AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TRP ಸಮರದಲ್ಲಿ ಅಲ್ಪವಿರಾಮ: ಪ್ರತಿ ವಾರದ ರೇಟಿಂಗ್​ ಸೂಚ್ಯಂಕಕ್ಕೆ ಬ್ರೇಕ್​

ದೆಹಲಿ: TRPಯಿಂದ, TRPಗಾಗಿ, TRPಗೋಸ್ಕರ ಎಂದು 24X7 ನೇರ ಹಣಾಹಣಿಯಲ್ಲಿದ್ದ ಹಲವಾರು ಸುದ್ದಿ ವಾಹಿನಿಗಳ TRP ಸಮರಕ್ಕೆ ಇದೀಗ ತಾತ್ಕಾಲಿಕ ಬ್ರೇಕ್​ ಬಿದ್ದಿದೆ. ಟೆಲಿವಿಷನ್​ ರೇಟಿಂಗ್​ ಪಾಯಿಂಟ್​ ಅಥವಾ ಟಿಆರ್​ಪಿ ಎಂದೇ ಹೆಸರುವಾಸಿಯಾಗಿರುವ ಈ ಸೂಚ್ಯಂಕವನ್ನು ದೇಶದ ಪ್ರತಿ ಭಾಷೆಯ ಸುದ್ದಿವಾಹಿನಿ ಮತ್ತು ಮನರಂಜನಾ ವಾಹಿನಿಗಳಿಗೆ ಪ್ರತಿ ವಾರ ನೀಡಲಾಗುತ್ತಿತ್ತು. ಆದರೆ, ಇದೀಗ TRP ಶ್ರೇಣಿ ನೀಡುತ್ತಿದ್ದ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (BARC) ಇನ್ನು 8 ರಿಂದ 12 ವಾರಗಳ ಕಾಲ ಈ ಸೂಚ್ಯಂಕವನ್ನು ದೇಶದ […]

TRP ಸಮರದಲ್ಲಿ ಅಲ್ಪವಿರಾಮ: ಪ್ರತಿ ವಾರದ ರೇಟಿಂಗ್​ ಸೂಚ್ಯಂಕಕ್ಕೆ ಬ್ರೇಕ್​
KUSHAL V
|

Updated on:Oct 15, 2020 | 6:08 PM

Share

ದೆಹಲಿ: TRPಯಿಂದ, TRPಗಾಗಿ, TRPಗೋಸ್ಕರ ಎಂದು 24X7 ನೇರ ಹಣಾಹಣಿಯಲ್ಲಿದ್ದ ಹಲವಾರು ಸುದ್ದಿ ವಾಹಿನಿಗಳ TRP ಸಮರಕ್ಕೆ ಇದೀಗ ತಾತ್ಕಾಲಿಕ ಬ್ರೇಕ್​ ಬಿದ್ದಿದೆ. ಟೆಲಿವಿಷನ್​ ರೇಟಿಂಗ್​ ಪಾಯಿಂಟ್​ ಅಥವಾ ಟಿಆರ್​ಪಿ ಎಂದೇ ಹೆಸರುವಾಸಿಯಾಗಿರುವ ಈ ಸೂಚ್ಯಂಕವನ್ನು ದೇಶದ ಪ್ರತಿ ಭಾಷೆಯ ಸುದ್ದಿವಾಹಿನಿ ಮತ್ತು ಮನರಂಜನಾ ವಾಹಿನಿಗಳಿಗೆ ಪ್ರತಿ ವಾರ ನೀಡಲಾಗುತ್ತಿತ್ತು.

ಆದರೆ, ಇದೀಗ TRP ಶ್ರೇಣಿ ನೀಡುತ್ತಿದ್ದ ಪ್ರಸಾರ ಪ್ರೇಕ್ಷಕರ ಸಂಶೋಧನಾ ಮಂಡಳಿ (BARC) ಇನ್ನು 8 ರಿಂದ 12 ವಾರಗಳ ಕಾಲ ಈ ಸೂಚ್ಯಂಕವನ್ನು ದೇಶದ ಎಲ್ಲಾ ಸುದ್ದಿವಾಹಿನಿಗಳಿಗೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ಕೆಲವು ದಿನಗಳ ಹಿಂದೆ ಭಾರಿ ವಿವಾದ ಸೃಷ್ಟಿಸಿದ ಟಿಆರ್​ಪಿ ಹಗರಣದ ಹಿನ್ನೆಲೆಯಲ್ಲಿ BARC ಸಂಸ್ಥೆ ಇಂದು ಈ ನಿರ್ಧಾರ ಕೈಗೊಂಡಿದೆ. TRP ಸ್ಥಗಿತಗೊಂಡಿರುವ ಈ ವೇಳೆಯಲ್ಲಿ ಸಂಸ್ಥೆಯು TRP ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸದೃಢಗೊಳಿಸುವತ್ತ ತನ್ನ ಗಮನ ಹರಿಸುತ್ತದೆ ಎಂದು BARC ತಿಳಿಸಿದೆ.

ಜೊತೆಗೆ, ಮತ್ತೆಂದೂ ಈ ರೀತಿಯ ಹಗರಣ ಆಗದಂತೆ ಕ್ರಮ ಕೈಗೊಳ್ಳುತ್ತದೆ ಎಂದೂ ಸಹ ಹೇಳಿದೆ. ಸದ್ಯ ದೇಶದ ಎಲ್ಲಾ ಭಾಷೆಯ ಸುದ್ದಿವಾಹಿನಿಗಳಿಗೆ ಈ ಕ್ರಮ ಅನ್ವಯಿಸುತ್ತದೆ. ಹಾಗಾಗಿ ಸದ್ಯಕ್ಕೆ ಪ್ರತಿ ವಾರದ ರೇಟಿಂಗ್​ ಸೂಚ್ಯಂಕಕ್ಕೆ TRP ಬ್ರೇಕ್​ ಬಿದ್ದಿದೆ. ನ್ಯಾಷನಲ್​ ಬ್ರಾಡ್​ಕಾಸ್ಟರ್ಸ್​ ಅಸೋಸಿಯೇಷನ್​ ಸಂಸ್ಥೆಯು BARC ಈ ನಿರ್ಧಾರವನ್ನು ಸ್ವಾಗತಿಸಿದೆ. ತಾವು ಈ ನಿರ್ಧಾರಕ್ಕೆ ಬದ್ಧರಿದ್ದೇವೆ ಎಂದು ತಿಳಿಸಿದೆ.

Published On - 5:59 pm, Thu, 15 October 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ