AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಕಾಣೆಯಾಗಿದ್ದ ಅವಾಮಿ ಲೀಗ್ ನಾಯಕ ಶವವಾಗಿ ಪತ್ತೆ

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಕಾಣೆಯಾಗಿದ್ದ ಅವಾಮಿ ಲೀಗ್​ನ ನಾಯಕ ಪನ್ನ ಶವವಾಗಿ ಪತ್ತೆಯಾಗಿದ್ದಾರೆ.ಆಗಸ್ಟ್ 26 ರಂದು ಸಂಜೆ ಭಾರತ-ಬಾಂಗ್ಲಾದೇಶ ಗಡಿಯಿಂದ 1.5 ಕಿಮೀ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಕಾಣೆಯಾಗಿದ್ದ ಅವಾಮಿ ಲೀಗ್ ನಾಯಕ ಶವವಾಗಿ ಪತ್ತೆ
ಇಶಾಕ್ ಅಲಿ
ನಯನಾ ರಾಜೀವ್
|

Updated on:Aug 29, 2024 | 10:17 AM

Share

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ಬಳಿಕ ಓಡಿ ಹೋಗಿದ್ದ ಅವಾಮಿ ಲೀಗ್​ನ ನಾಯಕ ಶವವಾಗಿ ಪತ್ತೆಯಾಗಿದ್ದಾರೆ. ಬಾಂಗ್ಲಾದೇಶದ ಗಡಿಯಲ್ಲಿರುವ ಮೇಘಾಲಯದ ಜೈನ್ತಿಯಾ ಹಿಲ್ಸ್ ಜಿಲ್ಲೆಯಲ್ಲಿ ಅವಾಮಿ ಲೀಗ್ ನಾಯಕನ ಕೊಳೆತ ಶವ ಪತ್ತೆಯಾಗಿದೆ.

ಮೇಘಾಲಯ ಪೊಲೀಸರು ಅವಾಮಿ ಲೀಗ್ ನಾಯಕ ಇಶಾಕ್ ಅಲಿ ಖಾನ್ ಪನ್ನಾ ಅವರ ಅರೆ ಕೊಳೆತ ದೇಹವನ್ನು ಜೈನ್ತಿಯಾ ಹಿಲ್ಸ್ ಜಿಲ್ಲೆಯ ತೋಟದಿಂದ ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್ 26 ರಂದು ಸಂಜೆ ಭಾರತ-ಬಾಂಗ್ಲಾದೇಶ ಗಡಿಯಿಂದ 1.5 ಕಿಮೀ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪನ್ನಾ ಅವರ ಪಾಸ್‌ಪೋರ್ಟ್ ಮೂಲಕ ಗುರುತಿಸಲಾಗಿದೆ ಎಂದು ಎಸ್‌ಪಿ ಗಿರಿ ಪ್ರಸಾದ್ ತಿಳಿಸಿದ್ದಾರೆ.

ಮೃತ ಅವಾಮಿ ಲೀಗ್ ನಾಯಕ ಯಾರು? ಬಾಂಗ್ಲಾದೇಶ ಛತ್ರ ಲೀಗ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಪಿರೋಜ್‌ಪುರ ಜಿಲ್ಲೆಯ ಅವಾಮಿ ಲೀಗ್‌ನ ಪ್ರಮುಖ ಸದಸ್ಯರಾಗಿರುವ ಪನ್ನಾ ಅವರು ಆಗಸ್ಟ್ 5 ರಂದು ಶೇಖ್ ಹಸೀನಾ ಸರ್ಕಾರ ಪತನದ ನಂತರ ಪರಾರಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಶೇಖ್​ ಹಸೀನಾ ಮತ್ತು ಮಾಜಿ ಸಂಸದರ ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದುಗೊಳಿಸಿದ ಬಾಂಗ್ಲಾ ಸರ್ಕಾರ

ಗಡಿ ದಾಟಲು ಪ್ರಯತ್ನಿಸುತ್ತಿರುವಾಗ ಪನ್ನಾ ಹೃದಯ ಸ್ತಂಭನಕ್ಕೆ ಒಳಗಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಶೇಖ್​ ಹಸೀನಾ ಅವರ ಮಾಜಿ ಕ್ಯಾಬಿನೆಟ್ ಸಚಿವರು ಮತ್ತು ಸಹಾಯಕರ ವಿರುದ್ಧ ಇನ್ನೂ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವರ ವಿರುದ್ಧ ದಾಖಲಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 75 ಕ್ಕೆ ಏರಿದೆ ಎಂದು ಮಾಧ್ಯಮ ವರದಿ ಬುಧವಾರ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:16 am, Thu, 29 August 24

Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ