AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

S Jaishankar: ಬಿಬಿಸಿ ಭಾರತದ ಕಾನೂನನ್ನು ಗೌರವಿಸಲೇಬೇಕು; ಬ್ರಿಟನ್​ ವಿದೇಶಾಂಗ ಸಚಿವರಿಗೆ ಜೈಶಂಕರ್ ಖಡಕ್ ಉತ್ತರ

ಬಿಬಿಸಿ ಕಚೇರಿಯ ತೆರಿಗೆ ಸಮಸ್ಯೆಗೆ ಸಂಬಂಧಿಸಿದಂತೆ ಬ್ರಿಟನ್​​ ವಿದೇಶಾಂಗ ಸಚಿವರು ಇಂದು ಜೈಶಂಕರ್ ಅವರ ಗಮನ ಸೆಳೆದರು. ಅದಕ್ಕೆ ದೃಢವಾಗಿ ಉತ್ತರಿಸಿದ ಜೈಶಂಕರ್, ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಂಸ್ಥೆಗಳು ಇಲ್ಲಿನ ಕಾನೂನಿಗೆ ಬದ್ಧರಾಗಿರಬೇಕು ಎಂದು ತಿಳಿಸಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

S Jaishankar: ಬಿಬಿಸಿ ಭಾರತದ ಕಾನೂನನ್ನು ಗೌರವಿಸಲೇಬೇಕು; ಬ್ರಿಟನ್​ ವಿದೇಶಾಂಗ ಸಚಿವರಿಗೆ ಜೈಶಂಕರ್ ಖಡಕ್ ಉತ್ತರ
ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹಾಗೂ ಬ್ರಿಟನ್​​ನ ವಿದೇಶಾಂಗ ಸಚಿವ ಜೇಮ್ಸ್ ಕ್ಲೆವರ್ಲಿImage Credit source: PTI
Ganapathi Sharma
|

Updated on: Mar 01, 2023 | 4:44 PM

Share

ನವದೆಹಲಿ: ಭಾರತದಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಂಸ್ಥೆಗಳು ಇಲ್ಲಿನ ಕಾನೂನನ್ನು ಪಾಲಿಸಲೇಬೇಕು. ಬಿಬಿಸಿ ಕೂಡ ಇದಕ್ಕೆ ಹೊರತಲ್ಲ ಎಂದು ಬ್ರಿಟನ್​​ನ ವಿದೇಶಾಂಗ ಸಚಿವ ಜೇಮ್ಸ್ ಕ್ಲೆವರ್ಲಿ (James Cleverly) ಅವರಿಗೆ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಹೇಳಿದ್ದಾರೆ. ಇತ್ತೀಚೆಗೆ ಬಿಬಿಸಿ (BBC) ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ (IT Raid) ನಡೆಸಿದ್ದು ವ್ಯಾಪಕ ಚರ್ಚೆಗೀಡಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ಸಾಕ್ಷ್ಯಚಿತ್ರ ನಿರ್ಮಿಸಿದ್ದಕ್ಕೆ ಐಟಿ ದಾಳಿ ನಡೆದಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಆದರೆ, ಇವುಗಳನ್ನು ಜೈಶಂಕರ್ ನಿರಾಕರಿಸಿದ್ದಾರೆ. ಜಿ20 ಸದಸ್ಯ ರಾಷ್ಟ್ರಗಳ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸುವುದಕ್ಕಾಗಿ ಭಾರತಕ್ಕೆ ಬಂದಿರುವ ಕ್ಲೆವರ್ಲಿ ಬುಧವಾರ ಬೆಳಿಗ್ಗೆ ಜೈಶಂಕರ್ ಅವರನ್ನು ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಹಲು ವಿಚಾರಗಳ ಬಗ್ಗೆ ಚರ್ಚೆ ನಡೆದಿದ್ದು, ಬಿಬಿಸಿ ಕಚೇರಿ ಮೇಲಿನ ಐಟಿ ದಾಳಿ ವಿಚಾರವೂ ಪ್ರಸ್ತಾಪವಾಗಿದೆ.

ಬಿಬಿಸಿ ಕಚೇರಿಯ ತೆರಿಗೆ ಸಮಸ್ಯೆಗೆ ಸಂಬಂಧಿಸಿದಂತೆ ಬ್ರಿಟನ್​​ ವಿದೇಶಾಂಗ ಸಚಿವರು ಇಂದು ಜೈಶಂಕರ್ ಅವರ ಗಮನ ಸೆಳೆದರು. ಅದಕ್ಕೆ ದೃಢವಾಗಿ ಉತ್ತರಿಸಿದ ಜೈಶಂಕರ್, ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ಸಂಸ್ಥೆಗಳು ಇಲ್ಲಿನ ಕಾನೂನಿಗೆ ಬದ್ಧರಾಗಿರಬೇಕು ಎಂದು ತಿಳಿಸಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಇಂದು ಬೆಳಿಗ್ಗೆ ಬ್ರಿಟನ್​​ನ ವಿದೇಶಾಂಗ ಸಚಿವ ಜೇಮ್ಸ್ ಕ್ಲೆವರ್ಲಿ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದೆ. ಉಭಯ ದೇಶಗಳ ಬಾಂಧವ್ಯದ ಬಗ್ಗೆ ಹಾಗೂ ಯುವ ವೃತ್ತಿಪರರ ಯೋಜನೆ ಬಗ್ಗೆಯೂ ಮಾತುಕತೆ ನಡೆಸಿದೆ ಎಂದು ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ತೆರಿಗೆ ವಂಚನೆ ಆರೋಪದ ಮೇಲೆ ಲಂಡನ್ ಮೂಲದ ಬಿಬಿಸಿ ಮಾಧ್ಯಮ ಸಂಸ್ಥೆಯ ದೆಹಲಿ ಕಚೇರಿ ಮೇಲೆ ಫೆಬ್ರವರಿ 14 ಹಾಗೂ 15ರಂದು ದಾಳಿ ನಡೆಸಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ನಡೆಸಿದ್ದರು. 2012ರಿಂದ ಬಿಬಿಸಿ ಕಚೇರಿಯಲ್ಲಿ ದಾಖಲಾದ ಹಣಕಾಸು ವಿವರವನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ಇದನ್ನೂ ಓದಿ: BBC: ಬಿಬಿಸಿಯಿಂದ ಎಷ್ಟು ಮೊತ್ತದ ತೆರಿಗೆ ವಂಚನೆ ಆಗಿದೆ? ಐಟಿ ಮೂಲಗಳಿಂದ ತಿಳಿದ ಮಾಹಿತಿ ಇದು

ಬಿಬಿಸಿ ಅಂಗ ಸಂಸ್ಥೆಗಳ ವರ್ಗಾವಣೆ ವೆಚ್ಚ ಮತ್ತು ಅಂತಾರಾಷ್ಟ್ರೀಯ ತೆರಿಗೆ ಪಾವತಿಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪದ ಮೇಲೆ ದಾಳಿ ನಡೆದಿತ್ತು. ಬಿಬಿಸಿಗೆ ಈ ಪ್ರಕರಣದಲ್ಲಿ ಹಿಂದೆ ಕೆಲ ಬಾರಿ ನೋಟೀಸ್ ಜಾರಿ ಮಾಡಲಾಗಿತ್ತು. ಆದರೆ ಅದಕ್ಕೆ ಸಂಸ್ಥೆ ಸಹಕರಿಸಿರಲಿಲ್ಲ. ಹೀಗಾಗಿ, ಕಚೇರಿಗಳಿಗೆ ಹೋಗಿ ಐಟಿ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುವ ಕೆಲಸ ಮಾಡಿದ್ದಾರೆ. ಇದು ದಾಳಿಯಲ್ಲ, ಪರಿಶೀಲನೆಯಷ್ಟೇ ಎಂದು ಐಟಿ ಇಲಾಖೆ ಸ್ಪಷ್ಟನೆ ನೀಡಿತ್ತು.

ಸುಮಾರು ತಿಂಗಳ ಹಿಂದೆ ಗುಜರಾತ್ ಗಲಭೆ ಘಟನೆಗಳ ಬಗ್ಗೆ ಎರಡು ಸಂಚಿಕೆಯ ಸಾಕ್ಷ್ಯಚಿತ್ರಗಳನ್ನು ಬಿಬಿಸಿ ಪ್ರಸಾರ ಮಾಡಿತ್ತು. ಗಲಭೆ ಘಟನೆಗೆ ಸರ್ಕಾರ ಹೇಗೆ ಪ್ರಚೋದನೆ ಕೊಟ್ಟಿತ್ತು, ಆಗ ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಪಾತ್ರ ಏನಿತ್ತು ಎಂಬಿತ್ಯಾದಿ ಸಂಗತಿಯನ್ನು ಕೆಲ ಸಾಕ್ಷಿಗಳನ್ನು ಉಲ್ಲೇಖಿಸಿ ಸಾಕ್ಷ್ಯಚಿತ್ರ ನಿರ್ಮಾಣ ಮಾಡಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!