AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಧಾರರಹಿತ ಹೇಳಿಕೆ; ರಾಹುಲ್ ಗಾಂಧಿಯ ಮತ ಕಳ್ಳತನದ ಆರೋಪಕ್ಕೆ ಚುನಾವಣಾ ಆಯೋಗ ತಿರುಗೇಟು

ಚುನಾವಣಾ ಆಯೋಗದ ವಿರುದ್ಧ ಬಹು ದೊಡ್ಡ ಆರೋಪ ಮಾಡಿದ್ದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಚುನಾವಣಾ ಆಯೋಗ ಮತ ಕಳ್ಳತನದಲ್ಲಿ ಭಾಗಿಯಾಗಿದೆ ಎಂದಿದ್ದರು. ಚುನಾವಣಾ ಆಯೋಗದ ವಿರುದ್ಧ ತಮ್ಮ ಬಳಿ ಆಟಂ ಬಾಂಬ್ ಇದೆ ಎಂದು ಕೂಡ ಹೇಳಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ 'ಆಧಾರರಹಿತ ಮತ್ತು ಬೇಜವಾಬ್ದಾರಿಗಳನ್ನು ನಿರ್ಲಕ್ಷ್ಯಿಸಬೇಕು' ಎಂದು ಹೇಳಿದೆ.

ಆಧಾರರಹಿತ ಹೇಳಿಕೆ; ರಾಹುಲ್ ಗಾಂಧಿಯ ಮತ ಕಳ್ಳತನದ ಆರೋಪಕ್ಕೆ ಚುನಾವಣಾ ಆಯೋಗ ತಿರುಗೇಟು
Election Commissioner Gyanesh Kumar
ಸುಷ್ಮಾ ಚಕ್ರೆ
|

Updated on:Aug 01, 2025 | 8:27 PM

Share

ನವದೆಹಲಿ, ಆಗಸ್ಟ್ 1: ಚುನಾವಣಾ ಆಯೋಗವು ಮತ ಕಳ್ಳತನದಲ್ಲಿ ಭಾಗಿಯಾಗಿದೆ ಎಂಬುದಕ್ಕೆ ನಮ್ಮ ಬಳಿ ಪುರಾವೆಗಳಿವೆ. ಇಂತಹ ಅಕ್ರಮದಲ್ಲಿ ಚುನಾವಣಾ ಆಯೋಗದಲ್ಲಿ ಭಾಗಿಯಾಗಿರುವ ಯಾರನ್ನೂ ನಾವು ಸುಮ್ಮನೆ ಬಿಡುವುದಿಲ್ಲ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಸ್ಫೋಟಕ ಹೇಳಿಕೆ ನೀಡಿದ್ದರು. ಆದರೆ, ಇದಕ್ಕೆ ಪ್ರತಿಕ್ರಿಯಿಸಿರುವ ಚುನಾವಣಾ ಆಯೋಗ, “ಪ್ರತಿದಿನ ಮಾಡಲಾಗುವ ಇಂತಹ ಆಧಾರರಹಿತ ಆರೋಪಗಳನ್ನು ಚುನಾವಣಾ ಆಯೋಗ (Election Commission) ನಿರ್ಲಕ್ಷಿಸುತ್ತದೆ. ಪದೇ ಪದೇ ಬೆದರಿಕೆಗಳ ಹೊರತಾಗಿಯೂ ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ಕೆಲಸ ಮಾಡುತ್ತಿರುವ ಎಲ್ಲಾ ಚುನಾವಣಾ ಅಧಿಕಾರಿಗಳಿಗೆ ಕೂಡ ಇಂತಹ ಹೇಳಿಕೆಯನ್ನು ನಿರ್ಲಕ್ಷಿಸುವಂತೆ ಸೂಚಿಸುತ್ತದೆ” ಎಂದು ತಿಳಿಸಿದೆ.

ಭಾರತೀಯ ಚುನಾವಣಾ ಆಯೋಗ (ECI) ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮತದಾರರ ವಂಚನೆಯ ಗಂಭೀರ ಆರೋಪವನ್ನು ದೃಢವಾಗಿ ತಿರಸ್ಕರಿಸಿದೆ. ಆ ಆರೋಪ “ಆಧಾರರಹಿತ” ಮತ್ತು “ಬೇಜವಾಬ್ದಾರಿಯುವತವಾದುದು” ಎಂದು ಆಯೋಗ ಟೀಕಿಸಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮತ ಕಳ್ಳತನಕ್ಕೆ ಇಸಿಐ ನೇರವಾಗಿ ಸಹಕರಿಸುತ್ತಿದೆ ಎಂದು ಆರೋಪಿಸಿದ್ದರು. ಇತ್ತೀಚೆಗೆ ಬಿಹಾರದಲ್ಲಿ ನಡೆಸಲಾದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಉಲ್ಲೇಖಿಸಿದ ಅವರು, ಚುನಾವಣಾ ಆಯೋಗದ ಕ್ರಮಗಳು ಆಡಳಿತಾರೂಢ ಬಿಜೆಪಿಯ ಪರವಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಚುನಾವಣಾ ಆಯೋಗ ಮತ ಕಳ್ಳತನದಲ್ಲಿ ಭಾಗಿ; ಬಿಹಾರ ಚುನಾವಣೆಗೂ ಮುನ್ನ ಆಟಂ ಬಾಂಬ್ ಹಾಕಿದ ರಾಹುಲ್ ಗಾಂಧಿ!

ವಿರೋಧ ಪಕ್ಷದ ಸ್ವತಂತ್ರ ತನಿಖೆಯು ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ (BJP) ಲಾಭವಾಗುವಂತೆ ಭಾರತದ ಚುನಾವಣಾ ಆಯೋಗವು ಬೃಹತ್ “ಮತ ಕಳ್ಳತನ”ದಲ್ಲಿ ಭಾಗಿಯಾಗಿದೆ ಎಂದು ಬಹಿರಂಗಪಡಿಸಿದೆ ಎಂದು ವಿಶೇಷ ತೀವ್ರ ಪರಿಷ್ಕರಣೆ (SIR) ಬಗ್ಗೆ ಹೆಚ್ಚುತ್ತಿರುವ ಗದ್ದಲದ ನಡುವೆ ಇಂದು ಕಾಂಗ್ರೆಸ್‌ನ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದರು. “ಮತಗಳನ್ನು ಕದಿಯಲಾಗುತ್ತಿದೆ. ಚುನಾವಣಾ ಆಯೋಗವು ಈ ಮತ ಕಳ್ಳತನದಲ್ಲಿ ಭಾಗಿಯಾಗಿದೆ ಎಂಬುದಕ್ಕೆ ನಮ್ಮ ಬಳಿ ಸ್ಪಷ್ಟ ಪುರಾವೆಗಳಿವೆ. ನಾನು ಈ ಹೇಳಿಕೆಯನ್ನು ಸುಮ್ಮನೆ ಹೇಳುತ್ತಿಲ್ಲ. ನಮ್ಮಲ್ಲಿ ಶೇ. 100ರಷ್ಟು ಪುರಾವೆಗಳಿವೆ. ನಾವು ಅದನ್ನು ಸಾರ್ವಜನಿಕಗೊಳಿಸಿದ ನಂತರ ಚುನಾವಣಾ ಆಯೋಗಕ್ಕೆ ಬಚ್ಚಿಟ್ಟುಕೊಳ್ಳಲು ಎಲ್ಲೂ ಸ್ಥಳವಿರುವುದಿಲ್ಲ” ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:20 pm, Fri, 1 August 25

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!