AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಧವಗಢ ಹುಲಿ ಸಂರಕ್ಷಿತಾರಣ್ಯದಲ್ಲಿ 10 ಕಾಡಾನೆಗಳ ಅನುಮಾನಾಸ್ಪದ ಸಾವು

ಬಾಂಧವಗಡ ಹುಲಿ ಸಂರಕ್ಷಿತಾರಣ್ಯದಲ್ಲಿ 10 ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ಮುಖ್ಯಮಂತ್ರಿಗಳು ಕ್ಷೇತ್ರ ನಿರ್ದೇಶಕರನ್ನು ಅಮಾನತುಗೊಳಿಸಿದ್ದು, ಕೀಟನಾಶಕ ಬಳಕೆಯ ಅನುಮಾನವನ್ನು ತನಿಖೆ ನಡೆಸಲಾಗುತ್ತಿದೆ. ಆನೆ ದಾಳಿಯಿಂದ ಮೃತಪಟ್ಟವರ ಪರಿಹಾರವನ್ನು 8 ಲಕ್ಷದಿಂದ 25 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರವು ತನಿಖಾ ತಂಡವನ್ನು ರಚಿಸಿದೆ.

ಬಾಂಧವಗಢ ಹುಲಿ ಸಂರಕ್ಷಿತಾರಣ್ಯದಲ್ಲಿ 10 ಕಾಡಾನೆಗಳ ಅನುಮಾನಾಸ್ಪದ ಸಾವು
ಆನೆಗಳು-ಸಾಂದರ್ಭಿಕ ಚಿತ್ರImage Credit source: International Fund For Animal welfare
ನಯನಾ ರಾಜೀವ್
|

Updated on: Nov 04, 2024 | 9:06 AM

Share

ಮಧ್ಯಪ್ರದೇಶದ ಭೋಪಾಲ್​ನಲ್ಲಿರುವ ಬಾಂಧವಗಢ ಹುಲಿ ಸಂರಕ್ಷಿತಾರಣ್ಯದಲ್ಲಿ 10 ಕಾಡಾನೆಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿವೆ. ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಭಾನುವಾರ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್ ಕ್ಷೇತ್ರ ನಿರ್ದೇಶಕರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಬೆಳೆಗಳ ಮೇಲೆ ಸಿಂಪಡಿಸಿರುವ ಕೀಟನಾಶಕಗಳ ಮೇಲೆ ಅನುಮಾನ ಮೂಡಿತ್ತು, ಆದರೆ ಪ್ರಾಥಮಿಕ ಸಂಶೋಧನೆಗಳು ಬೆಳೆಗಳಿಗೆ ಕೀಟನಾಶಕ ಬಳಕೆಗೆ ಯಾವುದೇ ಪುರಾವೆಗಳನ್ನು ತೋರಿಸಿಲ್ಲ. 2-3 ದಿನಗಳಲ್ಲಿ ಮರಣೋತ್ತರ ಪರೀಕ್ಷೆಯ ವರದಿಯನ್ನು ಬರಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರದಂದು ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶದ ಬಳಿ ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೀಡಲಾಗುವ ಎಕ್ಸ್‌ಗ್ರೇಷಿಯಾ ಪರಿಹಾರವನ್ನು ಹೆಚ್ಚಿಸಲಾಗಿದೆ. ಆನೆ ದಾಳಿಗೆ ಬಲಿಯಾದವರ ಪರಿಹಾರವನ್ನು 8 ಲಕ್ಷದಿಂದ 25 ಲಕ್ಷಕ್ಕೆ ಏರಿಸಲಾಗಿದೆ ಎಂದು ಮುಖ್ಯಮಂತ್ರಿ ಯಾದವ್ ಹೇಳಿದ್ದಾರೆ.

ಇದಕ್ಕೂ ಮುನ್ನ, ಅರಣ್ಯ ಮತ್ತು ಪರಿಸರ ಖಾತೆ ರಾಜ್ಯ ಸಚಿವ ದಿಲೀಪ್ ಅಹಿರ್ವಾರ್ ಮತ್ತು ಇಬ್ಬರು ಹಿರಿಯ ಅರಣ್ಯ ಅಧಿಕಾರಿಗಳು ಶನಿವಾರ ಬಾಂಧವಗಢ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿ ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸಿದರು. ಸಚಿವ ಅಹಿರ್ವಾರ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಅರಣ್ಯ) ಅಶೋಕ್ ಬರ್ನ್‌ವಾಲ್ ಮತ್ತು ಅರಣ್ಯ ಪಡೆ ಮುಖ್ಯಸ್ಥ (ಎಚ್‌ಒಎಫ್‌ಎಫ್) ಅಸೀಮ್ ಶ್ರೀವಾಸ್ತವ ಅವರು ಸ್ಥಳದಿಂದ ಮಾಹಿತಿ ಸಂಗ್ರಹಿಸಿದರು. ಕೇಂದ್ರ ಪರಿಸರ ಸಚಿವಾಲಯವು ಇತ್ತೀಚಿನ ಆನೆಗಳ ಸಾವಿನ ಬಗ್ಗೆ ತನಿಖೆ ನಡೆಸಲು ತಂಡವನ್ನು ರಚಿಸಿದೆ.

ಮೈಸೂರು ಭಾಗದಲ್ಲಿ ಒಂದೇ ದಿನ ಎರಡು ಆನೆಗಳ ಸಾವು

ಒಡಿಶಾದಲ್ಲಿ 60 ಕಾಡಾನೆಗಳು ಸಾವನ್ನಪ್ಪಿವೆ 60 ಕಾಡಾನೆಗಳು ಸಾವನ್ನಪ್ಪಿರುವ ಬಗ್ಗೆ ಒಡಿಶಾ ಅರಣ್ಯ ಸಚಿವ ಗಣೇಶ್ ರಾಮ್ ಸಿಂಗ್ ಖುಂಟಿಯಾ ಕಳವಳ ವ್ಯಕ್ತಪಡಿಸಿದ್ದಾರೆ. ಆನೆಗಳ ಅಸಹಜ ಸಾವಿನ ಪ್ರಕರಣದ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದರು. ಈ ಕುರಿತು ಒಂದು ತಿಂಗಳೊಳಗೆ ವರದಿ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಆನೆಗಳನ್ನು ರಕ್ಷಿಸುವ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದರು. ಇಂತಹ ಸಂದರ್ಭದಲ್ಲಿ ಎಲ್ಲರೂ ಪ್ರಾಮಾಣಿಕರಾಗಿರಬೇಕು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ