Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾರ್ಚ್ 15,16ಕ್ಕೆ ಬ್ಯಾಂಕ್ ಬಂದ್; ಬ್ಯಾಂಕಿಂಗ್ ವಲಯದ ಮೇಲೆ ಬೀರಲಿದೆ ಪರಿಣಾಮ

Bank Strike: ಬ್ಯಾಂಕ್​ ಸಂಘಟನೆಗಳ ಸಂಯುಕ್ತ ಸಂಘಟನೆಯಾದ Indian Banks' Association (IBA) ಇದೇ ತಿಂಗಳ 15 ಮತ್ತು 16ರಂದು (ಮಾರ್ಚ್ 15-16) ಬ್ಯಾಂಕ್​ಗಳ ಬಂದ್​ಗೆ ಕರೆ ಕೊಟ್ಟಿದೆ. ಈ ಬಂದ್​ನಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಕೆಲ ಮಟ್ಟಿಗೆ ಏರುಪೇರುಗಳಾಗಬಹುದು ಎಂದು ಕೆನರಾ ಬ್ಯಾಂಕ್ ತಿಳಿಸಿದೆ.

ಮಾರ್ಚ್ 15,16ಕ್ಕೆ ಬ್ಯಾಂಕ್ ಬಂದ್; ಬ್ಯಾಂಕಿಂಗ್ ವಲಯದ ಮೇಲೆ ಬೀರಲಿದೆ ಪರಿಣಾಮ
ಸಾಂದರ್ಭಿಕ ಚಿತ್ರ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Mar 04, 2021 | 12:34 PM

ಈ ತಿಂಗಳು ಬ್ಯಾಂಕ್ ಕೆಲಸಗಳನ್ನೇನಾದರೂ ಇಟ್ಟುಕೊಂಡಿದ್ದೀರೇ? ಹಾಗಾದರೆ ಈ ಬರಹವನ್ನು ನೀವೊಮ್ಮೆ ಓದಬೇಕು. ಎರಡು ಪ್ರಮುಖ ಬ್ಯಾಂಕ್​ಗಳ ಖಾಸಗೀಕರಣ ಪ್ರಸ್ತಾಪ ಎತ್ತಿರುವ ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಮಾರ್ಚ್ 15-16ರಂದು ಬ್ಯಾಂಕ್ ಸಂಘಟನೆಗಳು ಬಂದ್​ಗೆ ಕರೆ ಕೊಟ್ಟಿವೆ. ಈ ಬಂದ್​ನಿಂದ ಬ್ಯಾಂಕಿಂಗ್ ವಲಯದ ಮೇಲೆ ಪ್ರಭಾವ ಬೀರಲಿವೆ ಎಂದು ಕೆನರಾ ಬ್ಯಾಂಕ್ ತಿಳಿಸಿದೆ.

ಬ್ಯಾಂಕ್​ ಸಂಘಟನೆಗಳ ಸಂಯುಕ್ತ ಸಂಘಟನೆಯಾದ Indian Banks’ Association (IBA) ಇದೇ ತಿಂಗಳ 15 ಮತ್ತು 16ರಂದು (ಮಾರ್ಚ್ 15-16) ಬ್ಯಾಂಕ್​ಗಳ ಬಂದ್​ಗೆ ಕರೆ ಕೊಟ್ಟಿದೆ. ಈ ಬಂದ್​ನಿಂದ ಬ್ಯಾಂಕಿಂಗ್ ಸೇವೆಗಳಲ್ಲಿ ಕೆಲ ಮಟ್ಟಿಗೆ ಏರುಪೇರುಗಳಾಗಬಹುದು ಎಂದು ಕೆನರಾ ಬ್ಯಾಂಕ್ ತಿಳಿಸಿದೆ.

ಬ್ಯಾಂಕಿಂಗ್ ವಲಯದಲ್ಲಿನ ಎರಡು ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡಹೊರಟಿರುವ ಕೇಂದ್ರ ಸರ್ಕಾರದ ಧೋರಣೆ ವಿರೋಧಿಸಿ  ಬ್ಯಾಂಕ್​ ಸಂಘಟನೆಗಳ ಸಂಯುಕ್ತ ಸಂಘಟನೆ ಈ ಬಂದ್​ಗೆ ಕರೆ ಕೊಟ್ಟಿದೆಯೇ ಹೊರತು ಯಾವುದೇ ಬ್ಯಾಂಕ್ ಒಂದರ ಸಮಸ್ಯೆಗಾಗಿ ಅಲ್ಲ. ಬಂದ್​ಗೆ ಕರೆ ಕೊಟ್ಟ ದಿನಗಳಂದು ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನೂ ಕೈಗೊಳ್ಳುವುದಾಗಿ ಕೆನರಾ ಬ್ಯಾಂಕ್ ತಿಳಿಸಿದೆ. ಆದರೂ, ಬ್ಯಾಂಕ್ ಬಂದ್​ ದಿನಗಳಂದು ಬ್ಯಾಂಕ್​​ಗಳ ಕಾರ್ಯ ಕಲಾಪಗಳಲ್ಲಿ ಭಂಗ ಬರುವ ಎಲ್ಲ ಸಾಧ್ಯತೆಗಳೂ ಇವೆ ಎಂದು ಕೆನರಾ ಬ್ಯಾಂಕ್ ಮಾಹಿತಿ ನೀಡಿದೆ. ಬ್ಯಾಂಕಿಂಗ್ ವಲಯದ ಸಂಘಟನೆಗಳಾದ AIBEA, AIBOC, NCBE, AIBOA, BEFI, INBEF, IBOC, NOBW, NOBO and AINBOF ಗಳು ಮಾರ್ಚ್ 15-16ರಂದು ಬಂದ್​ಗೆ ಕರೆ ನೀಡಿವೆ.

ದೊಡ್ಡ ಬ್ಯಾಂಕ್​ಗಳ ಖಾಸಗೀಕರಣದತ್ತ ಸರ್ಕಾರದ ಚಿಂತನೆ

ಖಾಸಗೀಕರಣದ ಮೊದಲ ಹಂತ ಇದಾಗಿದ್ದು, ಸರ್ಕಾರಿ ಸ್ವಾಮ್ಯದ ಮಧ್ಯಮ ಗಾತ್ರದ ಬ್ಯಾಂಕ್ ಹಾಗೂ ಸಣ್ಣ ಬ್ಯಾಂಕ್​​​ಗಳನ್ನು ಮೊದಲು ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದರೆ, ದೇಶದ ದೊಡ್ಡ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡುವ ಆಲೋಚನೆ ಕೇಂದ್ರ ಸರ್ಕಾರದ್ದು. ಈ ಬಗ್ಗೆ ಉತ್ತರ ನೀಡಲು ಹಣಕಾಸು ಸಚಿವಾಲಯ ನಿರಾಕರಿಸಿದೆ.

ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 50,000 ಮತ್ತು ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ 33,000, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​ನಲ್ಲಿ 26,000 ಹಾಗೂ ಬ್ಯಾಂಕ್​ ಆಫ್​ ಮಹಾರಾಷ್ಟ್ರದಲ್ಲಿ 13,000 ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಲಕ್ಷಾಂತರ ಉದ್ಯೋಗಿಗಳನ್ನು ಹೊಂದಿರುವ ಸರ್ಕಾರಿ ಬ್ಯಾಂಕಿಂಗ್ ಕ್ಷೇತ್ರದ ಖಾಸಗೀಕರಣವು ರಾಜಕೀಯವಾಗಿ ಅಪಾಯಕಾರಿಯಾಗಿದೆ. ಇದರಿಂದ ಉದ್ಯೋಗ ನಷ್ಟ ಉಂಟಾಗಬಹದು ಎಂದು ತಜ್ಞರು ಎಚ್ಚರಿಸಿದ್ದಾರೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ಖಾಸಗೀಕರಣ ಹಾಗೂ ಎಲ್​ಐಸಿ ಷೇರುಗಳ್ನು ಸರ್ಕಾರ ಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಈಗಾಗಲೇ ಪ್ರತಿಭಟನೆ ನಡೆದಿದೆ.

ಇದನ್ನೂ ಓದಿ: ಇಂಟರ್​ನೆಟ್​ ಇಲ್ಲದೆ ಬ್ಯಾಂಕಿಂಗ್​ ವ್ಯವಹಾರ..! ಆರ್​ಬಿಐನ ಹೊಸ ಐಡಿಯಾ ಹಳ್ಳಿಗಳಿಗೆ ಇದು ವರದಾನ

ಕನ್ನಡಿಗರ ಕೈ ತಪ್ಪುತ್ತಿವೆ ಬ್ಯಾಂಕಿಂಗ್ ಉದ್ಯೋಗಗಳು: ಟಿ.ಎಸ್. ನಾಗಾಭರಣ ಕಳವಳ

ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ತಮ್ಮ ನಿರ್ದೇಶನದ ಮೊದಲ ಚಿತ್ರದ ಪ್ರಚಾರಕ್ಕೆ ಹೊಸ ತಂತ್ರ ಬಳಸಿದ ರಂಜನಿ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
ನೋ ಬಾಲ್, ಫ್ರೀ ಹಿಟ್, ರನೌಟ್​: ಸೂಪರ್​ ಓವರ್​ನಲ್ಲಿ ಡೆಲ್ಲಿಗೆ ರೋಚಕ ಜಯ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ
Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ