ಬ್ಯಾಂಕ್ ತಪ್ಪಿನಿಂದ ಮಹಿಳೆಯೊಬ್ಬರ ಅಕೌಂಟ್​ಗೆ 10 ಕೋಟಿ ರೂ. ಜಮಾ, ಆಕೆ ಮಾಡಿದ್ದೇನು?

ಮಹಿಳೆಯೊಬ್ಬರ ಬ್ಯಾಂಕ್ ಖಾತೆಗೆ ಅನಿರೀಕ್ಷಿತವಾಗಿ 10 ಕೋಟಿ ರೂ. ಜಮೆಯಾಗಿತ್ತು. ಬ್ಯಾಂಕ್‌ನ ತಾಂತ್ರಿಕ ದೋಷದಿಂದ ಈ ಹಣ ಬಂದಿದ್ದರೂ, ಅವರು ಒಂದು ರೂಪಾಯಿ ಕೂಡ ವಿತ್‌ಡ್ರಾ ಮಾಡದೆ, ತಕ್ಷಣವೇ ಬ್ಯಾಂಕ್ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ. ಹಣದ ಆಸೆ ಪಡದೆ ಪ್ರಾಮಾಣಿಕತೆ ಮೆರೆದ ಅವರ ಈ ನಡೆ ವ್ಯಾಪಕ ಪ್ರಶಂಸೆಗೊಳಗಾಗಿದೆ. ಇದು ಬ್ಯಾಂಕ್‌ ತಪ್ಪು ಅಥವಾ ವಹಿವಾಟಿನ ದೋಷವಾಗಿರಬಹುದು ಎಂದು ಬ್ಯಾಂಕ್ ಮ್ಯಾನೇಜರ್ ಹೇಳಿದ್ದಾರೆ.

ಬ್ಯಾಂಕ್ ತಪ್ಪಿನಿಂದ ಮಹಿಳೆಯೊಬ್ಬರ ಅಕೌಂಟ್​ಗೆ 10 ಕೋಟಿ ರೂ. ಜಮಾ, ಆಕೆ ಮಾಡಿದ್ದೇನು?
ಮಹಿಳೆ

Updated on: Mar 29, 2026 | 8:14 AM

ಮೈನ್​ಪುರಿ, ಮಾರ್ಚ್​ 29: ಹಣ ಕಂಡ್ರೆ ಹೆಣನೂ ಬಾಯಿ ಬಿಡುತ್ತೆ ಅನ್ನೋ ಕಾಲದಲ್ಲಿ, ತಮ್ಮ ಬ್ಯಾಂಕ್(Bank) ಖಾತೆಗೆ ಏನಾದ್ರೂ ಕೋಟಿ ಕೋಟಿ ಹಣ ಬಂದ್ರೆ ಯಾರಾದ್ರೂ ಸುಮ್ನಿರ್ತಾರಾ, ಮೊದಲು ವಿತ್​ ಡ್ರಾ ಮಾಡುತ್ತಾರೆ. ಆದ್ರೆ ಇಲ್ಲೊಬ್ಬ ಮಹಿಳೆಯ ಖಾತೆಗೆ 10 ಕೋಟಿ ರೂ. ಹಣ ಬಂದಿದೆ. ಆಕೆ ಮಾಡಿದ್ದೇನು ಇಲ್ಲಿದೆ ಮಾಹಿತಿ.

ಬಿಚ್ವಾನ್ ಪ್ರದೇಶದ ದೇವಗಂಜ್ ಗ್ರಾಮದ ನಿವಾಸಿ ಪರಸ್ಭಾನ್ ಬಹೇಲಿಯಾ ಅವರ ಪತ್ನಿ ರೀಟಾ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದಾರೆ.ಕೃಷಿಯ ಮೂಲಕ ಜೀವನೋಪಾಯವನ್ನು ಗಳಿಸುತ್ತಿದ್ದಾರೆ.
ನವರಾತ್ರಿಯ ಸಮಯದಲ್ಲಿ ಅಷ್ಟಮಿಯ ಸಂದರ್ಭದಲ್ಲಿ, ಅವರು ತಮ್ಮ ಸ್ಥಳೀಯ ಬ್ಯಾಂಕ್‌ಗೆ ಹಣ ಬೇಕಿತ್ತೆಂದು ಭೇಟಿ ನೀಡಿದ್ದರು. ಆದರೆ ಶಾಖೆ ಮುಚ್ಚಿದ್ದರಿಂದ ಹಣ ಸಿಗಲಿಲ್ಲ.

ನಂತರ ಅವರು ಹತ್ತಿರದ ಎಟಿಎಂಗೆ ಹೋಗಿ ತಮ್ಮ ಬ್ಯಾಲೆನ್ಸ್ ಪರಿಶೀಲಿಸಿದರು, ಆದರೆ ಅವರು ಕಂಡದ್ದನ್ನು ನೋಡಿ ದಿಗ್ಭ್ರಮೆಗೊಂಡರು. ಬ್ಯಾಂಕ್ ಆಫ್ ಇಂಡಿಯಾದಲ್ಲಿನ ಅವರ ಖಾತೆಯಲ್ಲಿ 9,99,49,588 ರೂ. ಅಂದರೆ ಸುಮಾರು ಹತ್ತು ಕೋಟಿ ರೂಪಾಯಿಗಳ ಬ್ಯಾಲೆನ್ಸ್ ಇತ್ತು.

ಮತ್ತಷ್ಟು ಓದಿ: ರಜೆ ನೀಡದೆ ಸಂಬಳವನ್ನೂ ಕಟ್ ಮಾಡಿದ್ದಕ್ಕೆ ಬ್ಯಾಂಕ್ ಮ್ಯಾನೇಜರ್​ಗೆ ಶೂಟ್ ಮಾಡಿ ಕೊಂದ ಸೆಕ್ಯುರಿಟಿ

ತನ್ನ ಕಣ್ಣುಗಳನ್ನು ನಂಬಲು ಸಾಧ್ಯವಾಗದೆ, ಅವರು ಮತ್ತೊಂದು ಎಟಿಎಂನಲ್ಲಿ ಎರಡನೇ ಬಾರಿಗೆ ಬ್ಯಾಲೆನ್ಸ್ ಪರಿಶೀಲಿಸಿದರು. ವೀಡಿಯೊವನ್ನು ರೆಕಾರ್ಡ್ ಮಾಡಿದರು, ಅದು ಅಂದಿನಿಂದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ತನ್ನ ಖಾತೆಯಲ್ಲಿ ಅಪಾರ ಮೊತ್ತ ತೋರಿಸುತ್ತಿದ್ದರೂ, ರೀಟಾ ಹಣವನ್ನು ವಿತ್​ ಡ್ರಾ ಮಾಡಲು ಮುಂದಾಗಲಿಲ್ಲ.ರಿಸ್ಥಿತಿಯನ್ನು ಸರಿಯಾಗಿ ವಿವರಿಸುವವರೆಗೆ ಹಣವನ್ನು ಮುಟ್ಟಬೇಡಿ ಎಂದು ಅವಳು ತನ್ನ ಕುಟುಂಬ ಸದಸ್ಯರಿಗೆ ದೃಢವಾಗಿ ಹೇಳಿದ್ದರು. ಎಲ್ಲರೂ ಅವರ ಪ್ರಾಮಾಣೀಕತೆಯನ್ನು ಕೊಂಡಾಡಿದ್ದಾರೆ.

ರೀಟಾ ಮತ್ತು ಅವರ ಕುಟುಂಬ ಈ ವಿಷಯವನ್ನು ವರದಿ ಮಾಡಲು ಬ್ಯಾಂಕಿಗೆ ಹೋದಾಗ, ಸಾರ್ವಜನಿಕ ರಜೆಗಾಗಿ ಶಾಖೆ ಮುಚ್ಚಿತ್ತು. ಬ್ಯಾಂಕ್ ಆಫ್ ಇಂಡಿಯಾದ ಕರೀಮ್‌ಗಂಜ್ ಶಾಖೆಯ ವ್ಯವಸ್ಥಾಪಕ ರಿಷಿಕಾಂತ್ ಪಾಂಡೆ, ಘಟನೆಯು ತಾಂತ್ರಿಕ ದೋಷ ಅಥವಾ ವಹಿವಾಟಿನ ದೋಷದಿಂದ ಉಂಟಾಗಿರುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.

ಈ ಘಟನೆಯು ಪ್ರದೇಶದಾದ್ಯಂತ ಚರ್ಚೆಯ ವಿಷಯವಾಗಿದೆ, ರೀಟಾ ಅವರ ಕುಟುಂಬಕ್ಕೆ ಹಣವನ್ನು ದುರುಪಯೋಗಪಡಿಸಿಕೊಳ್ಳಲು ಎಲ್ಲಾ ಅವಕಾಶಗಳು ಇದ್ದರು ಪ್ರಾಮಾಣೀಕತೆ ತೋರಿದ್ದಕ್ಕಾಗಿ ಎಲ್ಲರೂ ಆಕೆಯನ್ನು ಶ್ಲಾಘಿಸಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us