AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಭವನದಲ್ಲಿ ಇದೇ ಮೊದಲ ಬಾರಿಗೆ ಬಸವ ಜಯಂತಿ: ನೀವೂ ಭಾಗವಹಿಸಬಹುದು

ಏಪ್ರಿಲ್ 30 ರಂದು ಬಸವೇಶ್ವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಈ ಬಾರಿ ನೂತನ ಸಂಸತ್ ಭವನದಲ್ಲಿ ಬಸವ ಜಯಂತಿ ಆಚರಿಸಲಾಗುತ್ತದೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ಈ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದ್ದಾರೆ.ಸಂಸತ್ ಭವನದಲ್ಲಿ ಬಸವಣ್ಣನವರ ವಚನವನ್ನು ಕೆತ್ತಲಾಗಿದೆ ಎಂಬುದು ವಿಶೇಷ. ಈ ಕಾರ್ಯಕ್ರಮದಲ್ಲಿ ಗಣ್ಯರು ಭಾಗವಹಿಸಲಿದ್ದಾರೆ.

ಸಂಸತ್ ಭವನದಲ್ಲಿ ಇದೇ ಮೊದಲ ಬಾರಿಗೆ ಬಸವ ಜಯಂತಿ: ನೀವೂ ಭಾಗವಹಿಸಬಹುದು
ಬಸವೇಶ್ವರರು, ನೂತನ ಸಂಸತ್ ಭವನ
ಹರೀಶ್ ಜಿ.ಆರ್​. ನವದೆಹಲಿ
| Updated By: ವಿವೇಕ ಬಿರಾದಾರ|

Updated on:Apr 21, 2025 | 6:54 PM

Share

ನವದೆಹಲಿ, ಏಪ್ರಿಲ್​ 21: ನಡೆ-ನುಡಿಗಳ ಸಮನ್ವಯ ಜಗದ್ಗುರು ಬಸವೇಶ್ವರರ (Basaveshwar Jayanti) ಜಯಂತಿಯನ್ನು ಈ ಬಾರಿ ಏಪ್ರಿಲ್​ 30 ರಂದು ಆಚರಿಸಲಾಗುತ್ತದೆ. ವಿಶ್ವಕ್ಕೆ ಸಂಸತ್​ ಪರಿಚಯಿಸಿದ ಬಸವೇಶ್ವರರ ಜಯಂತಿಯನ್ನು (Basava Jayanti) ಮೊದಲ ಬಾರಿಗೆ ನೂತನ ಸಂಸತ್ ಭವನದ ಆವರಣದಲ್ಲಿ ಆಚರಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಕೇಂದ್ರ ಸಚಿವ ವಿ.ಸೋಮಣ್ಣ ಅವರು ಸಂಸತ್ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಸಿದ್ದಾರೆ.

ಈ ವಿಚಾರವಾಗಿ ಮಾತನಾಡಿದ ಸಚಿವ ವಿ. ಸೋಮಣ್ಣನವರು, ಸಂಸತ್ ಆವರಣದಲ್ಲಿ ಬಸವ ಜಯಂತಿ ಆಚರಣೆಗೆ ಅವಕಾಶ ಸಿಕ್ಕಿದೆ. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಒಪ್ಪಿಗೆ ಕೊಟ್ಟಿದ್ದಾರೆ. ಬಸವ ಜಯಂತಿ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರು ಬರಲಿದ್ದಾರೆ. ಏಪ್ರಿಲ್ 30ರಂದು ಬಸವ ಜಯಂತಿ ಆಯೋಜಿಸಲಾಗಿದೆ. ಕರ್ನಾಟಕದ ಬಸವ ಅಭಿಮಾನಿಗಳು, ಮಠಾಧಿಪತಿಗಳು ಬರಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವವರು ಏಪ್ರಿಲ್​ 25ರ ಒಳಗಾಗಿ ಮಾಹಿತಿ ನೀಡಬೇಕು. ಕಡ್ಡಾಯವಾಗಿ ಆಧಾರ್ ಕಾರ್ಡ್ ನೀಡಬೇಕು ಎಂದು ಹೇಳಿದರು.

ಸಂಸತ್​ ಭವನದೊಳಗೆ ಬಸವಣ್ಣರ ವಚನ

2023ರಲ್ಲಿ ಲೋಕಾರ್ಪಣೆಗೊಂಡ ನೂತನ ಸಂಸತ್​ ಭವನ ವೈಭವೋಪೇತವಾಗಿದೆ. ಈ ಸಂಸತ್​ ಭವನ ಹಲವು ವಿಶೇಷತೆಗಳಿಂದ ಕೂಡಿದೆ. ಸಂಸತ್​ ಭವನದಲ್ಲಿ ಅಖಂಡ ಭಾರತದ ನಕ್ಷೆಯೊಂದಿಗೆ ಭಾರತೀಯ ಪರಂಪರೆ ಸಂಸ್ಕೃತಿಯ ಅನಾವರಣಗೊಂಡಿದ್ದು, ಕನ್ನಡ ಕಂಪು ಪಸರಿಸಿದೆ.

ಇದನ್ನೂ ಓದಿ
Image
ಬಸವಣ್ಣನವರ ಕುರಿತ ‘ಶರಣರ ಶಕ್ತಿ’ ಸಿನಿಮಾದ ಹಾಡುಗಳ ಬಿಡುಗಡೆ
Image
ವಿಜಯನಗರ: ಗೋಣಿ ಬಸವೇಶ್ವರ ರಥೋತ್ಸವಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹರಿದು ಬಂದ ಭಕ್ತ ಸಾಗರ
Image
ರಾಷ್ಟ್ರಕವಿ ಕುವೆಂಪು ಬಳಿಕ ಬಸವಣ್ಣನ ಪಠ್ಯ ಪರಿಷ್ಕರಣೆಯ ಚರ್ಚೆ ಆರಂಭ; ಸಾಮಾಜಿಕ ಜಾಲತಾಣದಲ್ಲಿ ವೈರಲ್
Image
ಆರ್ಥಿಕ ಹಿಂಜರಿತದ ನಡುವೆಯೇ ವಿಧಾನಸೌಧದ ಆವರಣದಲ್ಲಿ ಬಸವೇಶ್ವರ ಪ್ರತಿಮೆ; ಕೇಳಿಬಂತು ಟೀಕೆ

ಸಂಸತ್​ ಭವನದ ಗೋಡೆಯ ಮೇಲೆ ಹಂಪಿಯ ಕಲ್ಲಿನ ರಥದವನ್ನು ಕೆತ್ತಲಾಗಿದೆ. ಈ ಕಲ್ಲಿನ ರಥದ ಮೇಲೆ ಬಸವೇಶ್ವರರ ಚಿತ್ರ ಸೇರಿದಂತೆ ಮಹಾನ್​ ದಾರ್ಶನಿಕರ ಚಿತ್ರಗಳನ್ನು ಹಾಕಲಾಗಿದೆ. ಇದರ ಪಕ್ಕದಲ್ಲೇ ಗೋಡೆಯ ಮೇಲೆ ಬಸವಣ್ಣನವರ ವಚನ ಬರೆಯಲಾಗಿದೆ.

ಇದನ್ನೂ ಓದಿ: ವೀರಪ್ಪನ್ ಸಹಚರರಿಗೂ ಕನ್ನಡದಲ್ಲಿ ಬಸವಣ್ಣನ ವಚನ ಕಲಿಸಿದ್ದ ಡಾ. ರಾಜ್​ಕುಮಾರ್

ಕಳಬೇಡ ಕೊಲಬೇಡ ಹುಸಿಯ ನುಡಿಯಲು ಬೇಡ ಮುನಿಯಬೇಡ ಅನ್ಯರಿಗೆ ಅಸಹ್ಯಪಡಬೇಡ ತನ್ನ ಬಣ್ಣಿಸಬೇಡ ಇದಿರ ಹಳಿಯಲು ಬೇಡ. ಇದೇ ಅಂತರಂಗಶುದ್ಧಿ ಇದೇ ಬಹಿರಂಗಶುದ್ಧಿ ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ ಎಂದು ಬರೆಯಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:51 pm, Mon, 21 April 25

ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಕೇವಲ 3000 ರೂ.ನಿಂದ 7000 ಕೋಟಿ ದುಡಿದ ಬಾಬು ಪ್ಯಾಲೇಸ್ ಹೇಗಿದೆ ನೋಡಿ
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮೊದಲ ಹೆಂಡತಿ ನನ್ನ ವಿರುದ್ಧ ಕೌಟುಂಬಿಕ ಹಿಂಸೆ ಕೇಸ್ ಹಾಕಿದ್ದಳು: ಬಾಬು
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
ಮಾಧ್ಯಮಗಳ ಪ್ರಶ್ನೆಗೆ ಕಾಲವೇ ಉತ್ತರ ನೀಡಲಿದೆ: ವಿ ಸೋಮಣ್ಣ
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
‘ಜೂನಿಯರ್’ ಸಿನಿಮಾ ನೋಡಿದ ಪ್ರೇಕ್ಷಕರು ಹೇಳಿದ್ದೇನು?
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಬದುಕು ಇಲ್ಲವಾಗಿಸಿಕೊಳ್ಳುವುದನ್ನು ಬಿಟ್ಟರೆ ದಾರಿಯಿಲ್ಲ: ಹೂವಿನ ವ್ಯಾಪಾರಿ
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು
ಕಾವಿ-ಖಾದಿ ನಡುವಿನ ಸೂಕ್ಷ್ಮತೆ ಸೂಚ್ಯವಾಗಿ ತೋರಿಸಿದ ಸುತ್ತೂರು ಶ್ರೀಗಳು
ಕನ್ನಡ ಸ್ಟಾರ್ ನಟರ ಮೇಲೆ ಉರಿದು ಬಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್
ಕನ್ನಡ ಸ್ಟಾರ್ ನಟರ ಮೇಲೆ ಉರಿದು ಬಿದ್ದ ನಿರ್ಮಾಪಕ ಕನಕಪುರ ಶ್ರೀನಿವಾಸ್
ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಜನ ಸದುಪಯೋಗ ಮಾಡಿಕೊಳ್ಳಬೇಕು: ಸಚಿವ
ಸರ್ಕಾರ ನೀಡುತ್ತಿರುವ ಸೌಲಭ್ಯವನ್ನು ಜನ ಸದುಪಯೋಗ ಮಾಡಿಕೊಳ್ಳಬೇಕು: ಸಚಿವ
ಸಿಎಂ ಸಿದ್ದರಾಮಯ್ಯ ಪ್ರತಾಪ್​ನಂತೆ ಕೆಲಸವಿಲ್ಲದವರಲ್ಲ: ಪ್ರದೀಪ್ ಈಶ್ವರ್
ಸಿಎಂ ಸಿದ್ದರಾಮಯ್ಯ ಪ್ರತಾಪ್​ನಂತೆ ಕೆಲಸವಿಲ್ಲದವರಲ್ಲ: ಪ್ರದೀಪ್ ಈಶ್ವರ್