AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಪ್ರೇಯಸಿಯನ್ನು ಭೇಟಿಯಾಗಲು ಹೋದ ಯುವಕನ ಕೂದಲು ಕತ್ತರಿಸಿ, ಥಳಿಸಿದ ಜನರು

ಗುಜರಾತ್​​ನ ಬನಸ್ಕಾಂತದಲ್ಲಿ ತನ್ನ ಗೆಳತಿಯನ್ನು ಭೇಟಿಯಾಗಲು ಹೋದ ಯುವಕನಿಗೆ ಅಮಾನವೀಯವಾಗಿ ಶಿಕ್ಷೆ ವಿಧಿಸಿರುವ ವಿಡಿಯೋ ವೈರಲ್ ಆಗಿದೆ. ತನ್ನ ಗೆಳತಿಯನ್ನು ಭೇಟಿಯಾಗಲು ಹೋದ ಯುವಕನಿಗೆ ತಾಲಿಬಾನ್ ಶೈಲಿಯಲ್ಲಿ ಶಿಕ್ಷೆ ನೀಡಲಾಗಿದೆ. ಆ ಯುವಕನಿಗೆ ಹಗ್ಗ ಬಿಗಿದು, ಕೂದಲು ಕತ್ತರಿಸಿ, ಥಳಿಸಿರುವ ಘಟನೆ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಗುಜರಾತ್​ನಲ್ಲಿ ಪ್ರೇಯಸಿಯನ್ನು ಭೇಟಿಯಾಗಲು ಹೋದ ಯುವಕನ ಕೂದಲು ಕತ್ತರಿಸಿ, ಥಳಿಸಿದ ಜನರು
Lovers
ಸುಷ್ಮಾ ಚಕ್ರೆ
|

Updated on: Jan 08, 2025 | 4:10 PM

Share

ಅಹಮದಾಬಾದ್: ಗುಜರಾತ್​ನ ಬನಸ್ಕಾಂತದಲ್ಲಿ ಯುವಕನೊಬ್ಬನಿಗೆ ತಾಲಿಬಾನ್ ಮಾದರಿಯಲ್ಲಿ ಶಿಕ್ಷೆ ವಿಧಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗೆಳತಿಯನ್ನು ಭೇಟಿಯಾಗಲು ಹೋದ ಯುವಕನಿಗೆ ಶಿಕ್ಷೆ ವಿಧಿಸಿರುವುದು ಬೆಳಕಿಗೆ ಬಂದಿದೆ. ಯುವಕನೊಬ್ಬನಿಗೆ ಥಳಿಸಿ ಕೂದಲು ಕತ್ತರಿಸಿರುವ ವಿಡಿಯೋ ವೈರಲ್ ಆಗಿದೆ. ತನ್ನ ಪ್ರೇಯಸಿಯನ್ನು ಭೇಟಿಯಾಗಲು ಹೋಗುತ್ತಿದ್ದ ಯುವಕ ಮತ್ತು ಆತನ ಇಬ್ಬರು ಸ್ನೇಹಿತರನ್ನು ಜನರು ಥಳಿಸಿದ್ದಾರೆ. ಮೂವರು ಯುವಕರನ್ನು ಹಗ್ಗದಿಂದ ಕಟ್ಟಿ ಶಿಕ್ಷೆ ನೀಡಿರುವ ವಿಡಿಯೋ ವೈರಲ್ ಆಗಿದೆ. ಕೆಲವರು ಯುವಕರನ್ನು ಚುಡಾಯಿಸುತ್ತಿರುವುದು ಕಂಡು ಬಂದಿದೆ. ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ಬನಸ್ಕಾಂತದಲ್ಲಿ ಈ ರೀತಿ ಘಟನೆ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಭಿಕ್ಷೆ ಬೇಡುತ್ತಿದ್ದ ಮಾದಿಗ ಸಮುದಾಯದ ಯುವಕನಿಗೆ ಥಳಿಸಲಾಗಿತ್ತು. ಈ ಹಿಂದೆಯೂ ಬನಸ್ಕಾಂತದಲ್ಲಿ ತಾಲಿಬಾನ್ ಶಿಕ್ಷೆಯ ವಿಡಿಯೋ ವೈರಲ್ ಆಗಿತ್ತು. ವೈರಲ್ ಆಗಿರುವ ವಿಡಿಯೋ ಯಾತ್ರಾಸ್ಥಳದಲ್ಲಿ ನಡೆದಿದ್ದು ಎಂದು ಊಹಿಸಲಾಗಿತ್ತು. ವಾಡಿ ಸಮುದಾಯದ ಇಬ್ಬರು ಯುವಕರು ಭಿಕ್ಷಾಟನೆ ಮಾಡುತ್ತಿದ್ದ ಮಹಿಳೆಯರ ಫೋಟೋ ತೆಗೆದಿದ್ದಾರೆ ಎಂಬ ಅನುಮಾನದ ಮೇಲೆ ಸ್ಥಳೀಯರು ಅವರನ್ನು ಹಿಡಿದು ಅವರ ಸಮುದಾಯದ ಮುಖಂಡರಿಗೆ ಒಪ್ಪಿಸಿದ್ದರು.

ಇದನ್ನೂ ಓದಿ: Viral: ಮೊಟ್ಟ ಮೊದಲ ಬಾರಿಗೆ ಹಂಗೇರಿ-ರೊಮೇನಿಯಾ ಗಡಿಯನ್ನು ದಾಟಿದ ಬೀದಿ ನಾಯಿ; ಹೃದಯಸ್ಪರ್ಶಿ ವಿಡಿಯೋ ವೈರಲ್‌

ಬಳಿಕ, ಆ ಸಮುದಾಯದ ಮುಖಂಡರು ಯುವಕರಿಬ್ಬರಿಗೂ ಮಹಿಳೆಯರ ಬಟ್ಟೆ ತೊಡಿಸಿ, ಕೊರಳಿಗೆ ಚಪ್ಪಲಿ ಹಾರ ಹಾಕಿ ಥಳಿಸಿ, ತಾಲಿಬಾನ್ ಮಾದರಿಯಲ್ಲಿ ಶಿಕ್ಷೆ ವಿಧಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು