AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಸಿಕೆ ಬಗೆಗಿನ ವದಂತಿಗಳಿಗೆ ಕಿವಿಗೊಡಬೇಡಿ’ ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ

2020ರ ಕೊನೆಯ ದಿನ ಗುಜರಾತ್​ನ ರಾಜ್​ಕೋಟ್​ನಲ್ಲಿ ಏಮ್ಸ್ ಘಟಕಕ್ಕೆ ಶಿಲಾನ್ಯಾಸ ಮಾಡಿದ ಪ್ರಧಾನಿ ನರೇಂದ್ರ ಮೋದಿ, ಕೊರೊನಾ ಲಸಿಕೆ ಕುರಿತು ವದಂತಿಗಳಿಗೆ ಕೊವಿಗೊಡದಿರಲು ಮನವಿ ಮಾಡಿದರು. ಕೊರೊನಾ ವಾರಿಯರ್ಸ್​ಗಳನ್ನು ಸ್ಮರಿಸುವಂತೆ ಕರೆ ನೀಡಿದರು.

‘ಲಸಿಕೆ ಬಗೆಗಿನ ವದಂತಿಗಳಿಗೆ ಕಿವಿಗೊಡಬೇಡಿ’ ದೇಶವಾಸಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ
ರಾಜ್​ಕೋಟ್​ನ ಏಮ್ಸ್ ಘಟಕಕ್ಕೆ ವರ್ಚುವಲ್ ಮೂಲಕ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ
guruganesh bhat
| Edited By: ಸಾಧು ಶ್ರೀನಾಥ್​|

Updated on: Dec 31, 2020 | 12:19 PM

Share

ದೆಹಲಿ: ಕೊರೊನಾ ಲಸಿಕೆ ವಿತರಣೆ ಆರಂಭಗೊಂಡ ನಂತರ ಲಸಿಕೆ ಕುರಿತು ವದಂತಿಗಳು ಹೆಚ್ಚಬಹುದು. ದೇಶವಾಸಿಗಳು ದಯವಿಟ್ಟು ಲಸಿಕೆ ಕುರಿತ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದರು.

ಗುಜರಾತ್​ನ ರಾಜ್​ಕೋಟ್​ನಲ್ಲಿ ಏಮ್ಸ್​ ಘಟಕಕ್ಕೆ ವರ್ಚುವಲ್ ಮೂಲಕ ಶಿಲಾನ್ಯಾಸ ಮಾಡಿದ ಅವರು ‘ಜಗತ್ತಿನ ಅತಿ ದೊಡ್ಡ ಕೊರೊನಾ ಲಸಿಕೆ ವಿತರಣಾ ವ್ಯವಸ್ಥೆಯನ್ನು ಆರಂಭಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಮೊದಲು ಕೊರೊನಾ ಸೋಂಕಿಗೆ ‘ಔಷಧವಿಲ್ಲ, ಎಚ್ಚರಿಕೆ ಇರಲಿ’ ಎಂದು ಹೇಳುತ್ತಿದ್ದೆವು. ಆದರೆ ಈಗ, ‘ಔಷಧವಿದೆ, ಜೊತೆಗೆ ಎಚ್ಚರಿಕೆಯೂ ಇರಲಿ’ ಎಂದು ಘೋಷಿಸುತ್ತೇನೆ. ಈ ವರ್ಷದ ಕೊನೆಯ ದಿನವನ್ನು ಕೊರೊನಾ ವಾರಿಯರ್​ಗಳ ಸ್ಮರಣೆಗೆ ಮೀಸಲಿಡೋಣ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಕೊರೊನಾ ವಾರಿಯರ್​ಗಳ​ ಸ್ಮರಣೆ ಕೊರೊನಾ ವಾರಿಯರ್​ಗಳನ್ನು ಸ್ಮರಿಸಿದ ಪ್ರಧಾನಿ ನರೇಂದ್ರ ಮೋದಿ, ಆರೋಗ್ಯದ ಪ್ರಾಮುಖ್ಯತೆಯನ್ನು ಕೊರೊನಾ ಮನದಟ್ಟುಮಾಡಿದೆ. ಕೊರೊನಾ ಲಸಿಕೆ ವಿತರಣೆಯಲ್ಲಿ ಕೊರೊನಾ ವಾರಿಯರ್​ಗಳಿಗೆ ಆದ್ಯತೆ ನೀಡಲಾಗುವುದು. ಆರೋಗ್ಯ ಸೌಲಭ್ಯಗಳು ಎಲ್ಲಾ ವರ್ಗದ ಜನರಿಗೂ ಕೈಗೆಟುಕುವ ವ್ಯವಸ್ಥೆ ಏರ್ಪಡಿಸಲು ಸರ್ಕಾರ ಬದ್ಧವಾಗಿದೆ’ ಎಂದು ಮನವಿ ಮಾಡಿದರು.

ಜಾಗತಿಕವಾಗಿ ಭಾರತನ್ನು ಆರೋಗ್ಯ ಕೇಂದ್ರವಾಗಿ ರೂಪಿಸಬೇಕಿದೆ. ಆರೋಗ್ಯ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ಯೋಜನೆಗಳನ್ನು ರೂಪಿಸಬೇಕಿದೆ. ಭವಿಷ್ಯದಲ್ಲಿ ಭಾರತ ವಿಶ್ವದ ಆರೋಗ್ಯ ಕೇಂದ್ರವಾಗಲಿದೆ. 2020 ರಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಎದುರಾದ ಸವಾಲುಗಳನ್ನು ಧೈರ್ಯದಿಂದ ಎದುರಿಸಿದ್ದೇವೆ. 2021ರಲ್ಲಿ ಈ ಧೈರ್ಯವನ್ನು ಇಮ್ಮಡಿಗೊಳಿಸಿಕೊಳ್ಳಬೇಕಿದೆ ಎಂದು ಹೇಳಿದರು.

Follow Us
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?