರಿನ ಬಾಟಲಿಯ ಬದಲಾಗಿ ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆಗಳನ್ನು ಬಳಸಿಕೊಳ್ಳುವಂತೆ ಸಚಿವ ಧರಮ್​ವೀರ್ ಪ್ರಜಾಪತಿ ಸೂಚಿಸಿದ್ದಾರೆ.

ಪರಿಸರ ಮತ್ತು ಆರೋಗ್ಯ ಸಂಬಂಧಿ ಕಾರಣಗಳಿಂದ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಯನ್ನು ನಮ್ಮ ಇಲಾಖೆಯಲ್ಲಿ ನಿಷೇಧಿಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯಿಂದ ಕ್ಯಾನ್ಸರ್​ನಂತಹ ಗಂಭೀರ ಕಾಯಿಲೆಗಳು ಬರಬಹುದು ಆದ್ದರಿಂದ ಇದರ ಬಳಕೆಯನ್ನು ತಪ್ಪಿಸಬೇಕು ಎಂದು ಸಚಿವ ಧರಮ್​ವೀರ್ ಪ್ರಜಾಪತಿ ಹೇಳಿದ್ದಾರೆ.

ಪ್ಲಾಸ್ಟಿಕ್​ ಬಾಟಲಿಗಳ ಬದಲು ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆ ಮತ್ತು ಕುಲ್ಹಾದ್‌ಗಳನ್ನು ಬಳಸುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸಚಿವ ಧರಮ್​ವೀರ್ ಪ್ರಜಾಪತಿ ಸೂಚಿಸಿದ್ದಾರೆ. ಸಚಿವರ ಈ ಆದೇಶಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ: Shocking News: ಮನುಷ್ಯನ ರಕ್ತದಲ್ಲಿ ಪ್ಲಾಸ್ಟಿಕ್!; ಅಧ್ಯಯನದಲ್ಲಿ ಮೊಟ್ಟ ಮೊದಲ ಬಾರಿಗೆ ಶಾಕಿಂಗ್ ವಿಚಾರ ಪತ್ತೆ

Omicron Variant: ಒಮಿಕ್ರಾನ್ ವೈರಸ್ ಪ್ಲಾಸ್ಟಿಕ್ ಮೇಲೆ 8 ದಿನ, ಚರ್ಮದ ಮೇಲೆ 21 ಗಂಟೆ ಜೀವಂತವಾಗಿರಬಲ್ಲದು!

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್