AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bank Strike: ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್​ ಮುಷ್ಕರ, ಕಾರಣವೇನು?

ದೇಶಾದ್ಯಂತ ಫೆಬ್ರವರಿ 12ರಂದು ಬ್ಯಾಂಕ್​ಗಳ ಮುಷ್ಕರ ನಡೆಯಲಿದೆ. ಭಾರತೀಯ ಬ್ಯಾಂಕುಗಳ ಸಂಘ (ಐಬಿಎ)ದ ಜೊತೆ ಸಮಾಲೋಚನೆ ನಡೆಸಿ, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ (ಎಐಬಿಇಎ), ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟ (ಬಿಇಎಫ್‌ಐ) ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ) ಫೆಬ್ರವರಿ 12 ರ ಗುರುವಾರ ರಾಷ್ಟ್ರವ್ಯಾಪಿ ಮುಷ್ಕರ ನಡೆಸುವ ನಿರ್ಧಾರದ ಬಗ್ಗೆ ಸೂಚನೆ ನೀಡಿವೆ. ಸೇವೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಯಾವುದೇ ತುರ್ತು ಬೇಕಿಂಗ್ ಕೆಲಸವನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕೆಂದು ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಎಚ್ಚರಿಕೆ ನೀಡಿವೆ.

Bank Strike: ಫೆಬ್ರವರಿ 12ರಂದು ರಾಷ್ಟ್ರವ್ಯಾಪಿ ಬ್ಯಾಂಕ್​ ಮುಷ್ಕರ, ಕಾರಣವೇನು?
ಬ್ಯಾಂಕ್ Image Credit source: The Economic Times
ನಯನಾ ರಾಜೀವ್
|

Updated on: Feb 11, 2026 | 9:34 AM

Share

ನವದೆಹಲಿ, ಫೆಬ್ರವರಿ 12: ತುರ್ತು ಬ್ಯಾಂಕ್(Bank) ಕೆಲಸಗಳಿದ್ದರೆ ಇಂದೇ ಮುಗಿಸಿಕೊಳ್ಳಿ, ನಾಳೆಗೆ ಮುಂದೂಡಿದರೆ ಕಷ್ಟವಾಗಬಹುದು. ಬ್ಯಾಂಕ್​ಗಳ ಖಾಸಗೀಕರಣ ಮತ್ತು ಕಾರ್ಮಿಕ ಸಂಹಿತೆಯನ್ನು ವಿರೋಧಿಸಿ ಫೆಬ್ರವರಿ 12ರಂದು ದೇಶಾದ್ಯಂತ ಬ್ಯಾಂಕ್ ಮುಷ್ಕರ ನಡೆಯಲಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ದೇಶದ ಪ್ರಮುಖ ಬ್ಯಾಂಕುಗಳು ಫೆ. 12 ರಂದು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿವೆ. ಸೇವೆಗಳ ಮೇಲೆ ಪರಿಣಾಮ ಬೀರಬಹುದು ಮತ್ತು ಯಾವುದೇ ತುರ್ತು ಬೇಕಿಂಗ್ ಕೆಲಸವನ್ನು ಮುಂಚಿತವಾಗಿ ಪೂರ್ಣಗೊಳಿಸಬೇಕೆಂದು ಬ್ಯಾಂಕುಗಳು ತಮ್ಮ ಗ್ರಾಹಕರಿಗೆ  ಸೂಚನೆ ನೀಡಿವೆ.

ಹಿಂದೂ ಮಜ್ದೂರ್ ಕಿಸಾನ್ ಪಂಚಾಯತ್​ನ ಪ್ರಾಂತೀಯ ನಾಯಕ ಮೊಹಮ್ಮದ್ ಹಸ್ನೈನ್ ಅನ್ಸಾರಿ, ಉತ್ತರ ಪ್ರದೇಶ ಕಿಸಾನ್​​ನ ಇಂದ್ರದೇವ್ ಪಾಲ್ ಅವರು 12ರಂದು ಜಿಲ್ಲೆಯಲ್ಲಿ ಮತ್ತು ಇಡೀ ಭಾರತದಲ್ಲಿ ಮುಷ್ಕರ ನಡೆಯಲಿದೆ ಎಂದು ತಿಳಿಸಿದ್ದಾರೆ. ಈ ಸಮಯದಲ್ಲಿ ಬ್ಯಾಂಕ್​ಗಳು, ಭಾರತೀಯ ಜೀವ ವಿಮಾ ನಿಗಮ, ಅಂಚೆ ಕಚೇರಿಗಳು ಮುಚ್ಚಲ್ಪಡುತ್ತವೆ. ಮಂಗಳವಾರ ಬ್ಯಾಂಕ್ ಹಾಗೂ ಎಲ್​ಐಸಿ ಉದ್ಯೋಗಿಗಳನ್ನು ಸಂಪರ್ಕಿಸಲಾಗಿದೆ ಎಂದು ಹೇಳಿದ್ದಾರೆ.

ಶಾಖೆಗಳು ತೆರೆದಿರಬಹುದು ಆದರೆ ನಗದು ವಹಿವಾಟು ಮತ್ತು ಚೆಕ್ ಕ್ಲಿಯರಿಂಗ್ ಕೆಲಸದಲ್ಲಿ ವಿಳಂಬವಾಗಬಹುದು. ಆದಾಗ್ಯೂ, ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಲ್ಲಿ ಯಾವುದೇ ಅಡ್ಡಿ ಉಂಟಾಗುವುದಿಲ್ಲ.

ಮುಷ್ಕರ ಏಕೆ? ವಾರದಲ್ಲಿ ಕೇವಲ ಐದು ದಿನಗಳ ಕೆಲಸಕ್ಕೆ ಒತ್ತಾಯಿಸಿ ಜನವರಿ 27ರಂದು ಬ್ಯಾಂಕ್​ಗಳು ಒಂದು ದಿನದ ಮುಷ್ಕರವನ್ನು ನಡೆಸಿದ್ದರು. ಕಳೆದ ವರ್ಷದ ಕೊನೆಯಲ್ಲಿ ಸರ್ಕಾರವು ಅಧಿಸೂಚನೆ ಹೊರಡಿಸಿದ ನಾಲ್ಕು ಹೊಸ ಕಾರ್ಮಿಕ ಕಾನೂನುಗಳನ್ನು ವಿರೋಧಿಸಲು ಫೆಬ್ರವರಿ 12 ರಂದು ಅವರು 10 ಕೇಂದ್ರ ಕಾರ್ಮಿಕ ಸಂಘಗಳು ಕರೆದ ಪ್ರತಿಭಟನೆಯಲ್ಲಿ ಭಾಗವಹಿಸುತ್ತಿದ್ದಾರೆ.

ಮತ್ತಷ್ಟು ಓದಿ: ಬ್ಯಾಂಕ್ ಲಾಕರ್ ಕೀ ಕಳೆದುಹೋದರೆ ಮುಂದೇನು? ಲಾಕರ್ ಒಡೆಯಲಾಗುತ್ತಾ? ಇಲ್ಲಿದೆ ಪ್ರಕ್ರಿಯೆ

ಕೇಂದ್ರ ಸರ್ಕಾರವು ಕಾರ್ಮಿಕ ಕಾನೂನುಗಳನ್ನು ಹಾಳು ಮಾಡುತ್ತಿದೆ ಎನ್ನುವ ಆರೋಪ ಕೇಳಿಬಂದಿದೆ. ಇದಲ್ಲದೆ ಬ್ಯಾಂಕ್ ನೌಕರರ ಮೇಲೆ ಹೆಚ್ಚಿನ ಹೊರೆ ಹಾಕಲಾಗುತ್ತಿದೆ. ಹಳೆಯ ಪಿಂಚಣಿ ಮತ್ತು ಹೊಸ ಕಾರ್ಮಿಕ ಕಾನೂನುಗಳನ್ನು ರದ್ದುಗೊಳಿಸುವ ಬೇಡಿಕೆಗಳು ಬಹಳ ದಿನಗಳಿಂದ ಕೇಳಿಬರುತ್ತಿವೆ. ಆದರೆ ಸರ್ಕಾರ ಗಮನ ಹರಿಸುತ್ತಿಲ್ಲ ಎಂಬುದು ಅವರ ವಾದ.

ಪರಿಣಾಮವಾಗಿ, ಸಂಸ್ಥೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಫೆಬ್ರವರಿ 12 ರಂದು ಬೃಹತ್ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ. ಮದುವೆಗಳ ಋತುವಿನಲ್ಲಿ ಬ್ಯಾಂಕ್ ಮುಷ್ಕರವು ಸಾಮಾನ್ಯ ಜನರ ಕಷ್ಟಗಳನ್ನು ಹೆಚ್ಚಿಸುವುದು ಖಚಿತ. ಇತ್ತೀಚಿನ ದಿನಗಳಲ್ಲಿ ನಗರಗಳು ಮತ್ತು ಹಳ್ಳಿಗಳಲ್ಲಿ ಮದುವೆ ಸೀಸನ್ ಶುರುವಾಗಿದೆ. ಪರಿಣಾಮವಾಗಿ ಜನರಿಗೆ ಹಣದ ಅಗತ್ಯವಿರುತ್ತದೆ.  ಫೆ.12ರಂದು ಜನರು ಸಂಕಷ್ಟ ಎದುರಿಸಬಹುದು.

ದೇಶಾದ್ಯಂತ ಪ್ರಮುಖ ಬ್ಯಾಂಕ್ ಒಕ್ಕೂಟಗಳು ಮುಷ್ಕರಕ್ಕೆ ಕರೆ ನೀಡಿವೆ, ಇದರಿಂದಾಗಿ ಆ ದಿನದಂದು ಬ್ಯಾಂಕಿಂಗ್ ಸೇವೆಯಲ್ಲಿ ಗ್ರಾಹಕರಿಗೆ ಸಮಸ್ಯೆ ಉಂಟಾಗಬಹುದು. ಆದಾಗ್ಯೂ, ಬ್ಯಾಂಕುಗಳು ಅಥವಾ ಭಾರತೀಯ ರಿಸರ್ವ್ ಬ್ಯಾಂಕ್ ಫೆಬ್ರವರಿ 12 ಅನ್ನು ಬ್ಯಾಂಕ್ ರಜಾದಿನವೆಂದು ಘೋಷಿಸಿಲ್ಲ, ಇದು ಶಾಖೆಗಳು ತೆರೆದಿರುವ ನಿರೀಕ್ಷೆಯಿದೆ.

10 ಕೇಂದ್ರ ಕಾರ್ಮಿಕ ಸಂಘಗಳು ಸಹ ಈ ಬೃಹತ್ ಪ್ರತಿಭಟನೆಯಲ್ಲಿ ಸೇರುವ ನಿರೀಕ್ಷೆಯಿದೆ. ಸರ್ಕಾರವು ನವೆಂಬರ್‌ನಲ್ಲಿ ಸೂಚಿಸಿದ ನಾಲ್ಕು ಹೊಸ ಕಾರ್ಮಿಕ ಸಂಹಿತೆಗಳನ್ನು ವಿರೋಧಿಸುವುದು ಈ ಮುಷ್ಕರದ ಉದ್ದೇಶವಾಗಿದೆ. ಫೆಬ್ರವರಿ 12 ರಂದು ಈ ಸಂಸ್ಥೆಗಳು ಮುಷ್ಕರ ನಡೆಸಲಿವೆ ಎಂದು ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ