BBC Tax Survey: ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಐಟಿ ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ: ಬಿಬಿಸಿ

ಬೆಳಿಗ್ಗೆ 11 ಗಂಟೆಗೆ ಐಟಿ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿ ತಲುಪಿದ್ದಾರೆ. ಬಿಬಿಸಿ ಸಿಬ್ಬಂದಿಗಳಲ್ಲಿ ತಮ್ಮ ಫೋನ್‌ಗಳನ್ನು ಆವರಣದೊಳಗೆ ನಿರ್ದಿಷ್ಟ ಸ್ಥಳದಲ್ಲಿ ಇರಿಸಲು ಐಟಿ ಅಧಿಕಾರಿಗಳು ಕೇಳಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

BBC Tax Survey: ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಐಟಿ ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡುತ್ತಿದ್ದೇವೆ: ಬಿಬಿಸಿ
ಬಿಬಿಸಿ ಕಚೇರಿ
Follow us
|

Updated on:Feb 14, 2023 | 7:45 PM

ದೆಹಲಿ ಮತ್ತು ಮುಂಬೈ ಕಚೇರಿಗಳಲ್ಲಿ ಪರಿಶೀಲನೆಗೆ ಆದಾಯ ತೆರಿಗೆ (Income Tax Department) ಇಲಾಖೆಯೊಂದಿಗೆ ನಾವು ಸಂಪೂರ್ಣವಾಗಿ ಸಹಕರಿಸುತ್ತಿದ್ದೇವೆ ಎಂದು ಬಿಬಿಸಿ (BBC) ಮಂಗಳವಾರ ಹೇಳಿದೆ. ಪರಿಸ್ಥಿತಿಯನ್ನು “ಸಾಧ್ಯವಾದಷ್ಟು ಬೇಗ” ಪರಿಹರಿಸುವ ಭರವಸೆ ಇದೆ ಎಂದು ಬಿಬಿಸಿ ನ್ಯೂಸ್‌ನ ಪತ್ರಿಕಾ ವಿಭಾಗವು ಟ್ವೀಟ್ ಮಾಡಿದೆ. ತೆರಿಗೆ ವಂಚನೆ ತನಿಖೆಯ ಭಾಗವಾಗಿರುವ ಈ ಕಾರ್ಯಾಚರಣೆಯು 2002 ರ ಗುಜರಾತ್ ಗಲಭೆಗಳ ಕುರಿತು ಎರಡು ಭಾಗಗಳ ಸಾಕ್ಷ್ಯಚಿತ್ರವನ್ನು “ಇಂಡಿಯಾ: ದಿ ಮೋದಿ ಕ್ವೆಶ್ಚನ್” ಎಂಬ ಹೆಸರಿನಿಂದ ಬಿಡುಗಡೆ ಮಾಡಿದ ವಾರಗಳ ನಂತರ ಬರುತ್ತದೆ. ಬೆಳಿಗ್ಗೆ 11 ಗಂಟೆಗೆ ಐಟಿ ಅಧಿಕಾರಿಗಳು ದೆಹಲಿ ಮತ್ತು ಮುಂಬೈನಲ್ಲಿರುವ ಬಿಬಿಸಿ ಕಚೇರಿ ತಲುಪಿದ್ದಾರೆ. ಬಿಬಿಸಿ ಸಿಬ್ಬಂದಿಗಳಲ್ಲಿ ತಮ್ಮ ಫೋನ್‌ಗಳನ್ನು ಆವರಣದೊಳಗೆ ನಿರ್ದಿಷ್ಟ ಸ್ಥಳದಲ್ಲಿ ಇರಿಸಲು ಐಟಿ ಅಧಿಕಾರಿಗಳು ಕೇಳಿಕೊಂಡರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಂಡನ್ ಪ್ರಧಾನ ಕಚೇರಿಯ ಸಾರ್ವಜನಿಕ ಪ್ರಸಾರಕ ಮತ್ತು ಅದರ ಭಾರತೀಯ ಅಂಗದ ವ್ಯವಹಾರ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಇಲಾಖೆ ಪರಿಶೀಲಿಸುತ್ತಿದೆ ಎಂದು ಅವರು ಹೇಳಿದರು.

ಐಟಿ ಇಲಾಖೆಯ ಪರಿಶೀಲನೆ ಬಿಬಿಸಿ ವಿರುದ್ಧ ಟೀಕಾ ಪ್ರಹಾರ ಮಾಡಿದ ಬಿಜೆಪಿ, ಇದು ಪತ್ರಿಕೋದ್ಯಮದ ವೇಷದಲ್ಲಿ ಅಪಪ್ರಚಾರ ಮಾಡುವುದಲ್ಲದೆ, ಭಾರತ ವಿರೋಧಿ ನಿಲುವನ್ನು ತೆಗೆದುಕೊಳ್ಳುತ್ತಿದೆ ಎಂದು ಆರೋಪಿಸಿದೆ.

ಭಾರತದಿಂದ ಕಾರ್ಯನಿರ್ವಹಿಸುವ ಯಾವುದೇ ಸಂಸ್ಥೆ ಅಥವಾ ಕಂಪನಿಯು ದೇಶದ ಕಾನೂನುಗಳು ಮತ್ತು ನಿಬಂಧನೆಗಳಿಗೆ ಬದ್ಧವಾಗಿರಬೇಕು. ನೀವು ಕಾನೂನನ್ನು ಅನುಸರಿಸುತ್ತಿದ್ದರೆ, ನೀವು ಭಯಪಡಬಾರದು. ಏಜೆನ್ಸಿಗಳು ತಮ್ಮ ಕೆಲಸ ಮಾಡಲಿ’ ಎಂದು ಬಿಜೆಪಿ ವಕ್ತಾರ ಗೌರವ್ ಭಾಟಿಯಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇದನ್ನೂ ಓದಿ: BBC: ದೆಹಲಿ, ಮುಂಬೈ ಬಿಬಿಸಿ ಕಚೇರಿಯಲ್ಲಿ ಆದಾಯ ತೆರಿಗೆ ಇಲಾಖೆ ಪರಿಶೀಲನೆ

“ಬಿಬಿಸಿ ವಿಶ್ವದ ಅತ್ಯಂತ ಭ್ರಷ್ಟ ಮತ್ತು ಕೆಟ್ಟ ಸಂಸ್ಥೆಯಾಗಿದೆ ಎಂದು ಹೇಳುವುದು ತಪ್ಪಾಗುವುದಿಲ್ಲ. ಕೆಟ್ಟ ವಿಷಯವೆಂದರೆ ಬಿಬಿಸಿಯ ಪ್ರಚಾರ ಮತ್ತು ಕಾಂಗ್ರೆಸ್‌ನ ಅಜೆಂಡಾ ಪರಸ್ಪರ ಹೊಂದಾಣಿಕೆಯಾಗಿದೆ,”ಎಂದು ಅವರು ಹೇಳಿದರು.

ಈ ಪರಿಶೀಲನೆಯು ಬಿಬಿಸಿ ಅಂಗಸಂಸ್ಥೆ ಕಂಪನಿಗಳ ಅಂತರರಾಷ್ಟ್ರೀಯ ತೆರಿಗೆ ಸಮಸ್ಯೆಗಳಿಗೆ ಸಂಬಂಧಿಸಿದೆ ಎಂದು ಮೂಲಗಳು ಸೂಚಿಸಿವೆ. ಸೆಂಟ್ರಲ್ ದೆಹಲಿಯ ಕಸ್ತೂರ್ಬಾ ಗಾಂಧಿ ಮಾರ್ಗದಲಲ್ಲಿ ಮತ್ತು ಮುಂಬೈಯ ಸಾಂತಾಕ್ರೂಜ್‌ನಲ್ಲಿ ಬಿಬಿಸಿ ಕಚೇರಿ ಇದೆ. ಪರಿಶೀಲನೆ ಭಾಗವಾಗಿ, ಆದಾಯ ತೆರಿಗೆ ಇಲಾಖೆಯು ಕಂಪನಿಯ ವ್ಯವಹಾರ ಆವರಣವನ್ನು ಮಾತ್ರ ಒಳಗೊಳ್ಳುತ್ತದೆ ಮತ್ತು ಅದರ ಪ್ರವರ್ತಕರು ಅಥವಾ ನಿರ್ದೇಶಕರ ನಿವಾಸಗಳು ಮತ್ತು ಇತರ ಸ್ಥಳಗಳ ಮೇಲೆ ದಾಳಿ ಮಾಡುವುದಿಲ್ಲ.

ಇಲಾಖೆಯು ಕಂಪನಿಯ ವ್ಯವಹಾರ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಮತ್ತು ಅದರ ಭಾರತೀಯ ಅಂಗಕ್ಕೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:41 pm, Tue, 14 February 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ