Narendra Modi: ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಗೆ ಪ್ರಧಾನಿ ಮೋದಿ ಮುಖ್ಯ ಅತಿಥಿ, ದ್ವಿಪಕ್ಷೀಯ ಸಂಬಂಧಕ್ಕೆ 25 ವರ್ಷ

Bastille Day: ಫ್ರಾನ್ಸ್‌ನ ರಾಷ್ಟ್ರೀಯ ದಿನವಾದ ಬಾಸ್ಟಿಲ್ ಡೇಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದೆ. ಭಾರತ-ಫ್ರಾನ್ಸ್ ದ್ವಿಪಕ್ಷೀಯ ಕಾರ್ಯತಂತ್ರದ ಸಂಬಂಧಗಳು 25 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆ ಈ ಭೇಟಿ ಮಹತ್ವ ಪಡೆದಿದೆ.

Narendra Modi: ಫ್ರಾನ್ಸ್ ರಾಷ್ಟ್ರೀಯ ದಿನಾಚರಣೆಗೆ ಪ್ರಧಾನಿ ಮೋದಿ ಮುಖ್ಯ ಅತಿಥಿ, ದ್ವಿಪಕ್ಷೀಯ ಸಂಬಂಧಕ್ಕೆ 25 ವರ್ಷ
ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್
Follow us
|

Updated on: Jul 10, 2023 | 10:44 PM

ಫ್ರಾನ್ಸ್‌ನ ರಾಷ್ಟ್ರೀಯ ದಿನವಾದ ಬಾಸ್ಟಿಲ್ ಡೇ (Bastille Day) ಆಚರಣೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ. ಭಾರತ-ಫ್ರಾನ್ಸ್ ದ್ವಿಪಕ್ಷೀಯ ಕಾರ್ಯತಂತ್ರದ ಸಂಬಂಧಗಳು ಈ ವರ್ಷಕ್ಕೆ 25 ವರ್ಷ ಪೂರೈಸುತ್ತಿರುವುದರಿಂದ ಬಾಸ್ಟಿಲ್ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರ ಫ್ರಾನ್ಸ್ ಭೇಟಿಯು ಮಹತ್ವದ್ದಾಗಿದೆ.

ಸೈಂಟ್ ಗೋಬೈನ್ ಎಂಬ ಸಂಸ್ಥೆಯು ಫ್ರಾನ್ಸ್​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೆನೈಟ್ ಬಾಜಿನ್ ಅವರು ಮೋದಿ ಅವರನ್ನು ಸ್ವಾಗತಿಸಿದ ವಿಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡು, ಅಭಿವೃದ್ಧಿಯಲ್ಲಿ ಭಾರತ ಪ್ರಮುಖ ಪಾತ್ರ ವಹಿಸುತ್ತಿದೆ ಮತ್ತು ದ್ವಿಪಕ್ಷೀಯ ಸಂಬಂಧವು 25 ವರ್ಷಗಳನ್ನು ಪೂರೈಸುತ್ತಿದೆ” ಎಂದು ಬರೆದುಕೊಂಡಿದೆ.

ಫ್ರಾನ್ಸ್​​ಗೆ ಮುಖ್ಯ ಅತಿಥಿಯಾಗಿ ಭೇಟಿ ನೀಡುತ್ತಿರುವ ಮೋದಿ ಅವರನ್ನು ಸ್ವಾಗತಿಸಿದ ಫ್ರಾನ್ಸ್​ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬೆನೈಟ್ ಬಾಜಿನ್, “ಫ್ರಾನ್ಸ್‌ನ ರಾಷ್ಟ್ರೀಯ ದಿನದಂದು ಬಾಸ್ಟಿಲ್ ಡೇ ಆಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸುತ್ತಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ” ಎಂದು ಹೇಳಿದ್ದಾರೆ.

ಇದನ್ನು ಓದಿ: ಹಿಮಾಚಲ ಪ್ರದೇಶದ ಸಿಎಂಗೆ ದೂರವಾಣಿ ಕರೆ ಮಾಡಿ ಪ್ರವಾಹ ಪೀಡಿತ ರಾಜ್ಯದ ಸ್ಥಿತಿಗತಿ ವಿಚಾರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಷ್ಟ್ರೀಯ ದಿನಾಚರಣೆ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿದ್ದು, ಅದರಂತೆ ಜುಲೈ 13 ಮತ್ತು 14 ರಂದು ಎರಡು ದಿನಗಳ ಮೋದಿ ಫ್ರಾನ್ಸ್ ಪ್ರವಾಸದಲ್ಲಿರಲಿದ್ದಾರೆ. ಸಮಾರಂಭದಲ್ಲಿ ಪಾಲ್ಗೊಳ್ಳಲು ಮತ್ತು ಭಾರತ-ಫ್ರಾನ್ಸ್ ದ್ವಿಪಕ್ಷೀಯ ಕಾರ್ಯತಂತ್ರದ ಸಂಬಂಧಗಳ 25 ವರ್ಷಗಳ ಸಂಭ್ರಮಾಚರಣೆಗಾಗಿ ಫ್ರಾನ್ಸ್‌ಗೆ ಭೇಟಿ ನೀಡಲಿದ್ದಾರೆ.

ಭೇಟಿಯ ವೇಳೆ ಪ್ರಧಾನಿ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಪ್ಯಾರಿಸ್​ನ ಪ್ರಸಿದ್ಧ ವಸ್ತುಸಂಗ್ರಹಾಲಯಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆಮ ಅನಿವಾಸಿ ಭಾರತೀಯರಿಗಾಗಿ ಆಯೋಜಿಸಲಾಗುವ ಕಾರ್ಯಕ್ರಮವದಲ್ಲಿ ಮೋದಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ