AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ

ದೇಶದಲ್ಲಿ ಇತ್ತೀಚೆಗೆ ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಬೆಂಗಳೂರು ಟು ಅಯೋಧ್ಯೆ ಮಧ್ಯೆ ಸಂಚರಿಸುವ ಆಕಾಶ್​ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಪ್ರಯಾಣಿಕರನ್ನು ಪ್ರಾಣಾಪಾಯದಿಂದ ರಕ್ಷಿಸಲಾಗಿದೆ.

ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ
ಬೆಂಗಳೂರು-ಅಯೋಧ್ಯೆ ಮಧ್ಯೆ ಸಂಚರಿಸುವ ವಿಮಾನಕ್ಕೆ ಬಾಂಬ್​ ಬೆದರಿಕೆ: ತುರ್ತು ಭೂಸ್ಪರ್ಶ
ಗಂಗಾಧರ​ ಬ. ಸಾಬೋಜಿ
|

Updated on:Oct 27, 2024 | 6:31 PM

Share

ಅಯೋಧ್ಯೆ, ಅಕ್ಟೋಬರ್​ 27: ಬೆಂಗಳೂರು ಟು ಅಯೋಧ್ಯೆ (Bangaluru-Ayodhya Flight) ನಡುವೆ ಸಂಚರಿಸುವ ವಿಮಾನಕ್ಕೆ ಬಾಂಬ್‌ ಬೆದರಿಕೆ ಹಿನ್ನೆಲೆಯಲ್ಲಿ ಅಯೋಧ್ಯೆ ವಾಲ್ಮೀಕಿ ಅಂತಾರಾಷ್ಟ್ರೀಯ ಏರ್‌ಪೋರ್ಟ್‌ನಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್‌ ಮಾಡಲಾಗಿದೆ. ವಿಮಾನದಲ್ಲಿ ಪರಿಶೀಲನೆ ಬಳಿಕ ಯಾವುದೇ ಬಾಂಬ್ ಪತ್ತೆಯಾಗದ ಹಿನ್ನೆಲೆ ಹುಸಿಬಾಂಬ್‌ ಎಂದು ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಟು ಅಯೋಧ್ಯೆಗೆ 173 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಆಕಾಶ ಏರ್‌ಲೈನ್ಸ್​ಗೆ ಹುಸಿಬಾಂಬ್​ ಬೆದರಿಕೆ ಬಂದಿದೆ. ತಕ್ಷಣ ತುರ್ತು ಭೂಸ್ಪರ್ಶ ಮಾಡಿ ಒಟ್ಟು ಪ್ರಯಾಣಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ.

ಇದನ್ನೂ ಓದಿ: 25ಕ್ಕೂ ಹೆಚ್ಚು ವಿಮಾನಗಳಿಗೆ ಮತ್ತೆ ಹುಸಿ ಬಾಂಬ್ ಬೆದರಿಕೆ; ಏರ್ ಇಂಡಿಯಾ, ವಿಸ್ತಾರ, ಇಂಡಿಗೋ, ಸ್ಪೈಸ್ ಜೆಟ್​ಗೆ ಆತಂಕ

ಅಯೋಧ್ಯೆ ಏರ್‌ಪೋರ್ಟ್ ನಿರ್ದೇಶಕ ವಿನೋದ್ ಕುಮಾರ್​ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಬೆಂಗಳೂರು ಟು ಅಯೋಧ್ಯೆ ನಡುವೆ ಸಂಚರಿಸುವ ಆಕಾಶ ಏರ್‌ಲೈನ್ಸ್​ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿತ್ತು. ಮಧ್ಯಾಹ್ನ 1:30ರ ಸುಮಾರಿಗೆ ಬಾಂಬ್ ಬೆದರಿಕೆ ಕರೆ ಮಾಹಿತಿ ಬಂದ ತಕ್ಷಣ ಎಮರ್ಜೆನ್ಸಿ ಲ್ಯಾಂಡಿಂಗ್​ಗೆ ಆದೇಶಿಸಲಾಯಿತು ಎಂದಿದ್ದಾರೆ.

ವಿಮಾನ ಭೂಸ್ಪರ್ಶ ಮಾಡುತ್ತಿದ್ದಂತೆ ಪ್ರಯಾಣಿಕರ ಲಗೇಜ್ ಮತ್ತು ವಿಮಾನವನ್ನು ಕೂಲಂಕಷವಾಗಿ ಪರಿಶೀಲನೆ ಮಾಡಿದ್ದು, ಯಾವುದೇ ರೀತಿಯ ಅನುಮಾನಾಸ್ಪದ ವಸ್ತು ಕಂಡುಬಂದಿಲ್ಲ. ಅದೊಂದು ಹುಸಿಬಾಂಬ್​ ಬೆದರಿಕೆ ಆಗಿದೆ. ವಿಮಾನದಲ್ಲಿ 173 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಸದ್ಯ ಎಲ್ಲಾ ಪ್ರಯಾಣಿಕರು ಈಗ ಸುರಕ್ಷಿತವಾಗಿದ್ದಾರೆ. ಬುಧವಾರ ಕೂಡ ನಮಗೆ ಇದೇ ರೀತಿಯ ಹುಸಿಬಾಂಬ್​ ಕರೆ ಬಂದಿತ್ತು ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:11 pm, Sun, 27 October 24

Follow Us
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!
ರಾಯರ ಆರಾಧನಾ ‌ಮಹೋತ್ಸವದಲ್ಲಿ ಕಿಕ್ಕಿರಿದು ಸೇರಿದ ಭಕ್ತ ಸಮೂಹ!