AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 15,16ಕ್ಕೆ ಬ್ಯಾಂಕ್ ಬಂದ್; ಬ್ಯಾಂಕಿಂಗ್ ವಲಯದ ಮೇಲೆ ಬೀರಲಿದೆ ಪರಿಣಾಮ

Bank Strike: ಬ್ಯಾಂಕ್​ ಸಂಘಟನೆಗಳ ಸಂಯುಕ್ತ ಸಂಘಟನೆಯಾದ Indian Banks' Association (IBA) ಇದೇ ತಿಂಗಳ 15 ಮತ್ತು 16ರಂದು (ಮಾರ್ಚ್ 15-16) ಬ್ಯಾಂಕ್​ಗಳ ಬಂದ್​ಗೆ ಕರೆ ಕೊಟ್ಟಿದೆ. ಈ ಬಂದ್​ನಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಕೆಲ ಮಟ್ಟಿಗೆ ಏರುಪೇರುಗಳಾಗಬಹುದು ಎಂದು ಕೆನರಾ ಬ್ಯಾಂಕ್ ತಿಳಿಸಿದೆ.

ಮಾರ್ಚ್ 15,16ಕ್ಕೆ ಬ್ಯಾಂಕ್ ಬಂದ್; ಬ್ಯಾಂಕಿಂಗ್ ವಲಯದ ಮೇಲೆ ಬೀರಲಿದೆ ಪರಿಣಾಮ
ಸಾಂದರ್ಭಿಕ ಚಿತ್ರ
guruganesh bhat
| Edited By: |

Updated on: Mar 04, 2021 | 12:34 PM

Share

ಈ ತಿಂಗಳು ಬ್ಯಾಂಕ್ ಕೆಲಸಗಳನ್ನೇನಾದರೂ ಇಟ್ಟುಕೊಂಡಿದ್ದೀರೇ? ಹಾಗಾದರೆ ಈ ಬರಹವನ್ನು ನೀವೊಮ್ಮೆ ಓದಬೇಕು. ಎರಡು ಪ್ರಮುಖ ಬ್ಯಾಂಕ್​ಗಳ ಖಾಸಗೀಕರಣ ಪ್ರಸ್ತಾಪ ಎತ್ತಿರುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಮಾರ್ಚ್ 15-16ರಂದು ಬ್ಯಾಂಕ್ ಸಂಘಟನೆಗಳು ಬಂದ್​ಗೆ ಕರೆ ಕೊಟ್ಟಿವೆ. ಈ ಬಂದ್​ನಿಂದ ಬ್ಯಾಂಕಿಂಗ್ ವಲಯದ ಮೇಲೆ ಪ್ರಭಾವ ಬೀರಲಿವೆ ಎಂದು ಕೆನರಾ ಬ್ಯಾಂಕ್ ತಿಳಿಸಿದೆ.

ಬ್ಯಾಂಕ್​ ಸಂಘಟನೆಗಳ ಸಂಯುಕ್ತ ಸಂಘಟನೆಯಾದ Indian Banks’ Association (IBA) ಇದೇ ತಿಂಗಳ 15 ಮತ್ತು 16ರಂದು (ಮಾರ್ಚ್ 15-16) ಬ್ಯಾಂಕ್​ಗಳ ಬಂದ್​ಗೆ ಕರೆ ಕೊಟ್ಟಿದೆ. ಈ ಬಂದ್​ನಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಕೆಲ ಮಟ್ಟಿಗೆ ಏರುಪೇರುಗಳಾಗಬಹುದು ಎಂದು ಕೆನರಾ ಬ್ಯಾಂಕ್ ತಿಳಿಸಿದೆ.

ಬ್ಯಾಂಕಿಂಗ್ ವಲಯದಲ್ಲಿನ ಎರಡು ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡಹೊರಟಿರುವ ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ  ಬ್ಯಾಂಕ್​ ಸಂಘಟನೆಗಳ ಸಂಯುಕ್ತ ಸಂಘಟನೆ ಈ ಬಂದ್​ಗೆ ಕರೆ ಕೊಟ್ಟಿದೆಯೇ ಹೊರತು ಯಾವುದೇ ಬ್ಯಾಂಕ್ ಒಂದರ ಸಮಸ್ಯೆಗಾಗಿ ಅಲ್ಲ. ಬಂದ್​ಗೆ ಕರೆ ಕೊಟ್ಟ ದಿನಗಳಂದು ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುವುದಾಗಿ ಕೆನರಾ ಬ್ಯಾಂಕ್ ತಿಳಿಸಿದೆ. ಆದರೂ, ಬ್ಯಾಂಕ್ ಬಂದ್​ ದಿನಗಳಂದು ಬ್ಯಾಂಕ್​​ಗಳ ಕಾರ್ಯ ಕಲಾಪಗಳಲ್ಲಿ ಭಂಗ ಬರುವ ಎಲ್ಲ ಸಾಧ್ಯತೆಗಳೂ ಇವೆ ಎಂದು ಕೆನರಾ ಬ್ಯಾಂಕ್ ಮಾಹಿತಿ ನೀಡಿದೆ. ಬ್ಯಾಂಕಿಂಗ್ ವಲಯದ ಸಂಘಟನೆಗಳಾದ AIBEA, AIBOC, NCBE, AIBOA, BEFI, INBEF, IBOC, NOBW, NOBO and AINBOF ಗಳು ಮಾರ್ಚ್ 15-16ರಂದು ಬಂದ್​ಗೆ ಕರೆ ನೀಡಿವೆ.

ದೊಡ್ಡ ಬ್ಯಾಂಕ್​ಗಳ ಖಾಸಗೀಕರಣದತ್ತ ಸರ್ಕಾರದ ಚಿಂತನೆ

ಖಾಸಗೀಕರಣದ ಮೊದಲ ಹಂತ ಇದಾಗಿದ್ದು, ಸರ್ಕಾರಿ ಸ್ವಾಮ್ಯದ ಮಧ್ಯಮ ಗಾತ್ರದ ಬ್ಯಾಂಕ್ ಹಾಗೂ ಸಣ್ಣ ಬ್ಯಾಂಕ್​​​ಗಳನ್ನು ಮೊದಲು ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ದೇಶದ ದೊಡ್ಡ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡುವ ಆಲೋಚನೆ ಕೇಂದ್ರ ಸರ್ಕಾರದ್ದು. ಈ ಬಗ್ಗೆ ಉತ್ತರ ನೀಡಲು ಹಣಕಾಸು ಸಚಿವಾಲಯ ನಿರಾಕರಿಸಿದೆ.

ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 50,000 ಮತ್ತು ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 33,000, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​ನಲ್ಲಿ 26,000 ಹಾಗೂ ಬ್ಯಾಂಕ್​ ಆಫ್​ ಮಹಾರಾಷ್ಟ್ರದಲ್ಲಿ 13,000 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಉದ್ಯೋಗಿಗಳನ್ನು ಹೊಂದಿರುವ ಸರ್ಕಾರಿ ಬ್ಯಾಂಕಿಂಗ್ ಕ್ಷೇತ್ರದ ಖಾಸಗೀಕರಣವು ರಾಜಕೀಯವಾಗಿ ಅಪಾಯಕಾರಿಯಾಗಿದೆ. ಇದರಿಂದ ಉದ್ಯೋಗ ನಷ್ಟ ಉಂಟಾಗಬಹದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಸಗೀಕರಣ ಹಾಗೂ ಎಲ್​ಐಸಿ ಷೇರುಗಳ್ನು ಸರ್ಕಾರ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಈಗಾಗಲೇ ಪ್ರತಿಭಟನೆ ನಡೆದಿದೆ.

ಇದನ್ನೂ ಓದಿ: ಇಂಟರ್​ನೆಟ್​ ಇಲ್ಲದೆ ಬ್ಯಾಂಕಿಂಗ್​ ವ್ಯವಹಾರ..! ಆರ್​ಬಿಐನ ಹೊಸ ಐಡಿಯಾ ಹಳ್ಳಿಗಳಿಗೆ ಇದು ವರದಾನ

ಕನ್ನಡಿಗರ ಕೈ ತಪ್ಪುತ್ತಿವೆ ಬ್ಯಾಂಕಿಂಗ್ ಉದ್ಯೋಗಗಳು: ಟಿ.ಎಸ್. ನಾಗಾಭರಣ ಕಳವಳ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ