AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bareilly Accident: ಬರೇಲಿಯಲ್ಲಿ ಭೀಕರ ಅಪಘಾತ; ಟ್ರಕ್​ಗೆ ಆ್ಯಂಬುಲೆನ್ಸ್​ ಡಿಕ್ಕಿ ಹೊಡೆದು 7 ಜನ ಸಾವು

ಆಸ್ಪತ್ರೆಗೆ ಚೆಕ್​ಅಪ್​ಗೆಂದು ಹೋಗಿದ್ದ 6 ಮಂದಿ ಆ್ಯಂಬುಲೆನ್ಸ್​ನಲ್ಲಿ ಮನೆಗೆ ವಾಪಾಸ್ ತೆರಳುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಚಾಲಕ ಮೃತಪಟ್ಟಿದ್ದಾರೆ.

Bareilly Accident: ಬರೇಲಿಯಲ್ಲಿ ಭೀಕರ ಅಪಘಾತ; ಟ್ರಕ್​ಗೆ ಆ್ಯಂಬುಲೆನ್ಸ್​ ಡಿಕ್ಕಿ ಹೊಡೆದು 7 ಜನ ಸಾವು
ಬರೇಲಿಯಲ್ಲಿ ಅಪಘಾತ
TV9 Web
| Edited By: |

Updated on:May 31, 2022 | 9:30 AM

Share

ಬರೇಲಿ: ಉತ್ತರ ಪ್ರದೇಶದ ಬರೇಲಿಯಲ್ಲಿ (Bareilly) ಭೀಕರ ಅಪಘಾತ ಸಂಭವಿಸಿದ್ದು, 7 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಟ್ರಕ್​ಗೆ ಆ್ಯಂಬುಲೆನ್ಸ್​ (Ambulance) ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಆಸ್ಪತ್ರೆಗೆ ಚೆಕ್​ಅಪ್​ಗೆಂದು ಹೋಗಿದ್ದ 6 ಮಂದಿ ಆ್ಯಂಬುಲೆನ್ಸ್​ನಲ್ಲಿ ಮನೆಗೆ ವಾಪಾಸ್ ತೆರಳುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಇನ್ನೊಬ್ಬರು ಚಾಲಕ ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶದ ಬರೇಲಿಯ ಫತೇಗಂಜ್ ಥಾನಾ ಪ್ರದೇಶದಲ್ಲಿ ಟ್ರಕ್​ಗೆ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ಏಳು ಜನರು ಸಾವನ್ನಪ್ಪಿದ್ದಾರೆ. ರಾಮಮೂರ್ತಿ ಆಸ್ಪತ್ರೆಯ ಆಂಬ್ಯುಲೆನ್ಸ್ ದೆಹಲಿಯಿಂದ ಬರೇಲಿಗೆ ಬರುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯ ಸಂಖಾ ಸೇತುವೆ ಬಳಿ ಅಪಘಾತ ಸಂಭವಿಸಿದೆ ಎಂದು ಫತೇಗಂಜ್ ಪಶ್ಚಿಮ ವಲಯ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗನನ್ನು ಕಳೆದುಕೊಂಡ ತಂದೆಯ ಆಕ್ರಂದನ ನಮ್ಮ ಕಣ್ಣುಗಳನ್ನು ಒದ್ದೆ ಮಾಡುತ್ತದೆ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಿಎಂ ಕಚೇರಿಯ ಟ್ವಿಟ್ಟರ್ ಹ್ಯಾಂಡಲ್ ಮೂಲಕ ಈ ಅಪಘಾತದ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು ಬರೇಲಿ ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಪ್ರಾಣಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುವ ಮುಖ್ಯಮಂತ್ರಿಗಳು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ ಎಂದು ಟ್ವೀಟ್ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 am, Tue, 31 May 22

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ