AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Strike: ನಾಳೆ ದೇಶಾದ್ಯಂತ ಬ್ಯಾಂಕ್ ಮುಷ್ಕರ; ಯಾವೆಲ್ಲ ಬ್ಯಾಂಕ್​ಗಳ ಸೇವೆ ಸ್ಥಗಿತ?

ನಾಳೆ (ಜನವರಿ 27) ಬ್ಯಾಂಕ್ ಮುಷ್ಕರ ನಡೆಯಲಿದೆ. ಹೀಗಾಗಿ, ದೇಶಾದ್ಯಂತ ಈ ಬ್ಯಾಂಕುಗಳು ಮಂಗಳವಾರವೂ ಮುಚ್ಚಿರುತ್ತವೆ. ಭಾರತದಾದ್ಯಂತ ಬ್ಯಾಂಕ್ ಉದ್ಯೋಗಿ ಮತ್ತು ಅಧಿಕಾರಿ ಸಂಘಗಳು ಜನವರಿ 27ರಂದು ರಾಷ್ಟ್ರವ್ಯಾಪಿ ಮುಷ್ಕರವನ್ನು ಘೋಷಿಸಿವೆ. ಇದು ಹೆಚ್ಚಿನ ಸಾರ್ವಜನಿಕ ವಲಯದ ಬ್ಯಾಂಕುಗಳ ಸೇವೆಗಳನ್ನು ಅಡ್ಡಿಪಡಿಸುವ ನಿರೀಕ್ಷೆಯಿದೆ. ಈ ಮುಷ್ಕರಕ್ಕೆ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿದೆ.

Bank Strike: ನಾಳೆ ದೇಶಾದ್ಯಂತ ಬ್ಯಾಂಕ್ ಮುಷ್ಕರ; ಯಾವೆಲ್ಲ ಬ್ಯಾಂಕ್​ಗಳ ಸೇವೆ ಸ್ಥಗಿತ?
SBI
ಸುಷ್ಮಾ ಚಕ್ರೆ
|

Updated on: Jan 26, 2026 | 8:22 PM

Share

ನವದೆಹಲಿ, ಜನವರಿ 26: ತಮಗೆ ವಾರದಲ್ಲಿ 5 ದಿನಗಳ ಕಾಲ ಮಾತ್ರ ಕೆಲಸ ಮಾಡಲು ಅವಕಾಶ ನೀಡಬೇಕು, ಶನಿವಾರ ಹಾಗೂ ಭಾನುವಾರ ರಜೆ ನೀಡಬೇಕು ಎಂದು ಒತ್ತಾಯಿಸಿ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ದೇಶಾದ್ಯಂತ ಮುಷ್ಕರ ನಡೆಸುತ್ತಿದೆ. ಹೀಗಾಗಿ, ನಾಳೆ (ಮಂಗಳವಾರ) ದೇಶಾದ್ಯಂತ ಸಾರ್ವಜನಿಕ ವಲಯದ ಬ್ಯಾಂಕುಗಳ (Banks) ಬ್ಯಾಂಕಿಂಗ್ ಕಾರ್ಯಾಚರಣೆಗಳು ವ್ಯತ್ಯಯಗೊಳ್ಳುವ ಸಾಧ್ಯತೆಯಿದೆ.

ಜನವರಿ 23ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗಿನ ಸಂಧಾನ ಸಭೆಯು ಬ್ಯಾಂಕ್ ಉದ್ಯೋಗಿಗಳ ಸಮಸ್ಯೆಯನ್ನು ಪರಿಹರಿಸಲು ವಿಫಲವಾದ ನಂತರ ಈ ಮುಷ್ಕರದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಗಣರಾಜ್ಯೋತ್ಸವದ ಕಾರಣದಿಂದಾಗಿ ಭಾನುವಾರ (ಜನವರಿ 25) ಮತ್ತು ಸೋಮವಾರ (ಜನವರಿ 26) ಬ್ಯಾಂಕುಗಳು ಈಗಾಗಲೇ ಮುಚ್ಚಲ್ಪಟ್ಟಿರುವುದರಿಂದ ನಾಳೆಯ ಮುಷ್ಕರ ಗ್ರಾಹಕರಿಗೆ ಅನಾನುಕೂಲತೆಯನ್ನು ಉಂಟುಮಾಡಬಹುದು.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ಪಂಜಾಬ್ ನ್ಯಾಷನಲ್ ಬ್ಯಾಂಕ್ (PNB), ಮತ್ತು ಬ್ಯಾಂಕ್ ಆಫ್ ಬರೋಡಾ ಸೇರಿದಂತೆ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ನಗದು ಠೇವಣಿ ಮತ್ತು ಹಿಂಪಡೆಯುವಿಕೆ, ಚೆಕ್ ಕ್ಲಿಯರೆನ್ಸ್ ಮತ್ತು ಇತರ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.

ಇದನ್ನೂ ಓದಿ: CBI Recruitment 2026: ಸೆಂಟ್ರಲ್ ಬ್ಯಾಂಕ್​​ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಅರ್ಹರು

ಆದರೆ, ಖಾಸಗಿ ವಲಯದ ಬ್ಯಾಂಕುಗಳಾದ HDFC ಬ್ಯಾಂಕ್, ICICI ಬ್ಯಾಂಕ್ ಮತ್ತು Axis ಬ್ಯಾಂಕ್‌ಗಳು ಮುಷ್ಕರದಲ್ಲಿ ಭಾಗವಹಿಸುವ ಒಕ್ಕೂಟಗಳ ಭಾಗವಾಗಿಲ್ಲದ ಕಾರಣ ಅವು ಸಾಮಾನ್ಯವಾಗಿ ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ. ಹಾಗೇ, ಯುಪಿಐ (UPI) ಪೇಮೆಂಟ್ ಮತ್ತು ಇಂಟರ್ನೆಟ್ ಬ್ಯಾಂಕಿಂಗ್‌ನಂತಹ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ