AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ

ದೇಶದಲ್ಲಿ ಇತ್ತೀಚೆಗೆ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಟು ಅಯೋಧ್ಯೆ ಮಧ್ಯೆ ಸಂಚರಿಸುವ ಆಕಾಶ್​ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಪ್ರಯಾಣಿಕರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ.

ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ
ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ
ಗಂಗಾಧರ​ ಬ. ಸಾಬೋಜಿ
|

Updated on:Oct 27, 2024 | 6:31 PM

Share

ಅಯೋಧ್ಯೆ, ಅಕ್ಟೋಬರ್​ 27: ಬೆಂಗಳೂರು ಟು ಅಯೋಧ್ಯೆ (Bangaluru-Ayodhya Flight) ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌ ಮಾಡಲಾಗಿದೆ. ವಿಮಾನದಲ್ಲಿ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್‌ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಟು ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.

ಇದನ್ನೂ ಓದಿ: 25ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ; ಏರ್ ಇಂಡಿಯಾ, ವಿಸ್ತಾರ, ಇಂಡಿಗೋ, ಸ್ಪೈಸ್ ಜೆಟ್​ಗೆ ಆತಂಕ

ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರು ಟು ಅಯೋಧ್ಯೆ ನಡುವೆ ಸಂಚರಿಸುವ ಆಕಾಶ ಏರ್‌ಲೈನ್ಸ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಮಧ್ಯಾಹ್ನ 1:30ರ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಮಾಹಿತಿ ಬಂದ ತಕ್ಷಣ ಎಮರ್ಜೆನ್ಸಿ ಲ್ಯಾಂಡಿಂಗ್​ಗೆ ಆದೇಶಿಸಲಾಯಿತು ಎಂದಿದ್ದಾರೆ.

ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಪ್ರಯಾಣಿಕರ ಲಗೇಜ್ ಮತ್ತು ವಿಮಾನವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಅದೊಂದು ಹುಸಿಬಾಂಬ್​ ಬೆದರಿಕೆ ಆಗಿದೆ. ವಿಮಾನದಲ್ಲಿ 173 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸದ್ಯ ಎಲ್ಲಾ ಪ್ರಯಾಣಿಕರು ಈಗ ಸುರಕ್ಷಿತವಾಗಿದ್ದಾರೆ. ಬುಧವಾರ ಕೂಡ ನಮಗೆ ಇದೇ ರೀತಿಯ ಹುಸಿಬಾಂಬ್​ ಕರೆ ಬಂದಿತ್ತು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Sun, 27 October 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ