AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುಜರಾತ್​ನಲ್ಲಿ ಪ್ರೇಯಸಿಯನ್ನು ಭೇಟಿಯಾಗಲು ಹೋದ ಯುವಕನ ಕೂದಲು ಕತ್ತರಿಸಿ, ಥಳಿಸಿದ ಜನರು

ಗುಜರಾತ್​​ನ ಬನಸ್ಕಾಂತದಲ್ಲಿ ತನ್ನ ಗೆಳತಿಯನ್ನು ಭೇಟಿಯಾಗಲು ಹೋದ ಯುವಕನಿಗೆ ಅಮಾನವೀಯವಾಗಿ ಶಿಕ್ಷೆ ವಿಧಿಸಿರುವ ವಿಡಿಯೋ ವೈರಲ್ ಆಗಿದೆ. ತನ್ನ ಗೆಳತಿಯನ್ನು ಭೇಟಿಯಾಗಲು ಹೋದ ಯುವಕನಿಗೆ ತಾಲಿಬಾನ್ ಶೈಲಿಯಲ್ಲಿ ಶಿಕ್ಷೆ ನೀಡಲಾಗಿದೆ. ಆ ಯುವಕನಿಗೆ ಹಗ್ಗ ಬಿಗಿದು, ಕೂದಲು ಕತ್ತರಿಸಿ, ಥಳಿಸಿರುವ ಘಟನೆ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಗುಜರಾತ್​ನಲ್ಲಿ ಪ್ರೇಯಸಿಯನ್ನು ಭೇಟಿಯಾಗಲು ಹೋದ ಯುವಕನ ಕೂದಲು ಕತ್ತರಿಸಿ, ಥಳಿಸಿದ ಜನರು
Lovers
ಸುಷ್ಮಾ ಚಕ್ರೆ
|

Updated on: Jan 08, 2025 | 4:10 PM

Share

ಅಹಮದಾಬಾದ್: ಗುಜರಾತ್​ನ ಬನಸ್ಕಾಂತದಲ್ಲಿ ಯುವಕನೊಬ್ಬನಿಗೆ ತಾಲಿಬಾನ್ ಮಾದರಿಯಲ್ಲಿ ಶಿಕ್ಷೆ ವಿಧಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗೆಳತಿಯನ್ನು ಭೇಟಿಯಾಗಲು ಹೋದ ಯುವಕನಿಗೆ ಶಿಕ್ಷೆ ವಿಧಿಸಿರುವುದು ಬೆಳಕಿಗೆ ಬಂದಿದೆ. ಯುವಕನೊಬ್ಬನಿಗೆ ಥಳಿಸಿ ಕೂದಲು ಕತ್ತರಿಸಿರುವ ವಿಡಿಯೋ ವೈರಲ್ ಆಗಿದೆ. ತನ್ನ ಪ್ರೇಯಸಿಯನ್ನು ಭೇಟಿಯಾಗಲು ಹೋಗುತ್ತಿದ್ದ ಯುವಕ ಮತ್ತು ಆತನ ಇಬ್ಬರು ಸ್ನೇಹಿತರನ್ನು ಜನರು ಥಳಿಸಿದ್ದಾರೆ. ಮೂವರು ಯುವಕರನ್ನು ಹಗ್ಗದಿಂದ ಕಟ್ಟಿ ಶಿಕ್ಷೆ ನೀಡಿರುವ ವಿಡಿಯೋ ವೈರಲ್ ಆಗಿದೆ. ಕೆಲವರು ಯುವಕರನ್ನು ಚುಡಾಯಿಸುತ್ತಿರುವುದು ಕಂಡು ಬಂದಿದೆ. ಕಾನೂನನ್ನು ಕೈಗೆತ್ತಿಕೊಂಡವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ಬನಸ್ಕಾಂತದಲ್ಲಿ ಈ ರೀತಿ ಘಟನೆ ನಡೆಯುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಭಿಕ್ಷೆ ಬೇಡುತ್ತಿದ್ದ ಮಾದಿಗ ಸಮುದಾಯದ ಯುವಕನಿಗೆ ಥಳಿಸಲಾಗಿತ್ತು. ಈ ಹಿಂದೆಯೂ ಬನಸ್ಕಾಂತದಲ್ಲಿ ತಾಲಿಬಾನ್ ಶಿಕ್ಷೆಯ ವಿಡಿಯೋ ವೈರಲ್ ಆಗಿತ್ತು. ವೈರಲ್ ಆಗಿರುವ ವಿಡಿಯೋ ಯಾತ್ರಾಸ್ಥಳದಲ್ಲಿ ನಡೆದಿದ್ದು ಎಂದು ಊಹಿಸಲಾಗಿತ್ತು. ವಾಡಿ ಸಮುದಾಯದ ಇಬ್ಬರು ಯುವಕರು ಭಿಕ್ಷಾಟನೆ ಮಾಡುತ್ತಿದ್ದ ಮಹಿಳೆಯರ ಫೋಟೋ ತೆಗೆದಿದ್ದಾರೆ ಎಂಬ ಅನುಮಾನದ ಮೇಲೆ ಸ್ಥಳೀಯರು ಅವರನ್ನು ಹಿಡಿದು ಅವರ ಸಮುದಾಯದ ಮುಖಂಡರಿಗೆ ಒಪ್ಪಿಸಿದ್ದರು.

ಇದನ್ನೂ ಓದಿ: Viral: ಮೊಟ್ಟ ಮೊದಲ ಬಾರಿಗೆ ಹಂಗೇರಿ-ರೊಮೇನಿಯಾ ಗಡಿಯನ್ನು ದಾಟಿದ ಬೀದಿ ನಾಯಿ; ಹೃದಯಸ್ಪರ್ಶಿ ವಿಡಿಯೋ ವೈರಲ್‌

ಬಳಿಕ, ಆ ಸಮುದಾಯದ ಮುಖಂಡರು ಯುವಕರಿಬ್ಬರಿಗೂ ಮಹಿಳೆಯರ ಬಟ್ಟೆ ತೊಡಿಸಿ, ಕೊರಳಿಗೆ ಚಪ್ಪಲಿ ಹಾರ ಹಾಕಿ ಥಳಿಸಿ, ತಾಲಿಬಾನ್ ಮಾದರಿಯಲ್ಲಿ ಶಿಕ್ಷೆ ವಿಧಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ