AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಕಾಣೆಯಾಗಿದ್ದ ಅವಾಮಿ ಲೀಗ್ ನಾಯಕ ಶವವಾಗಿ ಪತ್ತೆ

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಕಾಣೆಯಾಗಿದ್ದ ಅವಾಮಿ ಲೀಗ್​ನ ನಾಯಕ ಪನ್ನ ಶವವಾಗಿ ಪತ್ತೆಯಾಗಿದ್ದಾರೆ.ಆಗಸ್ಟ್ 26 ರಂದು ಸಂಜೆ ಭಾರತ-ಬಾಂಗ್ಲಾದೇಶ ಗಡಿಯಿಂದ 1.5 ಕಿಮೀ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೇಖ್ ಹಸೀನಾ ಸರ್ಕಾರ ಪತನದ ಬಳಿಕ ಕಾಣೆಯಾಗಿದ್ದ ಅವಾಮಿ ಲೀಗ್ ನಾಯಕ ಶವವಾಗಿ ಪತ್ತೆ
ಇಶಾಕ್ ಅಲಿ
ನಯನಾ ರಾಜೀವ್
|

Updated on:Aug 29, 2024 | 10:17 AM

Share

ಬಾಂಗ್ಲಾದೇಶದಲ್ಲಿ ಶೇಖ್ ಹಸೀನಾ ಸರ್ಕಾರದ ಪತನದ ಬಳಿಕ ಓಡಿ ಹೋಗಿದ್ದ ಅವಾಮಿ ಲೀಗ್​ನ ನಾಯಕ ಶವವಾಗಿ ಪತ್ತೆಯಾಗಿದ್ದಾರೆ. ಬಾಂಗ್ಲಾದೇಶದ ಗಡಿಯಲ್ಲಿರುವ ಮೇಘಾಲಯದ ಜೈನ್ತಿಯಾ ಹಿಲ್ಸ್ ಜಿಲ್ಲೆಯಲ್ಲಿ ಅವಾಮಿ ಲೀಗ್ ನಾಯಕನ ಕೊಳೆತ ಶವ ಪತ್ತೆಯಾಗಿದೆ.

ಮೇಘಾಲಯ ಪೊಲೀಸರು ಅವಾಮಿ ಲೀಗ್ ನಾಯಕ ಇಶಾಕ್ ಅಲಿ ಖಾನ್ ಪನ್ನಾ ಅವರ ಅರೆ ಕೊಳೆತ ದೇಹವನ್ನು ಜೈನ್ತಿಯಾ ಹಿಲ್ಸ್ ಜಿಲ್ಲೆಯ ತೋಟದಿಂದ ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್ 26 ರಂದು ಸಂಜೆ ಭಾರತ-ಬಾಂಗ್ಲಾದೇಶ ಗಡಿಯಿಂದ 1.5 ಕಿಮೀ ದೂರದಲ್ಲಿ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪನ್ನಾ ಅವರ ಪಾಸ್‌ಪೋರ್ಟ್ ಮೂಲಕ ಗುರುತಿಸಲಾಗಿದೆ ಎಂದು ಎಸ್‌ಪಿ ಗಿರಿ ಪ್ರಸಾದ್ ತಿಳಿಸಿದ್ದಾರೆ.

ಮೃತ ಅವಾಮಿ ಲೀಗ್ ನಾಯಕ ಯಾರು? ಬಾಂಗ್ಲಾದೇಶ ಛತ್ರ ಲೀಗ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಮತ್ತು ಪಿರೋಜ್‌ಪುರ ಜಿಲ್ಲೆಯ ಅವಾಮಿ ಲೀಗ್‌ನ ಪ್ರಮುಖ ಸದಸ್ಯರಾಗಿರುವ ಪನ್ನಾ ಅವರು ಆಗಸ್ಟ್ 5 ರಂದು ಶೇಖ್ ಹಸೀನಾ ಸರ್ಕಾರ ಪತನದ ನಂತರ ಪರಾರಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಮತ್ತಷ್ಟು ಓದಿ: ಶೇಖ್​ ಹಸೀನಾ ಮತ್ತು ಮಾಜಿ ಸಂಸದರ ರಾಜತಾಂತ್ರಿಕ ಪಾಸ್​ಪೋರ್ಟ್​ ರದ್ದುಗೊಳಿಸಿದ ಬಾಂಗ್ಲಾ ಸರ್ಕಾರ

ಗಡಿ ದಾಟಲು ಪ್ರಯತ್ನಿಸುತ್ತಿರುವಾಗ ಪನ್ನಾ ಹೃದಯ ಸ್ತಂಭನಕ್ಕೆ ಒಳಗಾಗಿರಬಹುದು ಎಂದು ಪ್ರಾಥಮಿಕ ವರದಿಗಳು ಸೂಚಿಸಿವೆ. ಶೇಖ್​ ಹಸೀನಾ ಅವರ ಮಾಜಿ ಕ್ಯಾಬಿನೆಟ್ ಸಚಿವರು ಮತ್ತು ಸಹಾಯಕರ ವಿರುದ್ಧ ಇನ್ನೂ ನಾಲ್ಕು ಪ್ರಕರಣಗಳನ್ನು ದಾಖಲಿಸಲಾಗಿದ್ದು, ಅವರ ವಿರುದ್ಧ ದಾಖಲಾಗಿರುವ ಒಟ್ಟು ಪ್ರಕರಣಗಳ ಸಂಖ್ಯೆ 75 ಕ್ಕೆ ಏರಿದೆ ಎಂದು ಮಾಧ್ಯಮ ವರದಿ ಬುಧವಾರ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:16 am, Thu, 29 August 24

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ