AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೋ ನಂಬರಿಂದ ನಿಮ್ಮ ಖಾತೆಗೆ ಹಣ ಬಂದರೆ ಯಾಮಾರಬೇಡಿ; ವಂಚನೆಗೆ ಹ್ಯಾಕರ್​​ಗಳ ಹೊಸ ಪ್ಲಾನ್

ಬ್ಯಾಂಕಿಂಗ್ ವಂಚನೆಯ ಬಗ್ಗೆ ಬ್ಯಾಂಕ್‌ಗಳು ಮತ್ತು ಆರ್‌ಬಿಐ ಮೂಲಕವೂ ಗ್ರಾಹಕರಿಗೆ ಅರಿವು ಮೂಡಿಸಲಾಗುತ್ತಿದೆ. ಆದ್ದರಿಂದ ಆನ್‌ಲೈನ್‌ನಲ್ಲಿ ಯಾವುದಾದರೂ ವಂಚನೆ ಸಂಭವಿಸಿದರೆ ತಕ್ಷಣವೇ ಎಚ್ಚೆತ್ತುಕೊಂಡು, ಬ್ಯಾಂಕ್‌ಗೆ ಮಾಹಿತಿ ನೀಡಿ.

ಯಾವುದೋ ನಂಬರಿಂದ ನಿಮ್ಮ ಖಾತೆಗೆ ಹಣ ಬಂದರೆ ಯಾಮಾರಬೇಡಿ; ವಂಚನೆಗೆ ಹ್ಯಾಕರ್​​ಗಳ ಹೊಸ ಪ್ಲಾನ್
ಸೈಬರ್ ವಂಚನೆImage Credit source: iStock
ಸುಷ್ಮಾ ಚಕ್ರೆ
|

Updated on: Oct 19, 2023 | 3:38 PM

Share

ನವದೆಹಲಿ: ಇತ್ತೀಚೆಗೆ ಬ್ಯಾಂಕಿಂಗ್ ವಂಚನೆ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಲೇ ಇವೆ. ಜನರ ಬ್ಯಾಂಕ್ ಖಾತೆಗಳನ್ನು ಹ್ಯಾಕ್ ಮಾಡಿ ಅಕೌಂಟ್​ನಲ್ಲಿದ್ದ ಹಣವನ್ನು ದೋಚುವ ಹ್ಯಾಕರ್‌ಗಳು ಹೆಚ್ಚಾಗಿದ್ದಾರೆ. ಹ್ಯಾಕರ್​ಗಳು ಹೊಸ ಹೊಸ ವಿಧಾನಗಳ ಮೂಲಕ ಜನರನ್ನು ವಂಚಿಸುತ್ತಲೇ ಇದ್ದಾರೆ. ನಿಮ್ಮ ಫೋನ್‌ಗೆ OTP ಕಳುಹಿಸುವ ಮೂಲಕ ನಿಮ್ಮ ಬ್ಯಾಂಕ್ ಖಾತೆಯ ವಿವರಗಳನ್ನು ಕದಿಯುವುದು, ಹಣ ಪಾವತಿ ಮಾಡಲು QR ಅನ್ನು ಸ್ಕ್ಯಾನ್ ಮಾಡುವ ಮೂಲಕ ವಂಚನೆಗಳನ್ನು ಮಾಡಲಾಗುತ್ತಿದೆ.

ಬ್ಯಾಂಕಿಂಗ್ ವಂಚನೆಯ ಬಗ್ಗೆ ಬ್ಯಾಂಕ್‌ಗಳು ಮತ್ತು ಆರ್‌ಬಿಐ ಮೂಲಕವೂ ಗ್ರಾಹಕರಿಗೆ ಅರಿವು ಮೂಡಿಸಲಾಗುತ್ತಿದೆ. ಆದ್ದರಿಂದ ಆನ್‌ಲೈನ್‌ನಲ್ಲಿ ಯಾವುದಾದರೂ ವಂಚನೆ ಸಂಭವಿಸಿದರೆ ತಕ್ಷಣವೇ ಎಚ್ಚೆತ್ತುಕೊಂಡು, ಬ್ಯಾಂಕ್‌ಗೆ ಮಾಹಿತಿ ನೀಡಿ.

ಇದನ್ನೂ ಓದಿ: IMPS Money Transfer Rules: ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆ ಇನ್ನೂ ಸುಲಭ; ಹೊಸ ಐಎಂಪಿಎಸ್ ವ್ಯವಸ್ಥೆ ಬಗ್ಗೆ ತಿಳಿಯಿರಿ

ಈಗ ವಂಚಕರು ಹೊಸ ಟ್ರಿಕ್ ಮೂಲಕ ಜನರಿಗೆ ವಂಚನೆ ಮಾಡುತ್ತಿದ್ದಾರೆ. ಹ್ಯಾಕರ್​ಗಳು ಮೊದಲು ಯುಪಿಐ ಮೂಲಕ ಜನರಿಗೆ ಹಣ ಕಳುಹಿಸುತ್ತಾರೆ. ನಂತರ ಯಾರ ಖಾತೆಗೆ ಹಣ ಕಳುಹಿಸಲಾಗಿದೆಯೋ ಅವರಿಗೆ ಕರೆ ಮಾಡಿ ತಪ್ಪಾಗಿ ಹಣವನ್ನು ನಿಮ್ಮ ನಂಬರ್​ಗೆ ಕಳುಹಿಸಲಾಗಿದೆ ಎಂದು ಹೇಳುತ್ತಾರೆ. ಅವರು ಭಾವನಾತ್ಮಕವಾಗಿ ಜನರ ವಿಶ್ವಾಸವನ್ನು ಗಳಿಸುತ್ತಾರೆ. ಆಗ ಜನರು ಸೈಬರ್ ಕ್ರೈಂ ಮಾಡಿದವರ ಬಲೆಗೆ ಬೀಳುತ್ತಾರೆ. ಜನರು ಇವರ ಮಾತಿನಲ್ಲಿ ಸಿಕ್ಕಿಹಾಕಿಕೊಂಡು ಫೋನ್ ಮಾಡಿದವರ ನಂಬರ್‌ಗೆ ಹಣ ಕಳುಹಿಸುತ್ತಾರೆ. ನಂತರ ದುಷ್ಕರ್ಮಿಗಳು ಅವರ ಖಾತೆಯನ್ನು ಹ್ಯಾಕ್ ಮಾಡಿ ಖಾತೆಯಿಂದ ಹಣವನ್ನು ಹಿಂಪಡೆಯುತ್ತಾರೆ.

ಇದನ್ನೂ ಓದಿ: ಸೈಬರ್ ವಂಚನೆಗಳ ಕೇಂದ್ರವಾಗುತ್ತಿರುವ ಬೆಂಗಳೂರು, ಒಂಬತ್ತು ತಿಂಗಳಲ್ಲಿ 470 ಕೋಟಿ ರೂ. ದೋಚಿದ ವಂಚಕರು!

ಈ ರೀತಿಯ ವಂಚನೆಯ ಬಗ್ಗೆ ಜನರಿಗೆ ಅರಿವು ಮೂಡಿಸಲು ಅಹಮದಾಬಾದ್ ಪೊಲೀಸರು ಟ್ವಿಟ್ಟರ್​ನಲ್ಲಿ ಪೋಸ್ಟ್ ಮಾಡಿದ್ದಾರೆ. ಯಾರಾದರೂ ತಪ್ಪಾಗಿ ನಿಮ್ಮ ಯುಪಿಐಗೆ ಹಣವನ್ನು ಕಳುಹಿಸಿದರೆ ಮತ್ತು ನಿಮಗೆ ಕರೆ ಮಾಡಿ ಯುಪಿಐ ಮೂಲಕ ಹಣವನ್ನು ಮರುಪಾವತಿ ಮಾಡಲು ಕೇಳಿದರೆ ನಿಮ್ಮ UPI ಮೂಲಕ ನೀವು ಯಾವುದೇ ಹಣವನ್ನು ಹಾಕಬಾರದು. ಅದರ ಬದಲಾಗಿ ನೀವು ಅವರನ್ನು ಹತ್ತಿರದ ಪೊಲೀಸ್ ಠಾಣೆಗೆ ಕರೆದು ಅವರಿಗೆ ಹಣವನ್ನು ಹಿಂತಿರುಗಿಸಬೇಕು. ಇದರಿಂದ ನೀವು ಮೋಸ ಹೋಗುವುದಿಲ್ಲ. ನಿಮ್ಮ ಬ್ಯಾಂಕ್ ವಿವರಗಳು, OTP, ಪಾಸ್‌ವರ್ಡ್, ಪಿನ್ ಅಥವಾ ಕಾರ್ಡ್ ಸಂಖ್ಯೆಯನ್ನು ಯಾವುದೇ ಕಾರಣಕ್ಕೂ ಬೇರೆಯವರಿಗೆ ನೀಡಬೇಡಿ ಎಂದು ಎಚ್ಚರಿಸಿದ್ದಾರೆ.

ಸೈಬರ್ ವಂಚನೆಯ ಸಂದರ್ಭದಲ್ಲಿ ನೀವು ಭಾರತ ಸರ್ಕಾರದ ಸಹಾಯವಾಣಿ ಸಂಖ್ಯೆ 1930ಗೆ ಕರೆ ಮಾಡಬೇಕು. ಯಾವುದೇ ರೀತಿಯ ಸೈಬರ್ ವಂಚನೆಯ ಸಂದರ್ಭದಲ್ಲಿ ನೀವು http://cybercrime.gov.in ನಲ್ಲಿ ದೂರು ಸಲ್ಲಿಸಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ