AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Holi Festival: ಕ್ಯಾಂಪಸ್​​ನಲ್ಲಿ ಹೋಳಿ ಆಚರಣೆ ನಿಷೇಧಿಸಿದ ಬನಾರಸ್ ಹಿಂದೂ ವಿವಿ; ವರದಿ

ಕ್ಯಾಂಪಸ್​​ನಲ್ಲಿ ಹೋಳಿ ಆಚರಿಸುವುದು, ಮ್ಯೂಸಿಲ್ ಪ್ಲೇ ಮಾಡುವುದನ್ನು ನಿಷೇಧಿಸಲಾಗಿದೆ. ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಎಚ್​ಯು ಆಡಳಿತ ಮಂಡಳಿ ನೋಟಿಸ್ ಬಿಡುಗಡೆ ಮಾಡಿದೆ.

Holi Festival: ಕ್ಯಾಂಪಸ್​​ನಲ್ಲಿ ಹೋಳಿ ಆಚರಣೆ ನಿಷೇಧಿಸಿದ ಬನಾರಸ್ ಹಿಂದೂ ವಿವಿ; ವರದಿ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Mar 04, 2023 | 11:02 PM

Share

ಲಖನೌ: ಉತ್ತರ ಪ್ರದೇಶದ ವಾರಾಣಸಿ ಮೂಲದ ಬನಾರಸ್ ಹಿಂದೂ ವಿಶ್ವವಿದ್ಯಾಲಯ (BHU) ಕ್ಯಾಂಪಸ್​​ನಲ್ಲಿ ಹೋಳಿ ಹಬ್ಬ (Holi festivities) ಆಚರಿಸುವುದನ್ನು ನಿಷೇಧಿಸಿದೆ ಎಂದು ವರದಿಯಾಗಿದೆ. ವಿಶ್ವವಿದ್ಯಾಲಯದ ಈ ಕ್ರಮಕ್ಕೆ ಹಲವು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದ್ದು, ಇದು ಹಿಂದೂ ವಿರೋಧಿ ಕ್ರಮ ಎಂಬ ಆಕ್ಷೇಪ ವ್ಯಕ್ತವಾಗಿದೆ. ಕ್ಯಾಂಪಸ್​​ನಲ್ಲಿ ಹೋಳಿ ಆಚರಿಸುವುದು, ಮ್ಯೂಸಿಲ್ ಪ್ಲೇ ಮಾಡುವುದನ್ನು ನಿಷೇಧಿಸಲಾಗಿದೆ. ಉಲ್ಲಂಘಿಸಿದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಬಿಎಚ್​ಯು ಆಡಳಿತ ಮಂಡಳಿ ನೋಟಿಸ್ ಬಿಡುಗಡೆ ಮಾಡಿದೆ. ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ವಿವಿಧ ವಿಭಾಗಗಳ ಮುಖ್ಯಸ್ಥರಿಗೆ ಮತ್ತು ವಸತಿ ನಿಲಯಗಳ ವಾರ್ಡನ್​ಗಳಿಗೆ ಸೂಚಿಸಲಾಗಿದೆ.

ಕೆಲವು ದಿನಗಳ ಹಿಂದೆ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಈ ನೋಟಿಸ್ ಬಿಡುಗಡೆ ಮಾಡಿತ್ತು ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ. ಹೋಳಿ ಎಂಬುದು ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ಇದರ ಆಚರಣೆಯನ್ನು ವಿಶ್ವವಿದ್ಯಾಲಯ ಅದ್ಹೇಗೆ ನಿಷೇಧಿಸಲು ಸಾಧ್ಯ ಎಂದು ವಿಶ್ವ ಹಿಂದೂ ಪರಿಷತ್​ನ ಸ್ಥಳೀಯ ನಾಯಕ ವಿನೋದ್ ಬನ್ಸಲ್ ಪ್ರಶ್ನಿಸಿರುವುದಾಗಿ ವರದಿ ಉಲ್ಲೇಖಿಸಿದೆ.

ಸನಾತನ (ಹಿಂದೂ) ಭಾರತದಲ್ಲಿ ಇಂತಹ ನಿಷೇಧವನ್ನು ಯಾರಾದರೂ ಊಹಿಸಬಹುದೇ… ಹೋಳಿಯನ್ನು ಆಚರಿಸದಿರುವ ಬಗ್ಗೆ ಜನ ತಾವಾಗಿಯೇ ನಿರ್ಧಾರ ಕೈಗೊಳ್ಳಬಹುದು. ಆದರೆ, ಹಬ್ಬವನ್ನು ಆಚರಿಸದಂತೆ ಇತರರಿಗೆ ನಿರ್ದೇಶಿಸುವುದು, ಅದೂ ಕೂಡ ಭಾರದಲ್ಲಿ ಕಲ್ಪನೆಗೂ ಮೀರಿದ ಸಂಗತಿಯಾಗಿದೆ ಎಂದು ವಿನೋದ್ ಬನ್ಸಲ್ ಹೇಳಿದ್ದಾರೆ.

ಇದನ್ನೂ ಓದಿ: ಶೀತ ಜ್ವರ ಪ್ರಕರಣಗಳಲ್ಲಿ ಭಾರೀ ಹೆಚ್ಚಳ; ಎಚ್ಚರಿಕೆ ವಹಿಸಲು ಐಸಿಎಂಆರ್ ಸಲಹೆ

ಈ ನಿರ್ಧಾರವು ವಿಶ್ವವಿದ್ಯಾಲಯದಿಂದ ‘ಹಿಂದೂ’ ಪದವನ್ನು ತೆಗೆದುಹಾಕುವ ಪ್ರಯತ್ನಗಳ ಪ್ರಾರಂಭದಂತೆ ಗೋಚರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ವಿಶ್ವವಿದ್ಯಾಲಯ ಹೇಳುವುದೇನು?

ಹೋಳಿ ಸಂಭ್ರಮಾಚರಣೆಯಲ್ಲಿ ತೊಡಗಿರುವವರು ಗಲಾಟೆ ಸೃಷ್ಟಿಸುವುದರ ಜತೆಗೆ ಎಲ್ಲರ ಮೇಲೆ ಬಣ್ಣ ಎರಚುವುದನ್ನು ಗಮನಿಸಲಾಗಿದೆ. ಈ ಹಿಂದೆ ಹೋಳಿ ಆಚರಣೆಯ ಸಂದರ್ಭ ಕಿರುಕುಳದ ಪ್ರಕರಣಗಳೂ ವರದಿಯಾಗಿದ್ದವು. ಹೀಗಾಗಿ ಕ್ಯಾಂಪಸ್​ ಒಳಗೆ ಮಾತ್ರ ಹೋಳಿ ಆಚರಿಸಬಾರದು ಎಂದು ನಿರ್ದೇಶಿಸಲಾಗಿದೆ ಎಂಬುದಾಗಿ ವಿಶ್ವವಿದ್ಯಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:58 pm, Sat, 4 March 23

ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ