AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿಗೆ 6 ಕ್ವಿಂಟಾಲ್​ ಮಾವಿನ ಹಣ್ಣು ಕಳುಹಿಸಿದ ಬಾಂಗ್ಲಾದೇಶದ ಪ್ರಧಾನಿ

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee)ಗೆ 600 ಕೆಜಿ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ.

ಮಮತಾ ಬ್ಯಾನರ್ಜಿಗೆ 6 ಕ್ವಿಂಟಾಲ್​ ಮಾವಿನ ಹಣ್ಣು ಕಳುಹಿಸಿದ ಬಾಂಗ್ಲಾದೇಶದ ಪ್ರಧಾನಿ
ಮಮತಾ ಬ್ಯಾನರ್ಜಿ
ನಯನಾ ರಾಜೀವ್
|

Updated on: Jun 13, 2023 | 11:11 AM

Share

ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ(Mamata Banerjee)ಗೆ 600 ಕೆಜಿ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ. ಹಸೀನಾ ಅವರು ಈಶಾನ್ಯದ ಎಲ್ಲಾ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ. ಕಳೆದ ವರ್ಷ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಪಶ್ಚಿಮ ಬಂಗಾಳ, ತ್ರಿಪುರಾ ಮತ್ತು ಅಸ್ಸಾಂ ಮುಖ್ಯಮಂತ್ರಿಗಳಿಗೆ ಮಾವಿನ ಹಣ್ಣುಗಳನ್ನು ಉಡುಗೊರೆಯಾಗಿ ಕಳುಹಿಸಿದ್ದರು. ರಾಜತಾಂತ್ರಿಕ ಪ್ರಯತ್ನಗಳ ಭಾಗವಾಗಿ ಬಾಂಗ್ಲಾದೇಶದ ಪ್ರಧಾನಿ ಮಮತಾ ಬ್ಯಾನರ್ಜಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದಾರೆ.

ಪ್ರಧಾನಿ ಮೋದಿಗೆ ಮಾವಿನ ಹಣ್ಣು ಕಳುಹಿಸಿದ್ದ ಮಮತಾ ನಂಬರ್ 1 ತಳಿಗಳಾದ ಹಿಮಸಾಗರ, ಲಕ್ಷ್ಮಣಭೋಗ್ ಮತ್ತು ಫಾಸ್ಲಿ ಸೇರಿದಂತೆ ನಾಲ್ಕು ಕಿಲೋಗ್ರಾಂಗಳಷ್ಟು ವಿವಿಧ ತಳಿಯ ಮಾವಿನ ಹಣ್ಣುಗಳನ್ನು ನವದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ ಪ್ರಧಾನಿ ನಿವಾಸಕ್ಕೆ ಕಳುಹಿಸಲಾಯಿತು. ಮಾವಿನ ಹಣ್ಣುಗಳನ್ನು ಸುಂದರವಾದ ಉಡುಗೊರೆ ಪೆಟ್ಟಿಗೆಯಲ್ಲಿ ಕಳುಹಿಸಲಾಗಿದೆ ಎಂದು ಮುಖ್ಯಮಂತ್ರಿಯವರ ಆಪ್ತ ಮೂಲಗಳು ತಿಳಿಸಿದ್ದವು.

ಮತ್ತಷ್ಟು ಓದಿ: ಭಾರತದ ಪ್ರಮುಖ ಮಾವಿನ ಹಣ್ಣಿನ ತಳಿಗಳ ಮಾಹಿತಿ ಇಲ್ಲಿವೆ

ಮೋದಿ ಅವರಿಗಷ್ಠೇ ಅಲ್ಲದೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಕೂಡ ಮಾವಿನ ಹಣ್ಣುನ್ನು ಕಳುಹಿಸಿ, ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕಳೆದ ವರ್ಷ ಮಮತಾ ಬ್ಯಾನರ್ಜಿ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಾವಿನ ಹಣ್ಣುಗಳನ್ನು ಕಳುಹಿಸಿದ್ದರು.

2019 ರ ದುರ್ಗಾ ಪೂಜೆಯ ಸಂದರ್ಭದಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿಗೆ ಕುರ್ತಾ, ಪೈಜಾಮ ಮತ್ತು ಸಿಹಿತಿಂಡಿಗಳನ್ನು ಕಳುಹಿಸಿದ್ದರು ಎಂದು ಸ್ವತಃ ಪ್ರಧಾನಿ ಮೋದಿ ಬಹಿರಂಗಪಡಿಸಿದ್ದರು. ವಿರೋಧ ಪಕ್ಷಗಳಲ್ಲಿ ನನಗೆ ಅನೇಕ ಸ್ನೇಹಿತರಿದ್ದಾರೆ ಎಂದು ಹೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!