AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣ್ಣಿನ ಮಡಕೆ ಬಳಸಿ; ತಮ್ಮ ಇಲಾಖೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ನಿಷೇಧಕ್ಕೆ ಉತ್ತರ ಪ್ರದೇಶದ ಸಚಿವ ಆದೇಶ

ಪ್ಲಾಸ್ಟಿಕ್​ ಬಾಟಲಿಗಳ ಬದಲು ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆ ಮತ್ತು ಕುಲ್ಹಾದ್‌ಗಳನ್ನು ಬಳಸುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸಚಿವ ಧರಮ್​ವೀರ್ ಪ್ರಜಾಪತಿ ಸೂಚಿಸಿದ್ದಾರೆ.

ಮಣ್ಣಿನ ಮಡಕೆ ಬಳಸಿ; ತಮ್ಮ ಇಲಾಖೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ನಿಷೇಧಕ್ಕೆ ಉತ್ತರ ಪ್ರದೇಶದ ಸಚಿವ ಆದೇಶ
ಪ್ಲಾಸ್ಟಿಕ್ ಬಾಟಲಿ
TV9 Web
| Edited By: |

Updated on: Apr 07, 2022 | 8:18 PM

Share

ನವದೆಹಲಿ: ಉತ್ತರ ಪ್ರದೇಶದ ಗೃಹರಕ್ಷಕ ದಳ ಮತ್ತು ಕಾರಾಗೃಹ ಇಲಾಖೆ ಸಚಿವ ಧರಮ್​ವೀರ್ ಪ್ರಜಾಪತಿ ತಮ್ಮ ಇಲಾಖೆಯಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ (Plastic Water Bottles) ಬಳಕೆ ನಿಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಬೇರೆ ಸರ್ಕಾರ ಹಾಗೂ ಇಲಾಖೆಗಳಿಗೆ ಮಾದರಿಯಾಗಿದ್ದಾರೆ. ಎಲ್ಲ ಕಡೆ ಪ್ಲಾಸ್ಟಿಕ್ ನೀರಿನ ಬಾಟಲಿಗಳನ್ನು ನೀಡಲಾಗುತ್ತದೆ. ಇದರಿಂದ ಪ್ಲಾಸ್ಟಿಕ್ ತ್ಯಾಜ್ಯವೂ ಹೆಚ್ಚಾಗುತ್ತಿದೆ. ಹೀಗಾಗಿ, ಪ್ಲಾಸ್ಟಿಕ್ ನೀರಿನ ಬಾಟಲಿಯ ಬದಲಾಗಿ ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆಗಳನ್ನು ಬಳಸಿಕೊಳ್ಳುವಂತೆ ಸಚಿವ ಧರಮ್​ವೀರ್ ಪ್ರಜಾಪತಿ ಸೂಚಿಸಿದ್ದಾರೆ.

ಪರಿಸರ ಮತ್ತು ಆರೋಗ್ಯ ಸಂಬಂಧಿ ಕಾರಣಗಳಿಂದ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬಳಕೆಯನ್ನು ನಮ್ಮ ಇಲಾಖೆಯಲ್ಲಿ ನಿಷೇಧಿಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯಿಂದ ಕ್ಯಾನ್ಸರ್​ನಂತಹ ಗಂಭೀರ ಕಾಯಿಲೆಗಳು ಬರಬಹುದು ಆದ್ದರಿಂದ ಇದರ ಬಳಕೆಯನ್ನು ತಪ್ಪಿಸಬೇಕು ಎಂದು ಸಚಿವ ಧರಮ್​ವೀರ್ ಪ್ರಜಾಪತಿ ಹೇಳಿದ್ದಾರೆ.

ಪ್ಲಾಸ್ಟಿಕ್​ ಬಾಟಲಿಗಳ ಬದಲು ಪರಿಸರ ಸ್ನೇಹಿಯಾಗಿರುವ ಮಣ್ಣಿನ ಮಡಕೆ ಮತ್ತು ಕುಲ್ಹಾದ್‌ಗಳನ್ನು ಬಳಸುವುದರಿಂದ ಆರೋಗ್ಯವೂ ಚೆನ್ನಾಗಿರುತ್ತದೆ ಎಂದು ಅಧಿಕಾರಿಗಳಿಗೆ ಸಚಿವ ಧರಮ್​ವೀರ್ ಪ್ರಜಾಪತಿ ಸೂಚಿಸಿದ್ದಾರೆ. ಸಚಿವರ ಈ ಆದೇಶಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲೂ ಪ್ರಶಂಸೆ ವ್ಯಕ್ತವಾಗಿದೆ.

ಇದನ್ನೂ ಓದಿ: Shocking News: ಮನುಷ್ಯನ ರಕ್ತದಲ್ಲಿ ಪ್ಲಾಸ್ಟಿಕ್!; ಅಧ್ಯಯನದಲ್ಲಿ ಮೊಟ್ಟ ಮೊದಲ ಬಾರಿಗೆ ಶಾಕಿಂಗ್ ವಿಚಾರ ಪತ್ತೆ

Omicron Variant: ಒಮಿಕ್ರಾನ್ ವೈರಸ್ ಪ್ಲಾಸ್ಟಿಕ್ ಮೇಲೆ 8 ದಿನ, ಚರ್ಮದ ಮೇಲೆ 21 ಗಂಟೆ ಜೀವಂತವಾಗಿರಬಲ್ಲದು!

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ