AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ-ಪಾಕಿಸ್ತಾನ ಉದ್ವಿಗ್ನತೆ ನಡುವೆ ಯಾರೊಂದಿಗೆ ಯುದ್ಧಕ್ಕೆ ಸಜ್ಜಾಯ್ತು ಬಾಂಗ್ಲಾದೇಶ?

ಒಂದೆಡೆ ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚಿದೆ. ಇನ್ನೊಂದೆಡೆ ಬಾಂಗ್ಲಾದೇಶ ಕೂಡ ಭಾರತದ ವಿರುದ್ಧ ವಿಷ ಕಾರುತ್ತಿದೆ. ಭಾರತ ಯಾವುದೇ ಸಮಯದಲ್ಲಿ ತನ್ನ ಮೇಲೆ ದಾಳಿ ಮಾಡಬಹುದು ಎಂದು ಪಾಕಿಸ್ತಾನ ಭಾವಿಸಿದೆ. ಇಷ್ಟೇ ಅಲ್ಲ, ಈ ಉದ್ವಿಗ್ನ ಪರಿಸ್ಥಿತಿಯಲ್ಲಿ, ಬಾಂಗ್ಲಾದೇಶ ಕೂಡ ವಿಷ ಕಾರುತ್ತಿದೆ. ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅಧಿಕಾರಿಯೊಬ್ಬರು ಮತ್ತು ನಿವೃತ್ತ ಬಾಂಗ್ಲಾದೇಶದ ಮೇಜರ್ ಜನರಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾರತ-ಪಾಕಿಸ್ತಾನ ಉದ್ವಿಗ್ನತೆ ನಡುವೆ ಯಾರೊಂದಿಗೆ ಯುದ್ಧಕ್ಕೆ ಸಜ್ಜಾಯ್ತು ಬಾಂಗ್ಲಾದೇಶ?
ಯೂನಸ್
ನಯನಾ ರಾಜೀವ್
|

Updated on: May 01, 2025 | 12:42 PM

Share

ನವದೆಹಲಿ, ಮೇ 01: ಪಹಲ್ಗಾಮ್​ನಲ್ಲಿ ನಡೆದ ಉಗ್ರ ದಾಳಿ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನತೆ ತಾಂಡವವಾಡುತ್ತಿದೆ. ಈ ಸಮಯವನ್ನೇ ಸರಿಯಾಗಿ ಬಳಸಿಕೊಳ್ಳಲು ಮುಂದಾಗಿರುವ ಬಾಂಗ್ಲಾದೇಶ(Bangladesh) ಈಶಾನ್ಯ ಭಾರತವನ್ನು ವಶಪಡಿಸಿಕೊಳ್ಳಲು ಚಿಂತನೆ ನಡೆಸುತ್ತಿದೆ.

ಭಾರತ ಯಾವುದೇ ಸಮಯದಲ್ಲಿ ತನ್ನ ಮೇಲೆ ದಾಳಿ ಮಾಡಬಹುದು ಎಂದು ಪಾಕಿಸ್ತಾನ ಭಾವಿಸಿದೆ. ಇಷ್ಟೇ ಅಲ್ಲ, ಈ ಉದ್ವಿಗ್ನ ಪರಿಸ್ಥಿತಿಯಲ್ಲಿ, ಬಾಂಗ್ಲಾದೇಶ ಕೂಡ ವಿಷ ಕಾರುತ್ತಿದೆ. ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರದ ಅಧಿಕಾರಿಯೊಬ್ಬರು ಮತ್ತು ನಿವೃತ್ತ ಬಾಂಗ್ಲಾದೇಶದ ಮೇಜರ್ ಜನರಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ಬಾಂಗ್ಲಾದೇಶ ಭಾರತದ ಏಳು ಈಶಾನ್ಯ ರಾಜ್ಯಗಳನ್ನು ಆಕ್ರಮಿಸಿಕೊಳ್ಳಬೇಕು ಎಂದು ನಿವೃತ್ತ ಬಾಂಗ್ಲಾದೇಶದ ಮೇಜರ್ ಜನರಲ್ ಎಎಲ್ಎಂ ಫಜ್ಲುರ್ ರೆಹಮಾನ್ ಹೇಳಿದ್ದಾರೆ. ಕಳೆದ ವರ್ಷ ಆಗಸ್ಟ್‌ನಲ್ಲಿ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸಿದ ನಂತರ ನವದೆಹಲಿಯೊಂದಿಗಿನ ಢಾಕಾದ ಸಂಬಂಧಗಳು ಹದಗೆಟ್ಟಿತ್ತು.

ಇದನ್ನೂ ಓದಿ
Image
WITT 2025: ಪ್ರಧಾನಿಯನ್ನು ಶ್ಲಾಘಿಸಿದ ಟಿವಿ9 ನೆಟ್ವರ್ಕ್ ಸಿಇಒ
Image
WITT 2025: ‘ವಾಟ್ ಇಂಡಿಯಾ ಥಿಂಕ್ಸ್ ಟುಡೇ’: ಮೋದಿ ಭಾಷಣ
Image
WITT 2025: ಪಿಎಂ ಮೋದಿ ಭಾಗಿ; ನೇರಪ್ರಸಾರ ವೀಕ್ಷಿಸಿ
Image
ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ದೇಶಕ್ಕೆ ನೀಡಿದ ಸಂದೇಶ ಏನು?

ಮತ್ತಷ್ಟು ಓದಿ: ಯೂನಸ್ ಸರ್ಕಾರಕ್ಕೆ ಮೋದಿ ಶಾಕ್; ಬಾಂಗ್ಲಾದೇಶದ ಟ್ರಾನ್ಸ್‌ಶಿಪ್‌ಮೆಂಟ್ ಸೌಲಭ್ಯ ರದ್ದುಗೊಳಿಸಿದ ಭಾರತ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪ್ರಪಂಚದ ಅನೇಕ ದೇಶಗಳು ಈ ಘಟನೆಯನ್ನು ಪ್ರತಿಭಟಿಸಿವೆ. ಹಲವು ದೇಶಗಳ ಮುಖ್ಯಸ್ಥರು ಪ್ರಧಾನಿ ಮೋದಿಯವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಈ ದಾಳಿಯಲ್ಲಿ 26 ಜನರು ಸಾವನ್ನಪ್ಪಿದರು, ಅವರಲ್ಲಿ ಹೆಚ್ಚಿನವರು ಹಿಂದೂ ಪ್ರವಾಸಿಗರು. ಈ ಘಟನೆಯು ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಎತ್ತರಕ್ಕೆ ಕೊಂಡೊಯ್ದಿದೆ.

ದಾಳಿಗೆ ಭಾರತ ಪಾಕಿಸ್ತಾನವನ್ನು ದೂಷಿಸಿದರೆ, ಪಾಕಿಸ್ತಾನ ಆರೋಪಗಳನ್ನು ನಿರಾಕರಿಸಿತು. ಈ ಘಟನೆಯು ಎರಡೂ ದೇಶಗಳ ನಡುವೆ ಯುದ್ಧದ ಭಯವನ್ನು ಹೆಚ್ಚಿಸಿದ್ದಲ್ಲದೆ, ಪ್ರಾದೇಶಿಕ ಮತ್ತು ಜಾಗತಿಕ ಶಕ್ತಿಗಳ ನಿಲುವನ್ನು ಎತ್ತಿ ತೋರಿಸಿತು. ಪಹಲ್ಗಾಮ್ ದಾಳಿಯ ನಂತರ, ಭಾರತವು ತನ್ನ ಕೆಲವು ನೆರೆಯ ರಾಷ್ಟ್ರಗಳಿಂದ ಬೆಂಬಲವನ್ನು ಪಡೆಯಿತು. ಭೂತಾನ್ ಮತ್ತು ಬಾಂಗ್ಲಾದೇಶಗಳು ದಾಳಿಯನ್ನು ಸ್ಪಷ್ಟವಾಗಿ ಖಂಡಿಸಿದವು ಮತ್ತು ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಬೆಂಬಲಿಸಿದವು.

ಫಜ್ಲುರ್ ರೆಹಮಾನ್ ಯಾರು? ಫಜ್ಲುರ್ ರೆಹಮಾನ್ ಅವರನ್ನು ಮೊಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರಕ್ಕೆ ಬಹಳ ಆಪ್ತ ಎಂದು ಪರಿಗಣಿಸಲಾಗಿದೆ. ಇದಕ್ಕಾಗಿಯೇ ಮುಹಮ್ಮದ್ ಯೂನಸ್ ಅವರನ್ನು ರಾಷ್ಟ್ರೀಯ ಸ್ವತಂತ್ರ ತನಿಖಾ ಆಯೋಗದ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ. ವಾಸ್ತವವಾಗಿ, 2001 ರಲ್ಲಿ ಬಾಂಗ್ಲಾದೇಶ-ಭಾರತ ಗಡಿಯಲ್ಲಿ ಘರ್ಷಣೆಗಳು ನಡೆದವು. ಈ ಘರ್ಷಣೆಯಲ್ಲಿ 16 ಬಿಎಸ್‌ಎಫ್ ಯೋಧರು ಹುತಾತ್ಮರಾದರು. ಆ ಸಮಯದಲ್ಲಿ ರೆಹಮಾನ್ ಬಿಡಿಆರ್‌ನ ಮುಖ್ಯಸ್ಥರಾಗಿದ್ದ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ