AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ; 86 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬ್ಯಾಂಕ್ ಆಫ್ ಬರೋಡಾ (BOB) 86 ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವಿ ಮತ್ತು ಪಿಜಿ, ವೃತ್ತಿಪರ ಅರ್ಹತೆ, ಜೊತೆಗೆ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನದೊಂದಿಗೆ ಉತ್ತಮ ಬ್ಯಾಂಕಿಂಗ್ ವೃತ್ತಿ ಅವಕಾಶವಿದೆ. ಅರ್ಜಿ ಶುಲ್ಕ ಮತ್ತು ವಯೋಮಿತಿ ವಿವರಗಳಿದ್ದು, ಆಸಕ್ತರು ಜುಲೈ 6 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

BOB Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶ; 86 ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬ್ಯಾಂಕ್ ಆಫ್ ಬರೋಡಾದಲ್ಲಿ ಉದ್ಯೋಗಾವಕಾಶImage Credit source: Pinterest
ಅಕ್ಷತಾ ವರ್ಕಾಡಿ
|

Updated on:Jun 19, 2026 | 2:45 PM

Share

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉತ್ತಮ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಇಲ್ಲಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆದ ಬ್ಯಾಂಕ್ ಆಫ್ ಬರೋಡಾ (BOB) ತನ್ನ ಕಾರ್ಪೊರೇಟ್ ಮತ್ತು ಸಾಂಸ್ಥಿಕ ಕ್ರೆಡಿಟ್ (C&IC) ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಖಾಲಿ ಇರುವ ಒಟ್ಟು ಹುದ್ದೆಗಳ ವಿವರ:

ಈ ನೇಮಕಾತಿ ಪ್ರಕ್ರಿಯೆಯ ಅಡಿಯಲ್ಲಿ ದೇಶದ ವಿವಿಧ ಶಾಖೆಗಳಲ್ಲಿ ಒಟ್ಟು 86 ನಿಯಮಿತ (Regular) ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಮ್ಯಾನೇಜರ್ – ಕ್ರೆಡಿಟ್ ವಿಶ್ಲೇಷಕ (4 ಹುದ್ದೆಗಳು), ಹಿರಿಯ ವ್ಯವಸ್ಥಾಪಕ – ಕ್ರೆಡಿಟ್ ವಿಶ್ಲೇಷಕ (38 ಹುದ್ದೆಗಳು), ಮುಖ್ಯ ವ್ಯವಸ್ಥಾಪಕ – ಕ್ರೆಡಿಟ್ ವಿಶ್ಲೇಷಕ (1 ಹುದ್ದೆ), ಸೀನಿಯರ್ ಮ್ಯಾನೇಜರ್ – C&IC ರಿಲೇಶನ್‌ಶಿಪ್ (36 ಹುದ್ದೆಗಳು) ಮತ್ತು ಮುಖ್ಯ ವ್ಯವಸ್ಥಾಪಕ – C&IC ರಿಲೇಶನ್‌ಶಿಪ್ (7 ಹುದ್ದೆಗಳು) ಸೇರಿವೆ.

ಅಗತ್ಯವಿರುವ ಶೈಕ್ಷಣಿಕ ಅರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಭಾಗದಲ್ಲಿ ಪದವಿ (Graduation) ಮುಗಿಸಿರಬೇಕು. ಇದರೊಂದಿಗೆ ಫೈನಾನ್ಸ್ ಸ್ಪೆಷಲೈಸೇಶನ್‌ನಲ್ಲಿ ಪಿಜಿ (PG) ಅಥವಾ ಡಿಪ್ಲೊಮಾ ಹೊಂದಿರಬೇಕು. ಅಥವಾ CA/CMA/CS/CFA ನಂತಹ ವೃತ್ತಿಪರ ಅರ್ಹತೆಗಳನ್ನು ಪಡೆದಿರಬೇಕು. ಇದರ ಜೊತೆಗೆ ಬ್ಯಾಂಕಿಂಗ್ ಅಥವಾ ಹಣಕಾಸು ಕ್ಷೇತ್ರದಲ್ಲಿ ಸಂಬಂಧಿತ ಕೆಲಸದ ಅನುಭವ ಇರುವುದು ಕಡ್ಡಾಯವಾಗಿದೆ.

ವಯೋಮಿತಿ ಮತ್ತು ಸಡಿಲಿಕೆ:

ವಿವಿಧ ಹುದ್ದೆಗಳಿಗೆ ಅನುಗುಣವಾಗಿ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಮ್ಯಾನೇಜರ್ ಹುದ್ದೆಗಳಿಗೆ 25 ರಿಂದ 30 ವರ್ಷಗಳು, ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ 28 ರಿಂದ 35 ವರ್ಷಗಳು ಮತ್ತು ಚೀಫ್ ಮ್ಯಾನೇಜರ್ ಹುದ್ದೆಗಳಿಗೆ 32 ರಿಂದ 42 ವರ್ಷಗಳ ವಯೋಮಿತಿ ಇರಬೇಕು. ನಿಯಮಾವಳಿಗಳ ಪ್ರಕಾರ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರಲಿದೆ.

ಇದನ್ನೂ ಓದಿ: ಲಿಖಿತ ಪರೀಕ್ಷೆಯಿಲ್ಲದೆ ಸಿಗಲಿದೆ ತಿಂಗಳಿಗೆ 2.25 ಲಕ್ಷ ರೂ. ಸಂಬಳದ ಉದ್ಯೋಗ! ಅರ್ಜಿ ಸಲ್ಲಿಸುವುದು ಹೇಗೆ?

ಅರ್ಜಿ ಶುಲ್ಕದ ವಿವರ:

ಅರ್ಜಿ ಸಲ್ಲಿಸಲು ಸಾಮಾನ್ಯ (General), EWS ಮತ್ತು OBC ಅಭ್ಯರ್ಥಿಗಳಿಗೆ ರೂ. 850 ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಇನ್ನುಳಿದಂತೆ ಎಸ್‌ಸಿ/ಎಸ್‌ಟಿ, ಮಹಿಳೆಯರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ. 175 ಅರ್ಜಿ ಶುಲ್ಕ ಇರಲಿದೆ. ಅಭ್ಯರ್ಥಿಗಳು ಆನ್‌ಲೈನ್ ಪಾವತಿ ವಿಧಾನಗಳ ಮೂಲಕ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಆಯ್ಕೆ ವಿಧಾನ ಮತ್ತು ಆಕರ್ಷಕ ವೇತನ:

ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡದೆ ಆನ್‌ಲೈನ್ ಲಿಖಿತ ಪರೀಕ್ಷೆ, ಸೈಕೋಮೆಟ್ರಿಕ್ ಪರೀಕ್ಷೆ, ಗುಂಪು ಚರ್ಚೆ (GD) ಮತ್ತು ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಶಾರ್ಟ್‌ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಗ್ರೇಡ್ 2 ಹುದ್ದೆಗಳಿಗೆ ಮಾಸಿಕ ರೂ. 93,960, ಗ್ರೇಡ್ 3 ಹುದ್ದೆಗಳಿಗೆ ರೂ. 1,05,280 ಮತ್ತು ಗ್ರೇಡ್ 4 ಹುದ್ದೆಗಳಿಗೆ ರೂ. 1,20,940 ರವರೆಗೆ ಇತರೆ ಭತ್ಯೆಗಳೊಂದಿಗೆ ಅತ್ಯುತ್ತಮ ವೇತನ ಸಿಗಲಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:

ಅರ್ಹ ಅಭ್ಯರ್ಥಿಗಳು ಜುಲೈ 6 ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿದೆ. ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ಆದ bankofbaroda.in ಗೆ ಭೇಟಿ ನೀಡಿ ‘Careers’ ವಿಭಾಗದಲ್ಲಿ ಲಾಗ್ ಇನ್ ಆಗುವ ಮೂಲಕ ಆಸಕ್ತರು ತಮ್ಮ ಫಾರ್ಮ್‌ಗಳನ್ನು ಸಲ್ಲಿಸಬಹುದು. ಅಂತಿಮ ದಿನಾಂಕದ ವರೆಗೆ ಕಾಯದೇ ಅಭ್ಯರ್ಥಿಗಳು ಮೊದಲೇ ಅರ್ಜಿ ಸಲ್ಲಿಸುವುದು ಸೂಕ್ತ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:29 pm, Fri, 19 June 26

Follow Us
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
JDS ಶಾಸಕರ ಅಡ್ಡಮತದಾನದ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದೇನು ನೋಡಿ
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ಬಿಗ್ ಬಾಸ್ ಕಾಂಪಿಟೇಷನ್​ ವಿಡಿಯೋ ಕಳುಹಿಸಲು ಕೊನೆಯ ದಿನಾಂಕ ತಿಳಿಸಿದ ಕಲರ್ಸ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತಾಯಿ ಆನೆ ಮಡಿಲಲ್ಲಿ ಮಲಗಿದ್ದ ಮರಿಗಳ ಕ್ಯೂಟ್ ದೃಶ್ಯ ವೈರಲ್
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ತ್ಯಾಜ್ಯ ಸಂಸ್ಕರಣಾ ಘಟಕದಲ್ಲಿ ದುರಂತ: ಬಿಹಾರ, ತಮಿಳುನಾಡಿನ ಇಬ್ಬರು ನಾಪತ್ತೆ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಮೂಗು ಹೇಳುತ್ತೆ ನಿಮ್ಮ ವ್ಯಕ್ತಿತ್ವ! ಸಾಮುದ್ರಿಕ ಶಾಸ್ತ್ರ ಹೇಳೋದೇನು ನೋಡಿ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಈ ರಾಶಿಯವರಿಗೆ ಮಧ್ಯಾಹ್ನ 12:20 ರಿಂದ ಶುಭ ಕಾಲ ಆರಂಭ
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಪ್ರಿಯ ಮಿತ್ರ ನರೇಂದ್ರ; ಹಿಂದಿಯಲ್ಲೇ ಮೋದಿಗೆ ವಿದಾಯ ಹೇಳಿದ ಮ್ಯಾಕ್ರನ್
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ
ಬಿಜೆಪಿ ಶಾಸಕರೇ ಅವರ ವಿರುದ್ಧ ಇದ್ದಾರೆ ಎಂದ ಸುರ್ಜೇವಾಲಾ