AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangladesh Prime Minister India visit : ಭಾರತ ನಮ್ಮ ಸ್ನೇಹಿತ, ನಾನು ಭಾರತಕ್ಕೆ ಬಂದಾಗಲೆಲ್ಲಾ ನನಗೆ ಸಂತೋಷವಾಗುತ್ತದೆ : ಶೇಖ್ ಹಸೀನಾ

ಮೋದಿ ಅವರೊಂದಿಗಿನ ಮಾತುಕತೆಯು ಆಯಾ ದೇಶಗಳಲ್ಲಿನ ಜನರ ಸ್ಥಿತಿಗತಿ, ಬಡತನ ನಿರ್ಮೂಲನೆ ಮತ್ತು ಆರ್ಥಿಕ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತದೆ ಎಂದು ಹೇಳಿದರು. ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಭಾರತದ ಕೊಡುಗೆಯನ್ನು ಎತ್ತಿ ಹಿಡಿದ ಹಸೀನಾ

Bangladesh Prime Minister India visit :  ಭಾರತ ನಮ್ಮ ಸ್ನೇಹಿತ, ನಾನು ಭಾರತಕ್ಕೆ ಬಂದಾಗಲೆಲ್ಲಾ ನನಗೆ ಸಂತೋಷವಾಗುತ್ತದೆ : ಶೇಖ್ ಹಸೀನಾ
Bangladesh Prime Minister India visit
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 06, 2022 | 11:51 AM

Share

ದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟಪತಿ ಜಗದೀಪ್ ಧಂಖರ್ ಅವರನ್ನು ಭೇಟಿ ಮಾಡುವ ಮುನ್ನ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಮಂಗಳವಾರ ರಾಷ್ಟ್ರಪತಿ ಭವನದಲ್ಲಿ ವಿಧ್ಯುಕ್ತ ಸ್ವಾಗತವನ್ನು ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಬರಮಾಡಿಕೊಂಡರು. ರಾಷ್ಟ್ರಪತಿ ಭವನದಲ್ಲಿ ಸುದ್ದಿಗಾರರೊಂದಿಗೆ ಸಂವಾದ ನಡೆಸಿದ ಬಾಂಗ್ಲಾದೇಶದ ಪ್ರಧಾನಿ, ಮೋದಿ ಅವರೊಂದಿಗಿನ ಮಾತುಕತೆಯು ಆಯಾ ದೇಶಗಳಲ್ಲಿನ ಜನರ ಸ್ಥಿತಿಗತಿ, ಬಡತನ ನಿರ್ಮೂಲನೆ ಮತ್ತು ಆರ್ಥಿಕ ಅಭಿವೃದ್ಧಿಯ ಮೇಲೆ ಕೇಂದ್ರೀಕರಿಸುತ್ತದೆ ಎಂದು ಹೇಳಿದರು. ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಭಾರತದ ಕೊಡುಗೆಯನ್ನು ಎತ್ತಿ ಹಿಡಿದ ಹಸೀನಾ, ಭಾರತಕ್ಕೆ ಭೇಟಿ ನೀಡುವುದು ನನಗೆ ಯಾವಾಗಲೂ ಸಂತೋಷ ಎಂದು ಹೇಳಿದರು.

ಭಾರತ ನಮ್ಮ ಸ್ನೇಹಿತ. ನಾನು ಭಾರತಕ್ಕೆ ಬಂದಾಗಲೆಲ್ಲಾ ನನಗೆ ಸಂತೋಷವಾಗುತ್ತದೆ, ಅದರಲ್ಲೂ ವಿಶೇಷವಾಗಿ ನಮ್ಮ ವಿಮೋಚನಾ ಯುದ್ಧದ ಸಮಯದಲ್ಲಿ ಭಾರತ ನೀಡಿದ ಕೊಡುಗೆಯನ್ನು ನಾವು ಯಾವಾಗಲೂ ನೆನಪಿಸಿಕೊಳ್ಳುತ್ತೇವೆ. ನಾವು ಸೌಹಾರ್ದ ಸಂಬಂಧ ಹೊಂದಿದ್ದೇವೆ, ನಾವು ಪರಸ್ಪರ ಸಹಕರಿಸುತ್ತಿದ್ದೇವೆ ಎಂದು ಹಸೀನಾ ಹೇಳಿದರು. ನಮ್ಮ ಜನರ ಒಕ್ಕೂಟ, ಬಡತನ ನಿರ್ಮೂಲನೆ ಮತ್ತು ಆರ್ಥಿಕತೆಯನ್ನು ಅಭಿವೃದ್ಧಿಪಡಿಸುವುದು ನಮ್ಮ ಮುಖ್ಯ ಗಮನ. ಈ ಎಲ್ಲಾ ಸಮಸ್ಯೆಗಳೊಂದಿಗೆ, ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮಾತ್ರವಲ್ಲದೆ ದಕ್ಷಿಣ ಏಷ್ಯಾದಾದ್ಯಂತ ಜನರು ಉತ್ತಮ ಜೀವನವನ್ನು ಪಡೆಯಲು ನಮ್ಮ ಎರಡು ದೇಶಗಳು ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ನಾನು ಭಾವಿಸುತ್ತೇನೆ. ಅದು ನಮ್ಮ ಮುಖ್ಯ ಗುರಿ ಎಂದು ಅವರು ಹೇಳಿದರು.

ತಮ್ಮ ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿ ಅತ್ಯಂತ ಫಲಪ್ರದ ಚರ್ಚೆಗಳು ನಡೆಯಲಿದೆ, ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದು ಮತ್ತು ನಮ್ಮ ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವುದು ಮುಖ್ಯ ಗುರಿಯಾಗಿದೆ ಎಂದು ಪ್ರಧಾನಿ ಶೇಖ್ ಹಸೀನಾ ಹೇಳಿದರು. ಸ್ನೇಹದಿಂದ ನೀವು ಯಾವುದೇ ಸಮಸ್ಯೆಯನ್ನು ಪರಿಹರಿಸಬಹುದು. ಆದ್ದರಿಂದ, ನಾವು ಯಾವಾಗಲೂ ಅದನ್ನು ಮಾಡುತ್ತೇವೆ, ”ಎಂದು ಅವರು ಹೇಳಿದರು.

ಸೋಮವಾರ, ಹಸೀನಾ ಅವರು ನವದೆಹಲಿಗೆ ಆಗಮಿಸಿದ ಗಂಟೆಗಳ ನಂತರ ದರ್ಗಾ ನಿಜಾಮುದ್ದೀನ್ ಔಲಿಯಾಗೆ ಭೇಟಿ ನೀಡಿದರು. ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬಾಂಗ್ಲಾದೇಶದ ಪ್ರಧಾನಿಯನ್ನು ಅವರನ್ನು ಮೊದಲ ದಿನ ಭೇಟಿ ಮಾಡಿದರು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರನ್ನು ಭೇಟಿ ಮಾಡಲು ಸಂತೋಷವಾಗಿದೆ. ನಮ್ಮ ನಾಯಕತ್ವ ಮಟ್ಟದ ಸಂಪರ್ಕಗಳ ಉಷ್ಣತೆ ಮತ್ತು ಆವರ್ತನವು ನಮ್ಮ ನಿಕಟ ನೆರೆಯ ಪಾಲುದಾರಿಕೆಗೆ ಸಾಕ್ಷಿಯಾಗಿದೆ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.