AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ

ದೇಶದಲ್ಲಿ ಇತ್ತೀಚೆಗೆ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಟು ಅಯೋಧ್ಯೆ ಮಧ್ಯೆ ಸಂಚರಿಸುವ ಆಕಾಶ್​ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಪ್ರಯಾಣಿಕರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ.

ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ
ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ
ಗಂಗಾಧರ​ ಬ. ಸಾಬೋಜಿ
|

Updated on:Oct 27, 2024 | 6:31 PM

Share

ಅಯೋಧ್ಯೆ, ಅಕ್ಟೋಬರ್​ 27: ಬೆಂಗಳೂರು ಟು ಅಯೋಧ್ಯೆ (Bangaluru-Ayodhya Flight) ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌ ಮಾಡಲಾಗಿದೆ. ವಿಮಾನದಲ್ಲಿ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್‌ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಟು ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.

ಇದನ್ನೂ ಓದಿ: 25ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ; ಏರ್ ಇಂಡಿಯಾ, ವಿಸ್ತಾರ, ಇಂಡಿಗೋ, ಸ್ಪೈಸ್ ಜೆಟ್​ಗೆ ಆತಂಕ

ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರು ಟು ಅಯೋಧ್ಯೆ ನಡುವೆ ಸಂಚರಿಸುವ ಆಕಾಶ ಏರ್‌ಲೈನ್ಸ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಮಧ್ಯಾಹ್ನ 1:30ರ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಮಾಹಿತಿ ಬಂದ ತಕ್ಷಣ ಎಮರ್ಜೆನ್ಸಿ ಲ್ಯಾಂಡಿಂಗ್​ಗೆ ಆದೇಶಿಸಲಾಯಿತು ಎಂದಿದ್ದಾರೆ.

ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಪ್ರಯಾಣಿಕರ ಲಗೇಜ್ ಮತ್ತು ವಿಮಾನವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಅದೊಂದು ಹುಸಿಬಾಂಬ್​ ಬೆದರಿಕೆ ಆಗಿದೆ. ವಿಮಾನದಲ್ಲಿ 173 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸದ್ಯ ಎಲ್ಲಾ ಪ್ರಯಾಣಿಕರು ಈಗ ಸುರಕ್ಷಿತವಾಗಿದ್ದಾರೆ. ಬುಧವಾರ ಕೂಡ ನಮಗೆ ಇದೇ ರೀತಿಯ ಹುಸಿಬಾಂಬ್​ ಕರೆ ಬಂದಿತ್ತು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Sun, 27 October 24

Follow Us
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ