AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದ ಯೋಜನೆಗಳು ಜನರನ್ನು ತಲುಪಲು ಬ್ಯಾಂಕ್​ಗಳು ಡಿಜಿಟಲ್ ವ್ಯವಸ್ಥೆ ಬಳಸಿಕೊಳ್ಳಬೇಕು: ನಿರ್ಮಲಾ ಸೀತಾರಾಮನ್

ದೇಶದ ಎಲ್ಲ ನಾಗರಿಕರು ಬ್ಯಾಂಕ್ ಖಾತೆ ಹೊಂದಿರಬೇಕು. ರುಪೇ ಕಾರ್ಡ್​ಗಳ ಮೂಲಕ ಸುಲಭದಲ್ಲಿ ವಹಿವಾಟು ನಡೆಸಲು ಎಲ್ಲರಿಗೂ ಸಾಧ್ಯವಾಗಬೇಕು ಎಂದು ಅವರು ತಿಳಿಸಿದರು.

ಸರ್ಕಾರದ ಯೋಜನೆಗಳು ಜನರನ್ನು ತಲುಪಲು ಬ್ಯಾಂಕ್​ಗಳು ಡಿಜಿಟಲ್ ವ್ಯವಸ್ಥೆ ಬಳಸಿಕೊಳ್ಳಬೇಕು: ನಿರ್ಮಲಾ ಸೀತಾರಾಮನ್
ನಿರ್ಮಲಾ ಸೀತಾರಾಮನ್ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Sep 12, 2021 | 10:10 PM

ಟ್ಯುಟಿಕೊರಿನ್: ಖಾಸಗಿ ವಲಯದಲ್ಲಿರುವ ಬ್ಯಾಂಕ್​ಗಳೂ ಸೇರಿದಂತೆ ಎಲ್ಲ ಬ್ಯಾಂಕ್​ಗಳೂ ಡಿಜಿಟಲ್ ಅವಕಾಶಗಳನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ಸರ್ಕಾರದ ಯೋಜನೆಗಳನ್ನು ಬಡವರು ಮತ್ತು ತಳವರ್ಗದ ಜನರಿಗೆ ಸುಲಭವಾಗಿ ತಲುಪಿಸಬೇಕು. ಆರ್ಥಿಕವಾಗಿ ಎಲ್ಲರನ್ನೂ ಒಳಗೊಳ್ಳುವ (ಫೈನಾನ್ಷಿಯಲ್ ಇನ್​ಕ್ಲುಷನ್) ಕಾರ್ಯಕ್ರಮದ ವ್ಯಾಪ್ತಿಯನ್ನು ವಿಸ್ತರಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ಮಾಡಿದರು.

ತಮಿಳ್​ನಾಡು ಮರ್ಕಂಟೈಲ್ ಬ್ಯಾಂಕ್​ನ ಶತಮಾನೋತ್ಸವ ಸಮಾರಂಭದಲ್ಲಿ ಮಾತನಾಡಿದ ನಿರ್ಮಲಾ, ಬ್ಯಾಂಕಿಂಗ್ ವಲಯದ ಡಿಜಿಟಲ್ ಸಾಧ್ಯತೆಗಳು ಕೊವಿಡ್ ಸಮಯದಲ್ಲಿ ಉಪಯುಕ್ತ ಎನಿಸಿದವು. ಅಗತ್ಯ ಇರುವವರಿಗೆ ನೆರವು ನೀಡಲೆಂದು ಸರ್ಕಾರ ಘೋಷಿಸುತ್ತಿದ್ದ ಆರ್ಥಿಕ ಪರಿಹಾರ ನಿಧಿಯನ್ನು ವಿತರಿಸಲು ಡಿಜಿಟಲ್ ಸಾಧನಗಳು ಸಹಾಯಕ್ಕೆ ಬಂದವು. ಫಲಾನುಭವಿಗಳ ಪೂರ್ವಾಪರ ಪರಿಶೀಲನೆಗೂ ಡಿಜಿಟಲ್ ಸಾಧನಗಳು ನೆರವಾದವು ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ಯಾಂಕಿಂಗ್ ವ್ಯವಸ್ಥೆಯ ಪ್ರಾಮುಖ್ಯತೆ ಅರಿವು ಚೆನ್ನಾಗಿದೆ. ಹೀಗಾಗಿಯೇ ಜನ್​ಧನ್ ಯೋಜನೆಯಡಿ ತೆರೆದ ಅಕೌಂಟ್​ಗಳಲ್ಲಿ ಶೂನ್ಯ ಠೇವಣಿಯಿದ್ದರೂ ಖಾತೆಗಳನ್ನು ಚಾಲ್ತಿಯಲ್ಲಿಡಬೇಕು ಎಂದು ಸಲಹೆ ಮಾಡಿದ್ದಾರೆ. ದೇಶದ ಎಲ್ಲ ನಾಗರಿಕರು ಬ್ಯಾಂಕ್ ಖಾತೆ ಹೊಂದಿರಬೇಕು. ರುಪೇ ಕಾರ್ಡ್​ಗಳ ಮೂಲಕ ಸುಲಭದಲ್ಲಿ ವಹಿವಾಟು ನಡೆಸಲು ಎಲ್ಲರಿಗೂ ಸಾಧ್ಯವಾಗಬೇಕು ಎಂದು ಅವರು ತಿಳಿಸಿದರು.

ಕೊವಿಡ್-19 ಪಿಡುಗು ದೇಶವ್ಯಾಪಿ ಹರಡಿಕೊಂಡಿದ್ದಾಗ ಸರ್ಕಾರವು ಮೂರು ಕಂತುಗಳಲ್ಲಿ ₹ 1500 ಕೋಟಿ ನೆರವು ಬಿಡುಗಡೆ ಮಾಡಿತ್ತು. ಬ್ಯಾಂಕಿಂಗ್ ಕ್ಷೇತ್ರಕ್ಕೆ ಡಿಜಿಟಲ್ ಆಯಾಮದ ಸ್ಪರ್ಶ ದೊರೆತ ನಂತರ ಸಾಕಷ್ಟು ಬದಲಾವಣೆಗಳು ಗೋಚರಿಸುತ್ತಿವೆ ಎಂದು ನುಡಿದರು.

ಬ್ಯಾಂಕಿಂಗ್ ಸೇವೆ ದೊರಕದ ಸ್ಥಳಗಳಲ್ಲಿ ಶಾಖೆಗಳನ್ನು ಆರಂಭಿಸಬೇಕು. ಜನರು ತಾವು ವಾಸಿಸುತ್ತಿರುವ ಸ್ಥಳಗಳಿಂದಲೇ ಬ್ಯಾಂಕ್ ಖಾತೆ ತೆರೆಯಲು, ಸೇವೆ ಪಡೆಯಲು ಸಾಕಷ್ಟು ಅವಕಾಶಗಳು ದೊರಕುತ್ತಿವೆ. ಟ್ಯುಟಿಕೊರಿನಲ್ಲಿದ್ದೇ ಸಣ್ಣ ಹಳ್ಳಿಗಳಲ್ಲಿರುವ ಜನರ ಬ್ಯಾಂಕಿಂಗ್ ಅಗತ್ಯಗಳನ್ನು ಪೂರೈಸಬಹುದಾಗಿದೆ ಎಂದು ಹೇಳಿದರು.

ಯಾವುದೇ ಬ್ಯಾಂಕ್​ನ ಭವಿಷ್ಯ ಅದು ಎಷ್ಟರಮಟ್ಟಿಗೆ ತಾಂತ್ರಿಕೆಯನ್ನು ಅಳವಡಿಸಿಕೊಂಡಿದೆ ಎಂಬುದನ್ನು ಅವಲಂಬಿಸಿದೆ. ಹಣಕಾಸು ಕ್ಷೇತ್ರದಲ್ಲಿ ತಂತ್ರಜ್ಞಾನ ದೊಡ್ಡಮಟ್ಟದಲ್ಲಿ ಬೆಳೆದಿದೆ. ಅದನ್ನು ಬಳಸಿಕೊಂಡು ನೀವು ದತ್ತಾಂಶಗಳನ್ನು ಸುಲಭವಾಗಿ ವಿಶ್ಲೇಷಿಸಬಹುದು. ಅದು ಆದಾಯ ತೆರಿಗೆ ಅಥವಾ ಜಿಎಸ್​ಟಿಗೆ ಸಂಬಂಧಿಸಿದ ವಿಚಾರವೇ ಆಗಿರಬಹುದು ಅಥವಾ ಇತರ ಕ್ಷೇತ್ರವೇ ಆಗಿರಬಹುದು. ದತ್ತಾಂಶಗಳ ಸ್ವಯಂ ವಿಶ್ಲೇಷಣೆಯಿಂದ ಹಲವು ಅನುಕೂಲಗಳಿವೆ ಎಂದು ಅಭಿಪ್ರಾಯಪಟ್ಟರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಡಿಜಿಟಲ್ ತಂತ್ರಜ್ಞಾನದ ಬಳಕೆ ಇಂದು ಒಂದು ಆಯ್ಕೆಯಾಗಿ ಉಳಿದಿಲ್ಲ. ಗ್ರಾಹಕರ ಹಿತಕ್ಕಾಗಿ ಮತ್ತು ಬ್ಯಾಂಕ್​ಗಳ ಅಸ್ತಿತ್ವಕ್ಕಾಗಿ ಅದು ಅನಿವಾರ್ಯ ಎಂದು ಹೇಳಿದರು.

ತಮಿಳ್​ನಾಡು ಮರ್ಕಂಟೈಲ್ ಬ್ಯಾಂಕ್​ನ ಮಹಿಳಾ ಗ್ರಾಹಕರೊಬ್ಬರಿಗೆ ‘ಪಿಎಂ ಸ್ವನಿಧಿ ಯೋಜನೆ’ಯಡಿ ಆರ್ಥಿಕ ಸಹಾಯಧನದ ಚೆಕ್ ವಿತರಿಸಿ ಮಾತನಾಡಿದ ಅವರು, ಇಡ್ಲಿ ವ್ಯಾಪಾರ ಮಾಡುವ ಮಹಿಳೆಯೊಬ್ಬರಿಗೆ ಇಂದು ಆರ್ಥಿಕ ನೆರವು ಬಿಡುಗಡೆ ಮಾಡಲು ನಿಮಗೆ ಸಾಧ್ಯವಾಗಿದೆ. ಇದಕ್ಕೆ ಮುಖ್ಯ ಕಾರಣ ಪ್ರಧಾನ ಮಂತ್ರಿ ಜನ್​ಧನ್ ಯೋಜನೆ ಒಂದು ವೇಳೆ ಆ ಯೋಜನೆಯೇ ಲಭ್ಯವಿಲ್ಲ ಎಂದಾಗಿದ್ದರೆ ನೀವು ಆ ಮಹಿಳೆಗೆ ಹಣಕಾಸಿನ ನೆರವು ವಿತರಿಸಲು ಸಾಧ್ಯವೇ ಆಗುತ್ತಿರಲಿಲ್ಲ ಎಂದು ವಿಶ್ಲೇಷಿಸಿದರು.

ತಮಿಳ್​ನಾಡು ಮರ್ಕಂಟೈಲ್ ಬ್ಯಾಂಕ್​ನ ಶೇ 74ರಷ್ಟು ವಹಿವಾಟು ಆದ್ಯತಾ ವಲಯದಿಂದಲೇ (ಕೃಷಿ) ಬರುತ್ತದೆ. ಗ್ರಾಮೀಣ ಪ್ರದೇಶದಲ್ಲಿ ಬ್ಯಾಂಕ್​ನ ಶಾಖೆಗಳು ಹೆಚ್ಚಾಗಿ ಹರಡಿಕೊಂಡಿರುವುದು ಇದಕ್ಕೆ ಕಾರಣ. ಕೊವಿಡ್ 19 ವ್ಯಾಪಕವಾಗಿ ಹರಡಿದ್ದಾಗ ಕೇಂದ್ರ ಸರ್ಕಾರವು ತುರ್ತು ಸಾಲ ಖಾತರಿ ಯೋಜನೆ ಮಾಡುವ ಮೂಲಕ ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳ ನೆರವಿಗೆ ಧಾವಿಸಿತ್ತು ಎಂದು ನಿರ್ಮಲಾ ಸೀತಾರಾಮನ್ ನೆನಪಿಸಿಕೊಂಡರು.

(Banks should adopt digitisation to ensure govt schemes reach needy says finance minister Nirmala Sitharaman)

ಇದನ್ನೂ ಓದಿ: ಕಾಂಗ್ರೆಸ್ ದೇಶದ ಸಂಪನ್ಮೂಲಗಳನ್ನು ಮಾರಿ ಕಿಕ್ ಬ್ಯಾಕ್ ಪಡೆದಿತ್ತು: ನಿರ್ಮಲಾ ಸೀತಾರಾಮನ್

ಇದನ್ನೂ ಓದಿ: ಕರ್ನಾಟಕಕ್ಕೆ ಸಿಗಬೇಕಿದ್ದ 5 ಸಾವಿರ ಕೋಟಿಗೆ ನಾನು ಅಡ್ಡಿ ಆಗಲಿಲ್ಲ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟನೆ

ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಜೋಶಿಯ ಚಿಕ್ಕಮಕ್ಖಳನ್ನು ನೆನೆದು ಕರುಳು ಕಿತ್ತುಬಂದಂತಾಗುತ್ತಿದೆ: ಸಹಪಾಠಿಗಳು
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಸಂಬಂಧಿಯ ಡಿಎನ್​ಎ ಜೊತೆ ಮೃತರ ಡಿಎನ್​ಎ ಮ್ಯಾಚ್ ಆದರೆ ದೇಹ ಹಸ್ತಾಂತರ
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲಿಗೆ: ಸ್ಫೋಟಕ ಅಂಶ ಬಿಚ್ಚಿಟ್ಟ ಲಾಯರ್
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
Ahmedabad Plane Crash: ವೈದ್ಯ ಪ್ರತೀಕ್ ನೆನೆದು ಸ್ನೇಹಿತ ಭಾವುಕ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಭವಿಷ್ಯ ನುಡಿದ ಎರಡು ತಿಂಗಳು ನಂತರ ಭಾರತದಲ್ಲಿ ವಿಮಾನ ದುರ್ಘಟನೆ ಜರುಗಿದೆ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ಪ್ರತಾಪ್​ಗೆ ಗಗನನ ತಬ್ಬಿಕೊಳ್ಳೋ ಆಸೆ; ವೇದಿಕೆ ಮೇಲೆ ಹೇಳಿಕೊಂಡ ಸ್ಪರ್ಧಿ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ದುರಂತಕ್ಕೆ ಕಾರಣ ಮತ್ತು ಪರಿಹಾರದ ಬಗ್ಗೆ ಪ್ರಧಾನಿ ಮೋದಿ ಚರ್ಚೆ
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ಎಮರ್ಜೆನ್ಸಿ ಎಕ್ಸಿಟ್​ನಿಂದ ಕೆಳಗೆ ಹಾರಿ ಜೀವ ಉಳಿಸಿಕೊಂಡೆ: ರಮೇಶ್
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ವಿಮಾನ ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಪ್ರಧಾನಿ ಮೋದಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ
ದುರಂತ ನಡೆದ ಸ್ಥಳದಲ್ಲಿ ದಟ್ಟಹೊಗೆ, ಏನೂ ಕಾಣುತ್ತಿರಲಿಲ್ಲ: ಪ್ರತ್ಯಕ್ಷದರ್ಶಿ