AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಕಾಶ್ಮೀರ ಚುನಾವಣೆ: ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಈ ನಿಷೇಧಿತ ಸಂಘಟನೆ

ನಿಷೇಧಿತ ಸಂಘಟನೆಯಾಗಿರುವ ಜಮಾತ್ -ಎ- ಇಸ್ಲಾಮಿ ಮುಂಬರಲಿರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳನ್ನು ಸ್ವತಂತ್ರ ಅಭ್ಯರ್ಥಿಗಳನ್ನಾಗಿ ಕಣಕ್ಕಿಳಿಸಿದೆ. ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ತನ್ನ ಏಳು ಅಭ್ಯರ್ಥಿಗಳನ್ನು ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಸಲು ಯೋಜಿಸುತ್ತಿದ್ದರೆ, ಅವರಲ್ಲಿ ಮೂವರು ಕೊನೆಯ ಕ್ಷಣದಲ್ಲಿ ಹಿಂದೆ ಸರಿದಿದ್ದಾರೆ. ಈಗ ತನ್ನ ಮೂವರು ಸ್ವತಂತ್ರ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಜಮ್ಮು ಕಾಶ್ಮೀರ ಚುನಾವಣೆ:  ಮೂವರು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ ಈ ನಿಷೇಧಿತ ಸಂಘಟನೆ
ಜಮಾತ್ ಎ ಇಸ್ಲಾಮಿ
ನಯನಾ ರಾಜೀವ್
|

Updated on:Aug 27, 2024 | 2:49 PM

Share

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ನಾಮಪತ್ರ ಸಲ್ಲಿಕೆಗೆ ಮಂಗಳವಾರ ಕೊನೆಯ ದಿನವಾಗಿದ್ದು, ನಿಷೇಧಿತ ಸಂಘಟನೆ ಜಮಾತ್-ಎ-ಇಸ್ಲಾಮಿ ದಕ್ಷಿಣ ಕಾಶ್ಮೀರದ ವಿವಿಧ ಕ್ಷೇತ್ರಗಳಿಂದ ಕನಿಷ್ಠ ಮೂವರು ಮಾಜಿ ಸದಸ್ಯರನ್ನು ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಸಲು ಸಜ್ಜಾಗಿದೆ.

ಸೆಪ್ಟೆಂಬರ್ 18 ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಯಲ್ಲಿ ತನ್ನ ಏಳು ಅಭ್ಯರ್ಥಿಗಳನ್ನು ಸ್ವತಂತ್ರ ಅಭ್ಯರ್ಥಿಗಳಾಗಿ ಕಣಕ್ಕಿಳಿಸಲು ಯೋಜಿಸುತ್ತಿದ್ದರೆ, ಅವರಲ್ಲಿ ಮೂವರು ಕೊನೆಯ ಕ್ಷಣದಲ್ಲಿ ಹಿಂದೆ ಸರಿದಿದ್ದಾರೆ. ಈಗ ತನ್ನ ಮೂವರು ಸ್ವತಂತ್ರ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.

ಪುಲ್ವಾಮಾ ಕ್ಷೇತ್ರದ ಅಭ್ಯರ್ಥಿಯಾಗಿ ಡಾ ತಲತ್ ಮಜೀದ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಜಮಾತ್-ಎ-ಇಸ್ಲಾಮಿ ಮೂಲಗಳು ತಿಳಿಸಿವೆ. ಅವರು 2023 ರಲ್ಲಿ ಅಲ್ತಾಫ್ ಬುಖಾರಿಯ ಅಪ್ನಿ ಪಕ್ಷಕ್ಕೆ ಸೇರುವ ಮೂಲಕ ಅನೇಕರನ್ನು ಅಚ್ಚರಿಗೊಳಿಸಿದರು. ಮುಖ್ಯವಾಹಿನಿಯ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡ ಮೊದಲ ಜಮಾತ್ ನಾಯಕ ಎನಿಸಿಕೊಂಡರು.

ಮತ್ತಷ್ಟು ಓದಿ: ಜಮ್ಮು ಕಾಶ್ಮೀರ ಚುನಾವಣೆ: 44 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿ ಸ್ವಲ್ಪ ಹೊತ್ತಲ್ಲೇ ಹಿಂಪಡೆದ ಬಿಜೆಪಿ

ಜಮಾತ್ ಕುಲ್ಗಾಮ್‌ನಿಂದ ಸಯರ್ ಅಹಮದ್ ರೇಶಿ ಅವರನ್ನು ಕಣಕ್ಕಿಳಿಸಲು ಹೊರಟಿದೆ. ಜಮಾತ್-ಸಂಯೋಜಿತ ಫಲಾಹ್-ಎ-ಆಮ್ ಟ್ರಸ್ಟ್ (ಎಫ್‌ಎಟಿ) ನ ಸಹಾಯಕ ನಿರ್ದೇಶಕ ಸಯಾರ್ ಕುಲ್ಗಾಮ್ ನಿವಾಸಿಯಾಗಿದ್ದು, ಅವರು ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ.

ಈ ವರ್ಷದ ಫೆಬ್ರವರಿಯಲ್ಲಿ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಜಮಾತ್ ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ಕುಲ್ಗಾಮ್‌ನಲ್ಲಿರುವ ರೇಶಿ ಅವರ ಮನೆಯ ಮೇಲೆ ದಾಳಿ ನಡೆಸಿತ್ತು. ಜಮಾತ್‌ನ ಮೂಲಗಳು, ನಿಷೇಧಿತ ಸಂಘಟನೆಯು ದೇವಸರ್ ಅಸೆಂಬ್ಲಿ ಸ್ಥಾನದಿಂದ ತನ್ನ ಸ್ವತಂತ್ರ ಅಭ್ಯರ್ಥಿಯಾಗಿ ಹೆಚ್ಚು ಪರಿಚಿತರಾದ ಮೊಹಮ್ಮದ್ ಸಿದ್ದಿಕ್ ಅವರನ್ನು ಕಣಕ್ಕಿಳಿಸುತ್ತಿದೆ.

ಶೋಪಿಯಾನ್‌ನ ಜೈನ್‌ಪೋರಾ ವಿಧಾನಸಭಾ ಕ್ಷೇತ್ರಕ್ಕೆ ಮೊದಲ ಹಂತದಲ್ಲಿ ಸಂಭವನೀಯ ನಾಲ್ಕನೇ ಅಭ್ಯರ್ಥಿಯೊಂದಿಗೆ ಇನ್ನೂ ಮಾತುಕತೆ ನಡೆಸುತ್ತಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:03 pm, Tue, 27 August 24

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು