AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಗುರುತಿನ ಚೀಟಿ ತೋರಿಸಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದ ಬಾಂಗ್ಲಾ ದಂಪತಿಯ ಬಂಧನ

ನಕಲಿ ಗುರುತಿನ ಚೀಟಿ ತೋರಿಸಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದ ದಂಪತಿಯನ್ನು ಬಿಎಸ್​ಎಫ್​ ಯೋಧರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಚಂಗ್ರಬಂಧ ವಲಸೆ ಚೆಕ್ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ದಂಪತಿ ನಕಲಿ ಭಾರತೀಯ ದಾಖಲೆಗಳೊಂದಿಗೆ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ನಕಲಿ ಗುರುತಿನ ಚೀಟಿ ತೋರಿಸಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದ ಬಾಂಗ್ಲಾ ದಂಪತಿಯ ಬಂಧನ
ಸಿಕ್ಕಿಬಿದ್ದ ದಂಪತಿImage Credit source: India Today
ನಯನಾ ರಾಜೀವ್
|

Updated on:Aug 07, 2024 | 11:34 AM

Share

ಬಾಂಗ್ಲಾದೇಶದಲ್ಲಿ ಪ್ರತಿಭಟನೆಗಳು ಜನರ ನಿದ್ದೆಗೆಡಿಸಿವೆ. ನಕಲಿ ಗುರುತಿನ ಚೀಟಿ(ID Cards) ತೋರಿಸಿ ಭಾರತಕ್ಕೆ ಬರಲು ಯತ್ನಿಸುತ್ತಿದ್ದ ಬಾಂಗ್ಲಾ ದಂಪತಿಯನ್ನು ಗಡಿಯಲ್ಲಿ ಬಿಎಸ್​ಎಫ್ ಯೋಧರು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯ ಚಂಗ್ರಬಂಧ ವಲಸೆ ಚೆಕ್ ಪೋಸ್ಟ್‌ನಲ್ಲಿ ಬಾಂಗ್ಲಾದೇಶದ ದಂಪತಿ ನಕಲಿ ಭಾರತೀಯ ದಾಖಲೆಗಳೊಂದಿಗೆ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾರೆ.

ದಂಪತಿಯನ್ನು ಇನಾಮುಲ್ ಹಕ್ ಸೊಹೈಲ್ ಮತ್ತು ಅವರ ಪತ್ನಿ ಸಂಜಿದಾ ಝಿನಾ ಇಲಾಹಿ ಎಂದು ಗುರುತಿಸಲಾಗಿದ್ದು, ಪಾನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಸೇರಿದಂತೆ ಭಾರತೀಯ ಗುರುತಿನ ದಾಖಲೆಗಳು ಪತ್ತೆಯಾಗಿವೆ. ಅವರ ಜೊತೆಯಲ್ಲಿ ಅವರ ಪುಟ್ಟ ಮಗು ಕೂಡ ಇತ್ತು.

ಬಾಂಗ್ಲಾದೇಶದಿಂದ 7 ಬಾಂಗ್ಲಾದೇಶದಿಂದ 7 ದಿನಗಳ ವೈದ್ಯಕೀಯ ವೀಸಾದೊಂದಿಗೆ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸಿದಾಗ ಗಡಿ ಭದ್ರತಾ ಪಡೆ (ಬಿಎಸ್ಎಫ್) ದಂಪತಿಯನ್ನು ಕಸ್ಟಡಿಗೆ ತೆಗೆದುಕೊಂಡಿತು.

ಮತ್ತಷ್ಟು ಓದಿ: ದೇಶದಲ್ಲಿ ಅಶಾಂತಿ ಸೃಷ್ಟಿಯಾದಾಗ ದೇಶ ಬಿಟ್ಟು ಪಲಾಯನ ಮಾಡಿರುವ ನಾಯಕರಲ್ಲಿ ಹಸೀನಾ ಮೊದಲಿಗರಲ್ಲ

ಬಾಂಗ್ಲಾದೇಶದ ರಂಗ್‌ಪುರ ಮೂಲದ ಸೊಹೈಲ್‌ನನ್ನು ಬಿಎಸ್‌ಎಫ್ ಅಧಿಕಾರಿಗಳು ಚಂಗ್ರಬಂಧದಲ್ಲಿ ತಪಾಸಣೆಯ ಭಾಗವಾಗಿ ಬಂಧಿಸಿದ್ದಾರೆ. ಅವರ ಸಾಮಾನುಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಬಿಎಸ್‌ಎಫ್ ಸಿಬ್ಬಂದಿ ದಂಪತಿಯ ಲಗೇಜ್‌ನಲ್ಲಿ ಅಡಗಿಸಿಟ್ಟ ಭಾರತೀಯ ದಾಖಲೆಗಳನ್ನು ಪತ್ತೆ ಮಾಡಿದರು. ಐಡಿಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಈ ದಾಖಲೆಗಳ ಸತ್ಯಾಸತ್ಯತೆ ಮತ್ತು ಮೂಲವು ಪ್ರಸ್ತುತ ತನಿಖೆಯಲ್ಲಿದೆ.

ಅವರ ಬಂಧನದ ನಂತರ, ದಂಪತಿಯನ್ನು ಹೆಚ್ಚಿನ ವಿಚಾರಣೆ ಮತ್ತು ಕಾನೂನು ಕ್ರಮಕ್ಕಾಗಿ ಬಂಗಾಳ ಪೊಲೀಸರಿಗೆ ಹಸ್ತಾಂತರಿಸಲಾಯಿತು. ಘಟನೆಯ ನಂತರ ಪಶ್ಚಿಮ ಬಂಗಾಳದ ಹಲವು ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Wed, 7 August 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ